AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ವಿಸಿ ನಾಲೆಗೆ ಈಜಲು ತೆರಳಿದ್ದ ಬೆಂಗಳೂರಿನ ಐವರು ನೀರುಪಾಲು

ಮಂಡ್ಯ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ಮಂಗಳವಾರ ನಡೆದಿದೆ.

ಮಂಡ್ಯ: ವಿಸಿ ನಾಲೆಗೆ ಈಜಲು ತೆರಳಿದ್ದ ಬೆಂಗಳೂರಿನ ಐವರು ನೀರುಪಾಲು
ವಿಸಿ ನಾಲೆಗೆ ಈಜಲು ತೆರಳಿದ್ದ ಬೆಂಗಳೂರಿನ ಐವರು ನೀರುಪಾಲು
ಗಣಪತಿ ಶರ್ಮಾ
| Edited By: |

Updated on: Apr 25, 2023 | 3:14 PM

Share

ಮಂಡ್ಯ: ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಬಳಿ ವಿಸಿ ನಾಲೆಯಲ್ಲಿ (VC Channel) ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ಮಂಗಳವಾರ ನಡೆದಿದೆ. ಮೃತ ದುರ್ದೈವಿಗಳು ಬೆಂಗಳೂರಿನ ನೀಲಸಂದ್ರ ಮೂಲದ ನಿವಾಸಿಗಳಾಗಿದ್ದು, ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಎಂದು ಗುರುತಿಸಲಾಗಿದೆ. ಇವರು ರಂಜಾನ್ ಬಳಿಕ ರಜೆಗೆಂದು ಹಲ್ಲಗೆರೆಯ ಅಜ್ಜಿ ಮನೆಗೆ ಬಂದಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಮೂರು ಮೃತದೇಹಗಳನ್ನು ವಿಸಿ ನಾಲೆಯಿಂದ ಹೊರ ತೆಗೆಯಲಾಗಿದೆ. ಉಳಿದ ಎರಡು ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಬಸರಾಳು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ರಾಯಚೂರಿನಲ್ಲಿಯೂ ಇಂಥದ್ದೇ ಘಟನೆ ಸಂಭವಿಸಿದ್ದು, ಜಿಲ್ಲೆಯ ಸಿರವಾರ ತಾಲ್ಲೂಕಿನ ಮಾಚನೂರು ಗ್ರಾಮದಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬರ ಮೃತಪಟ್ಟಿದ್ದಾನೆ. ಮೃತನನ್ನು ನವಾಜ್(13) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಟಿಪ್ಪರ್ ಲಾರಿ​ ಡಿಕ್ಕಿ, ಬೈಕ್ ಸವಾರ ದುರ್ಮರಣ

ಬೆಂಗಳೂರಿನ ನಾಯಂಡಹಳ್ಳಿ ಜಂಕ್ಷನ್​ ಬಳಿ ಟಿಪ್ಪರ್ ಲಾರಿ​ ಡಿಕ್ಕಿಯಾಗಿ ಓರ್ವ ಸವಾರ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿವೆ. ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಬ್ಯಾಟರಾಯನಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ರಾಯಚೂರು ಮೂಲದ ರಫೀಕ್ (20) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪೇಂಟರ್ ಆಗಿದ್ದ ರಫೀಕ್ ಯಶವಂತಪುರದಲ್ಲಿ ವಾಸವಿದ್ದರು. ಬೆಳಗ್ಗೆ ಮನೆಗೆ ಪೇಂಟಿಂಗ್ ಮಾಡಲು ತೆರಳುತ್ತಿದ್ದರು. ಆ ಸಂದರ್ಭ ಅಪಘಾತ ಸಂಭವಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ