AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಲುಕೋಟೆ ಯೋಗಾನರಸಿಂಹಸ್ವಾಮಿ ದೇಗುಲದ ಚಿಕ್ಕಗೋಪುರ ನಾಮ ವಿವಾದ ಇತ್ಯರ್ಥ

ಮೇಲುಕೋಟೆ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಚಿಕ್ಕಗೋಪುರದ ಮೇಲೆ ಪರಕಾಲ ಮಠದ ಪ್ರಭಾವದಿಂದ ಹಾಕಲಾಗಿದ್ದ ವಡಗಲೆ ನಾಮವನ್ನು ಗರುವಾರ ಸಂಜೆ ತೆರವುಗೊಳಿಸಲಾಗಿದೆ. ಪಾಂಡವಪುರ ಹಿರಿಯ ಶ್ರೇಣಿಯ ಸಿವಿಲ್ ಮತ್ತು ಜೆಎಂಎಫ್​ಸಿ ನ್ಯಾಯಾಲಯದ ಆದೇಶದಂತೆ ತೆಂಗಲೆ ನಾಮ ಅಳವಡಿಸಲಾಗಿದೆ.

ಮೇಲುಕೋಟೆ ಯೋಗಾನರಸಿಂಹಸ್ವಾಮಿ ದೇಗುಲದ ಚಿಕ್ಕಗೋಪುರ ನಾಮ ವಿವಾದ ಇತ್ಯರ್ಥ
ನಾಮ ಅಳವಡಿಕೆ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on: Jan 26, 2024 | 2:01 PM

Share

ಮಂಡ್ಯ, ಜನವರಿ 26: ಪಾಂಡವಪುರ (Pandavapur) ತಾಲೂಕಿನ ಮೇಲುಕೋಟೆ (Melakote) ಶ್ರೀ ಯೋಗಾನರಸಿಂಹಸ್ವಾಮಿ (Yoganarasimhaswamy) ದೇವಾಲಯದ ಚಿಕ್ಕಗೋಪುರಕ್ಕೆ ಗುರುವಾರ ಸಂಜೆ ತೆಂಗಲೆನಾಮ ಹಾಕಲಾಗಿದೆ. ಇದರಿಂದ 52 ವರ್ಷಗಳ ವಿವಾದ ತಾರ್ಕಿಕ ಅಂತ್ಯ ಕಂಡಿದೆ.

ಯೋಗಾನರಸಿಂಹಸ್ವಾಮಿ ದೇಗುಲದ ಚಿಕ್ಕಗೋಪುರದ ಜೀರ್ಣೋದ್ಧಾರದ ವೇಳೆ ತಹಶೀಲ್ದಾರ್ ಆದೇಶದಂತೆ ತೆಂಗಲೆನಾಮ ತೆಗೆದು ವಡಗಲೆ ನಾಮ ಹಾಕಲಾಗಿತ್ತು. ಚಿಕ್ಕಗೋಪುರಕ್ಕೆ ವಡಗಲೆ ನಾಮ ಹಾಕಿದ ವಿವಾದದ ಪ್ರಕರಣ 1973ರಲ್ಲಿ ಕೋರ್ಟ ಮೆಟ್ಟಿಲೇರಿತು. ಪಾಂಡವಪುರ ಕಿರಿಯ ಸಿವಿಲ್ ನ್ಯಾಯಾಲಯ 2001ರಲ್ಲಿ ಮೇಲುಕೋಟೆ ಯೋಗಾನರಸಿಂಹಸ್ವಾಮಿ ದೇಗುಲ ತೆಂಗಲೆ ಸಂಪ್ರದಾಯಕ್ಕೆ ಸೇರಿದ್ದು ಎಂದು ತೀರ್ಪು ನೀಡಿತು. ಆದರೆ ಚಿಕ್ಕಗೋಪುರದ ವಡಕಲೆ ನಾಮ ತೆರವಿಗೆ ಆದೇಶ ನೀಡಿರಲಿಲ್ಲ.

ಹೀಗಾಗಿ 2002ರಲ್ಲಿ ಪಾಂಡವಪುರ ಹಿರಿಯ ಶ್ರೇಣಿಯ ಸಿವಿಲ್ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತದೆ. ಜೆಎಂಎಫ್​ಸಿ ನ್ಯಾಯಾಲಯವು 22 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿ ಹಾಗೂ ದಾಖಲೆಗಳ ಪರಿಶೀಲನೆಯ ನಂತರ 29 ಪುಟಗಳ ತೀರ್ಪು ನೀಡಿ ವಡಗಲೆ ನಾಮ ತೆಗೆದು ಚಿಕ್ಕಗೋಪುರಕ್ಕೆ ತೆಂಗಲೆ ನಾಮ ಅಳವಡಿಸುವಂತೆ ಆದೇಶ ನೀಡಿದೆ.

ಜೆಎಂಎಫ್​ ಸಿವಿಲ್​ ನ್ಯಾಯಾಲಯದ ಆದೇಶದಂತೆ ಧಾರ್ಮಿಕದತ್ತಿ ಆಯುಕ್ತರು ಗುರುವಾರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್, ಪಾರುಪತ್ತೇಗಾರ ಶ್ರೀಧರ್, ಅಧ್ಯಾಪಕರಾದ ಶ್ರೀರಂಗಂಶಲ್ವನಾರಾಯಣನ್, ವಿದ್ವಾನ್ ಆನಂದಾಳ್ವಾನ್ ಸಮಕ್ಷಮದಲ್ಲಿ ಯೋಗಾನರಸಿಂಹಸ್ವಾಮಿ ದೇವಾಲಯದ ಒಳಭಾಗದ ಚಿಕ್ಕಗೋಪುರದ ಮೇಲಿದ್ದ ವಡಗಲೆ ನಾಮವನ್ನು ತೆಗೆದು ತೆಂಗಲೆ ನಾಮವನ್ನು ಅಳವಡಿಸಿದ್ದಾರೆ.

ಇದನ್ನೂ ಓದಿ: ಮೇಲುಕೋಟೆ ಚಲುವನಾರಾಯಣಸ್ವಾಮಿ ದೇವಾಲಯದ 14 ಎಕರೆ ಭೂಮಿ ಅಕ್ರಮವಾಗಿ ಪರಭಾರೆ ಆರೋಪ

ವಿವಾದವೇನು

ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯ ನಾಮದ ವಿವಾದಕ್ಕೆ ಮೈಸೂರಿನ ಮಹಾರಾಜ ಶ್ರೀಕೃಷ್ಣರಾಜ ಒಡೆಯರರು ತೆರೆ ಎಳೆದಿದ್ದರು. 5-9-1814ರಲ್ಲಿ ಹುಜೂರ್ ಹೊರಡಿಸಿ ದೇವಾಲಯ ತೆಂಗಲೆ ಸಂಪ್ರದಾಯವಾಗಿದ್ದು ದೇವರಿಗೆ ಮತ್ತು ಗೋಪುರಕ್ಕೆ ತೆಂಗಲೆ ನಾಮ ಹಾಕಬೇಕು ಎಂದು ಆದೇಶ ಹೊರಡಿಸಿದ್ದರು.

ಆದರೆ 1972ರಲ್ಲಿ ಕಲ್ಕತ್ತ ವಿಷ್ಣುದೇವಾಲಯಗಳ ಜೀರ್ಣೋದ್ಧಾರ ಟ್ಟಸ್ ಯೋಗನರಸಿಂಹನ ಬೆಟ್ಟದ ಜೀರ್ಣೋದ್ಧಾರ ಮಾಡುವ ವೇಳೆ ಪರಕಾಲಮಠದ ಪ್ರಭಾವದಿಂದ ಪಾಂಡವಪುರ ತಹಶೀಲ್ದಾರ್ 30-12-72 ರಂದು ಗೋಪುರಗಳಿಗೆ ವಡಗಲೆ ನಾಮಹಾಕಿಸಿದ್ದರು. ಇದನ್ನು ಪ್ರಶ್ನಿಸಿದ್ದ ತೆಂಗಲೆ ಸಂಪ್ರದಾಯದ ಆರ್.ಕೃಷ್ಣಯ್ಯಂಗಾರ್, ಅಳಹಿಯಮನವಾಳನ್, ಹಾಗೂ ಅಧ್ಯಾಪಕರು ನಿಯಮಬಾಹಿರವಾದ ತಹಶೀಲ್ದಾರ್ ಆದೇಶ ರದ್ದು ಮಾಡಿ ತೆಂಗಲೆ ನಾಮ ಅಳವಡಿಸಬೇಕು ಎಂದು 1973ರಲ್ಲಿ ಹೈಕೋರ್ಟ ಮೊರೆ ಹೋಗಿದ್ದರು. ಹೈಕೋರ್ಟ ಸಿವಿಲ್ ಕೋರ್ಟ್ ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವಂತೆ ಆದೇಶನೀಡಿತ್ತು.

ಅರ್ಜಿದಾರರು 1973ರಲ್ಲಿ ಹೈಕೋರ್ಟ್ ಆದೇಶದಂತೆ ಪಾಂಡವಪುರ ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಮೊರೆ ಹೋದರೆ ವಿಚಾರಣೆ ನಡೆಸಿದ ಸಿವಿಲ್ ನ್ಯಾಯಾಲಯ ಸಮಗ್ರವಾಗಿ ವಿಚಾರಣೆ ನಡೆಸಿ ಮೇಲುಕೋಟೆ ಚೆಲುವನಾರಾಯಣಸ್ವಾಮಿ ಮತ್ತು ಬೆಟ್ಟದ ಯೋಗನರಸಿಂಹಸ್ವಾಮಿ ದೇವಾಲಯಗಳು ತೆಗಲೆ ಸಂಪ್ರದಾಯಕ್ಕೆ ಸೇರಿವೆ ಎಂದು 2001ರಲ್ಲಿ ತೀರ್ಪು ನೀಡಿತು. ಆದರೆ ಯೋಗನರಸಿಂಹಸ್ವಾಮಿ ಬೆಟ್ಟದ ಚಿಕ್ಕ ಗೋಪುರದಲ್ಲಿದ್ದ ವಡಗಲೆ ನಾಮ ತೆಗೆಯಲು ಅವಕಾಶ ನೀಡಲಿಲ್ಲ.

ಕಿರಿಯ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ ಅರ್ಜಿದಾರರು 2002ರಲ್ಲಿ ಪಾಂಡವಪುರ ಹಿರಿಯ ಶ್ರೇಣಿಯ ಸಿವಿಲ್ ಜೆಎಂಎಪ್ಸಿ ನ್ಯಾಯಾಲಯದಲ್ಲಿ ಮೇಲ್ಮನವಿ ದಾಖಲಿಸಿದ್ದರು. ಹಿರಿಯ ಶ್ರೇಣಿಯ ನ್ಯಾಯಾಲಯ 22 ವರ್ಷಗಳ ಸುಧೀರ್ಘ ವಿಚಾರಣೆ ನಡೆಸಿ ಚಿಕ್ಕಗೋಪುರದ ಮೇಲೆ ಅಳವಡಿಸಿದ್ದ ವಡಗಲೆನಾಮ ತೆಗೆದು ಹಳೆಯ ಸಂಪ್ರದಾಯದ ತೆಂಗಲೆ ನಾಮ ಹಾಕಬೇಕು ಆದೇಶ ನೀಡಿದೆ. ಇದರಿಂದಾಗಿ 5 ದಶಕಗಳ ಚಿಕ್ಕಗೋಪುರದ ನಾಮದ ವಿವಾದ ತಾರ್ಕಿಕ ಅಂತ್ಯ ಕಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ