AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ

ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ.

ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ, ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ
ಕೇಂದ್ರ ಸಚಿವ ಅಮಿತ್ ಶಾ Image Credit source: News18
TV9 Web
| Updated By: ಆಯೇಷಾ ಬಾನು|

Updated on:Dec 29, 2022 | 7:40 AM

Share

ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ(Amit Shah) ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ(Mandya University) ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ ನೀಡಿದ್ದಾರೆ. ನಾಳೆ ಮಂಡ್ಯ ವಿವಿ ಮೈದಾನದಲ್ಲಿ ಬಿಜೆಪಿ ಸಮಾವೇಶ ಆಯೋಜನೆ ಮಾಡಲಾಗಿದ್ದು ಸಮಾವೇಶದಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ಅಮಿತ್ ಶಾಗೆ Z+ ಭದ್ರತೆ ಇರುವ ಹಿನ್ನೆಲೆ ಮಂಡ್ಯ ವಿವಿಗೆ ರಜೆ ಘೋಷಿಸಲಾಗಿದೆ.

ಹಳೇ ಮೈಸೂರು ಟಾರ್ಗೆಟ್​.. ದಕ್ಷಿಣ ದಂಡಯಾತ್ರೆಗೆ ‘ಚಾಣಕ್ಯ’ ರೆಡಿ

ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಅಮಿತ್ ಶಾ​ ಅವರು, ಇಲ್ಲಿ ಕಮಲ ಅರಳಿಸಲೇಬೇಕು ಅಂತ ಪಣತೊಟ್ಟಂತಿದೆ. ಯಾಕಂದ್ರೆ ಈ ಹಿಂದೆ ಆಗಸ್ಟ್​ನಲ್ಲಿ ರಾಜ್ಯಕ್ಕೆ ಬಂದಿದ್ದ ಅಮಿತ್​ ಶಾ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗಾಗಿ ನಾಯಕರಿಗೆ ಟಾಸ್ಕ್​ ಕೊಟ್ಟಿದ್ರು. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವಿಗೆ ರೂಟ್​ ಮ್ಯಾಪ್ ಸಿದ್ಧ ಮಾಡಬೇಕು. ನೀವೂ ಬಿಟ್ರೂ ನಾನು ಹಳೇ ಮೈಸೂರು ಭಾಗವನ್ನ ಬಿಡೋದಿಲ್ಲ ಅಂತ ಖಡಕ್​ ಸಂದೇಶ ಕೊಟ್ಟಿದ್ರಂತೆ. ಇದೇ ಕಾರಣಕ್ಕೆ ಅಲರ್ಟ್ ಆಗಿರುವ ರಾಜ್ಯ ಕೇಸರಿ ದಕ್ಷಿಣದಲ್ಲಿ ದಂಡಯಾತ್ರೆಗೆ ಸನ್ನದ್ಧವಾಗಿದೆ.

ಇದನ್ನೂ ಓದಿ: Amit Shah: ಕರ್ನಾಟಕ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ಅಮಿತ್ ಶಾ 3 ದಿನ ರಾಜ್ಯ ಪ್ರವಾಸ: ಇಲ್ಲಿದೆ ವೇಳಾಪಟ್ಟಿ

ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಸ್ಕೆಚ್​ ಹಾಕಿರುವ ಅಮಿತ್​ ಶಾ, ಡಿಸೆಂಬರ್​ 30 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಇಂಟ್ರೆಸ್ಟಿಂಗ್​ ಅಂದ್ರೆ ಮಂಡ್ಯದಲ್ಲಿ ಸಮಾವೇಶ ಮಾಡುವಂತೆ ಅಮಿತ್​ ಶಾ ಸೂಚನೆ ಕೊಟ್ಟಿದ್ದಾರಂತೆ. ಸಮಾವೇಶಕ್ಕೂ ಮುನ್ನ ಮೆಗಾ ಡೇರಿ ಉದ್ಘಾಟನೆ ಮಾಡೋ ಮೂಲಕ, ಈ ಭಾಗದ ರೈತ ಸಮುದಾಯಕ್ಕೆ ಗಾಳ ಹಾಕುವ ಪ್ಲ್ಯಾನ್ ಇದ್ಯಂತೆ. ಪ್ರಮುಖವಾಗಿ ಅಮಿತ್​ ಶಾ ಹಳೇ ಮೈಸೂರು ಭಾಗವನ್ನ ಯಾಕೆ ಟಾರ್ಗೆಟ್​ ಮಾಡಿದ್ದು ಅಂದ್ರೆ, ಉತ್ತರ ಕರ್ನಾಟಕ ಭಾಗದ ನಷ್ಟವನ್ನ ಹಳೇ ಮೈಸೂರಲ್ಲಿ ತುಂಬುವುದಕ್ಕಾಗಿಯೇ ಹಳೇ ಮೈಸೂರು ಭಾಗವನ್ನ ಟಾರ್ಗೆಟ್​ ಮಾಡಲಾಗಿದೆ. ಯಾಕಂದ್ರೆ ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಕೆಲ ಸ್ಥಾನಗಳನ್ನ ಕಳೆದುಕೊಳ್ಳುವ ಭೀತಿ ಶುರುವಾಗಿದ್ಯಂತೆ. ಆ ಸ್ಥಾನಗಳನ್ನ ಹಳೇ ಮೈಸೂರು ಭಾಗದಲ್ಲಿ ತುಂಬುವ ತಂತ್ರ ಅಮಿತ್​ ಶಾ ಮಾಡಿದ್ದಾರಂತೆ. ಈ ಮೂಲಕ ಹಳೇ ಮೈಸೂರು ಭಾಗದಲ್ಲಿ 25 ಕ್ಷೇತ್ರಗಳಲ್ಲಿ ಗೆದ್ದು, ಬೇರೂರುವ ಪ್ಲ್ಯಾನ್​ ಇದೆಯಂತೆ. ಈಶಾನ್ಯ ಭಾರತದಲ್ಲಿ ಯಾವ ರೀತಿ ಪಕ್ಷ ಸಂಘಟನೆ ಆಗಿದ್ಯೋ ಅದೇ ಮಾದರಿಯಲ್ಲಿ ಗಾಳ ಹಾಕೋಕೆ ಅಮಿತ್​ ಶಾ ಪ್ಲ್ಯಾನ್​ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:40 am, Thu, 29 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ