AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ

ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ.

ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ
ಕೇಂದ್ರ ಸಚಿವ ಅಮಿತ್ ಶಾ Image Credit source: News18
TV9 Web
| Edited By: ಆಯೇಷಾ ಬಾನು|

Updated on:Dec 29, 2022 | 7:40 AM

Share

ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ(Amit Shah) ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ(Mandya University) ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ.

ಹಳೇ ಮೈಸೂರು ಟಾರ್ಗೆಟ್​.. ದಕ್ಷಿಣ ದಂಡಯಾತ್ರೆಗೆ ‘ಚಾಣಕ್ಯ’ ರೆಡಿ

ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಅಮಿತ್ ಶಾ​ ಅವರು, ಇಲ್ಲಿ ಕಮಲ ಅರಳಿಸಲೇಬೇಕು ಅಂತ ಪಣತೊಟ್ಟಂತಿದೆ. ಯಾಕಂದ್ರೆ ಈ ಹಿಂದೆ ಆಗಸ್ಟ್​ನಲ್ಲಿ ರಾಜ್ಯಕ್ಕೆ ಬಂದಿದ್ದ ಅಮಿತ್​ ಶಾ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗಾಗಿ ನಾಯಕರಿಗೆ ಟಾಸ್ಕ್​ ಕೊಟ್ಟಿದ್ರು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ರೂಟ್​ ಮ್ಯಾಪ್ ಸಿದ್ಧ ಮಾಡಬೇಕು. ನೀವೂ ಬಿಟ್ರೂ ನಾನು ಹಳೇ ಮೈಸೂರು ಭಾಗವನ್ನ ಬಿಡೋದಿಲ್ಲ ಅಂತ ಖಡಕ್​ ಸಂದೇಶ ಕೊಟ್ಟಿದ್ರಂತೆ. ಇದೇ ಕಾರಣಕ್ಕೆ ಅಲರ್ಟ್ ಆಗಿರುವ ರಾಜ್ಯ ಕೇಸರಿ ದಕ್ಷಿಣದಲ್ಲಿ ದಂಡಯಾತ್ರೆಗೆ ಸನ್ನದ್ಧವಾಗಿದೆ.

ಇದನ್ನೂ ಓದಿ: Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ

ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಸ್ಕೆಚ್​ ಹಾಕಿರುವ ಅಮಿತ್​ ಶಾ, ಡಿಸೆಂಬರ್​ 30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂಟ್ರೆಸ್ಟಿಂಗ್​ ಅಂದ್ರೆ ಮಂಡ್ಯದಲ್ಲಿ ಸಮಾವೇಶ ಮಾಡುವಂತೆ ಅಮಿತ್​ ಶಾ ಸೂಚನೆ ಕೊಟ್ಟಿದ್ದಾರಂತೆ. ಸಮಾವೇಶಕ್ಕೂ ಮುನ್ನ ಮೆಗಾ ಡೇರಿ ಉದ್ಘಾಟನೆ ಮಾಡೋ ಮೂಲಕ, ಈ ಭಾಗದ ರೈತ ಸಮುದಾಯಕ್ಕೆ ಗಾಳ ಹಾಕುವ ಪ್ಲ್ಯಾನ್ ಇದ್ಯಂತೆ. ಪ್ರಮುಖವಾಗಿ ಅಮಿತ್​ ಶಾ ಹಳೇ ಮೈಸೂರು ಭಾಗವನ್ನ ಯಾಕೆ ಟಾರ್ಗೆಟ್​ ಮಾಡಿದ್ದು ಅಂದ್ರೆ, ಉತ್ತರ ಕರ್ನಾಟಕ ಭಾಗದ ನಷ್ಟವನ್ನ ಹಳೇ ಮೈಸೂರಲ್ಲಿ ತುಂಬುವುದಕ್ಕಾಗಿಯೇ ಹಳೇ ಮೈಸೂರು ಭಾಗವನ್ನ ಟಾರ್ಗೆಟ್​ ಮಾಡಲಾಗಿದೆ. ಯಾಕಂದ್ರೆ ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕೆಲ ಸ್ಥಾನಗಳನ್ನ ಕಳೆದುಕೊಳ್ಳುವ ಭೀತಿ ಶುರುವಾಗಿದ್ಯಂತೆ. ಆ ಸ್ಥಾನಗಳನ್ನ ಹಳೇ ಮೈಸೂರು ಭಾಗದಲ್ಲಿ ತುಂಬುವ ತಂತ್ರ ಅಮಿತ್​ ಶಾ ಮಾಡಿದ್ದಾರಂತೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ 25 ಕ್ಷೇತ್ರಗಳಲ್ಲಿ ಗೆದ್ದು, ಬೇರೂರುವ ಪ್ಲ್ಯಾನ್​ ಇದೆಯಂತೆ. ಈಶಾನ್ಯ ಭಾರತದಲ್ಲಿ ಯಾವ ರೀತಿ ಪಕ್ಷ ಸಂಘಟನೆ ಆಗಿದ್ಯೋ ಅದೇ ಮಾದರಿಯಲ್ಲಿ ಗಾಳ ಹಾಕೋಕೆ ಅಮಿತ್​ ಶಾ ಪ್ಲ್ಯಾನ್​ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:40 am, Thu, 29 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು