AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಮುನಿಸು: KRS ನೀರಿನ ಮಟ್ಟ ಕುಸಿತ; ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ

Mandya Drought Crisis: ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. KRS ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಕೃಷಿಗೆ ನೀರಿಲ್ಲದೆ ಬಿತ್ತನೆ ಕಾರ್ಯ ಅಸಾಧ್ಯವಾಗಿದೆ. 83% ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಳೆರಾಯನ ಮುನಿಸು: KRS ನೀರಿನ ಮಟ್ಟ ಕುಸಿತ; ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ
ಬರImage Credit source: tv9 kannada
ದಿಲೀಪ್​, ಚೌಡಹಳ್ಳಿ
| Edited By: |

Updated on: Jul 24, 2026 | 6:02 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದುವರಿದ ಮಳೆರಾಯನ ಮುನಿಸು
  • ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ
  • ಜೀವನಾಡಿ ಕೆಆರ್​ಎಸ್ ಜಲಾಶಯ ನೀರಿನ ಮಟ್ಟ ಕುಸಿತ

ಮಂಡ್ಯ, ಜುಲೈ 24: ಜಿಲ್ಲೆಯಲ್ಲಿ ಮಳೆರಾಯನ (rain) ಮುನಿಸು ಮುಂದುವರಿದಿದೆ. ಮುಂಗಾರು ಶುರುವಾಗಿ ಜುಲೈ ಕಳೆಯುತ್ತಾ ಬಂದರೂ ಒಂದು ಹನಿ ಮಳೆಯಿಲ್ಲದೆ ಮಂಡ್ಯದ ರೈತರು ಕಂಗಾಲಾಗಿದ್ದಾರೆ. ಜಮೀನುಗಳು ಹಚ್ಚಹಸಿರಿನಿಂದ ಕಂಗೊಳಿಸಬೇಕಿದ್ದ ಸಮಯದಲ್ಲಿ ಒಣಭೂಮಿಯಾಗಿ (drought)  ಮಾರ್ಪಟ್ಟಿವೆ. ಇತ್ತ ಕೆಆರ್​ಎಸ್ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದಿದ್ದು, ಕೃಷಿಗೆ ನೀರಿಲ್ಲದೆ ಬಿತ್ತನೆ ಕಾರ್ಯ ಸಂಪೂರ್ಣ ಸ್ತಬ್ಧಗೊಂಡಿದೆ.

ಜಿಲ್ಲೆಯಲ್ಲಿ ಬರೋಬ್ಬರಿ 83% ಮಳೆ ಕೊರತೆ

​ಮಂಡ್ಯ ಅಂದರೆ ನೆನಪಾಗುವುದು ಹಚ್ಚಹಸಿರಿನ ಕಬ್ಬಿನ ಗದ್ದೆಗಳು. ಆದರೆ ಈ ಬಾರಿ ಪರಿಸ್ಥಿತಿ ತದ್ವಿರುದ್ಧವಾಗಿದೆ. ಕಾವೇರಿ ಮಡಿಲಲ್ಲಿ ಮಳೆರಾಯನ ಕೃಪೆಯಿಲ್ಲದೆ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. ಜುಲೈ ತಿಂಗಳಲ್ಲಿ ಆರ್ಭಟಿಸಬೇಕಿದ್ದ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಮಂಡ್ಯ ಜಿಲ್ಲೆಯಲ್ಲಿ ಬರೋಬ್ಬರಿ 83% ಮಳೆ ಕೊರತೆ ಎದುರಾಗಿದೆ. ಇದರಿಂದ ಜಮೀನಿನಲ್ಲಿ ಉಳುಮೆ ಮಾಡುವುದಕ್ಕೂ ತೇವಾಂಶ ಇಲ್ಲದಂತಾಗಿದ್ದು, ರೈತರು ಆಗಸದತ್ತ ಮುಖ ಮಾಡಿ ಕುಳಿತುಕೊಳ್ಳುವಂತಾಗಿದೆ.​

ಕೃಷಿ ಚಟುವಟಿಕೆಗಿಲ್ಲ ನೀರು 

ಇನ್ನೊಂದೆಡೆ ಜೀವನಾಡಿ ಕೆಆರ್​ಎಸ್ ಜಲಾಶಯದ ಸ್ಥಿತಿ ಕೂಡ ಶೋಚನೀಯವಾಗಿದೆ. ಡ್ಯಾಂನಲ್ಲಿ ಸದ್ಯಕ್ಕೆ ಇರುವುದು ಕೇವಲ 92 ಅಡಿ ನೀರು ಮಾತ್ರ. ಇದರಲ್ಲಿ ಕೇವಲ 12 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ. ಹೀಗಾಗಿ ಸರ್ಕಾರ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಕಾಯ್ದಿರಿಸಿದ್ದು, ಆಣೆಕಟ್ಟೆಯಿಂದ ಕೃಷಿಗೆ ನೀರು ಹರಿಸುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ

ಪರಿಣಾಮ ಕಾಲುವೆ ನಂಬಿಕೊಂಡಿದ್ದ ರೈತರಿಗೆ ಬಿತ್ತನೆ ಮಾಡಲಾಗದೆ ದೊಡ್ಡ ಹೊಡೆತ ಬಿದ್ದಿದೆ. ಜಿಲ್ಲೆಯಲ್ಲಿ ಈ ಬಾರಿ 2 ಲಕ್ಷದ 6 ಸಾವಿರ ಹೆಕ್ಟೇರ್ ಕೃಷಿ ಗುರಿ ಹೊಂದಲಾಗಿತ್ತು. ಆದರೆ, ಈವರೆಗೆ ಬಿತ್ತನೆಯಾಗಿರುವುದು ಕೇವಲ 18 ಸಾವಿರ ಹೆಕ್ಟೇರ್ ಮಾತ್ರ. ಅಂದರೆ ಶೇಕಡಾ 9 ರಷ್ಟು ಮಾತ್ರ.

ಬರ ಪೀಡಿತ ಜಿಲ್ಲೆ ಘೋಷಣೆ ಒತ್ತಾಯ

ಮಂಡ್ಯ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ಈಗ ಬರದ ಛಾಯೆ ಆವರಿಸಿದೆ. ಮಳೆ ಇಲ್ಲ, ನದಿ ನೀರೂ ಸಿಗದೇ  ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯನ್ನ ಬರ ಪೀಡಿತ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಪಿಎಲ್ ಕಾರ್ಡುದಾರರಿಗೆ ಗುಡ್​ ನ್ಯೂಸ್ ನೀಡಿದ ಆಹಾರ ಸಚಿವ ಮುನಿಯಪ್ಪ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
ಬಿಡಾಡಿ ವಾಹನಗಳ ಟೋಯಿಂಗ್: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಗಳು ಜಪ್ತಿ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
‘ಸ್ವಾರ್ಥ ಬಿಡಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಕಾಕ್ರೋಚ್ ಹೋರಾಟಗಾರರಿಗೆ ಮುಲ್ಲಾಗಳು ಬಿರಿಯಾನಿ ತಿನ್ನಿಸ್ತಾವಸ್ರೆ: ಸಿಂಹ
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಸಾರಿಗೆ ಸಚಿವರ ಕ್ಷೇತ್ರದಲ್ಲೇ ಗೋದಾಮಾಗಿ ಮಾರ್ಪಟ್ಟಿರುವ ಬಸ್​​ ನಿಲ್ದಾಣ!
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ಚಾಲಕನ ಜೀವಕ್ಕಿಂತ ಬಿಯರ್ ಬಾಟಲಿಯೇ ಮುಖ್ಯವಾಯಿತೇ?
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ನೀಟ್ ಪ್ರತಿಭಟನೆ, ಮೋದಿ ಹೇಳಿಕೆ ಬಗ್ಗೆ ಪ್ರಲ್ಹಾದ್ ಜೋಶಿ ಮಹತ್ವದ ಹೇಳಿಕೆ
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು
ಬಿಯರ್ ಬಾಟಲಿಗಳಿದ್ದ ಲಾರಿ ಪಲ್ಟಿ; ಲಕ್ಷಾಂತರ ರೂ. ಮೌಲ್ಯದ ಮದ್ಯರಸ್ತೆ ಪಾಲು
ಸೂಪರ್ ಮಾಮ್ ರಿಯಾಲಿಟಿ ಶೋ ಆಡಿಷನ್ ವಿವರ ಇಲ್ಲಿದೆ
ಸೂಪರ್ ಮಾಮ್ ರಿಯಾಲಿಟಿ ಶೋ ಆಡಿಷನ್ ವಿವರ ಇಲ್ಲಿದೆ