AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆರಾಯನ ಮುನಿಸು: KRS ನೀರಿನ ಮಟ್ಟ ಕುಸಿತ; ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ

Mandya Drought Crisis: ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. KRS ಜಲಾಶಯದ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ಕೃಷಿಗೆ ನೀರಿಲ್ಲದೆ ಬಿತ್ತನೆ ಕಾರ್ಯ ಅಸಾಧ್ಯವಾಗಿದೆ. 83% ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸುವಂತೆ ರೈತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಳೆರಾಯನ ಮುನಿಸು: KRS ನೀರಿನ ಮಟ್ಟ ಕುಸಿತ; ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ
ಬರImage Credit source: tv9 kannada
ದಿಲೀಪ್​, ಚೌಡಹಳ್ಳಿ
| Edited By: |

Updated on: Jul 24, 2026 | 6:02 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಮುಂದುವರಿದ ಮಳೆರಾಯನ ಮುನಿಸು
  • ಮಂಡ್ಯದಲ್ಲಿ ಕೃಷಿ ಚಟುವಟಿಕೆ ಸಂಪೂರ್ಣ ಸ್ತಬ್ಧ
  • ಜೀವನಾಡಿ ಕೆಆರ್​ಎಸ್ ಜಲಾಶಯ ನೀರಿನ ಮಟ್ಟ ಕುಸಿತ

ಮಂಡ್ಯ, ಜುಲೈ 24: ಜಿಲ್ಲೆಯಲ್ಲಿ ಮಳೆರಾಯನ (rain) ಮುನಿಸು ಮುಂದುವರಿದಿದೆ. ಮುಂಗಾರು ಶುರುವಾಗಿ ಜುಲೈ ಕಳೆಯುತ್ತಾ ಬಂದರೂ ಒಂದು ಹನಿ ಮಳೆಯಿಲ್ಲದೆ ಮಂಡ್ಯದ ರೈತರು ಕಂಗಾಲಾಗಿದ್ದಾರೆ. ಜಮೀನುಗಳು ಹಚ್ಚಹಸಿರಿನಿಂದ ಕಂಗೊಳಿಸಬೇಕಿದ್ದ ಸಮಯದಲ್ಲಿ ಒಣಭೂಮಿಯಾಗಿ (drought)  ಮಾರ್ಪಟ್ಟಿವೆ. ಇತ್ತ ಕೆಆರ್​ಎಸ್ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದಿದ್ದು, ಕೃಷಿಗೆ ನೀರಿಲ್ಲದೆ ಬಿತ್ತನೆ ಕಾರ್ಯ ಸಂಪೂರ್ಣ ಸ್ತಬ್ಧಗೊಂಡಿದೆ.

ಜಿಲ್ಲೆಯಲ್ಲಿ ಬರೋಬ್ಬರಿ 83% ಮಳೆ ಕೊರತೆ

​ಮಂಡ್ಯ ಅಂದರೆ ನೆನಪಾಗುವುದು ಹಚ್ಚಹಸಿರಿನ ಕಬ್ಬಿನ ಗದ್ದೆಗಳು. ಆದರೆ ಈ ಬಾರಿ ಪರಿಸ್ಥಿತಿ ತದ್ವಿರುದ್ಧವಾಗಿದೆ. ಕಾವೇರಿ ಮಡಿಲಲ್ಲಿ ಮಳೆರಾಯನ ಕೃಪೆಯಿಲ್ಲದೆ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ತಬ್ಧಗೊಂಡಿವೆ. ಜುಲೈ ತಿಂಗಳಲ್ಲಿ ಆರ್ಭಟಿಸಬೇಕಿದ್ದ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು, ಮಂಡ್ಯ ಜಿಲ್ಲೆಯಲ್ಲಿ ಬರೋಬ್ಬರಿ 83% ಮಳೆ ಕೊರತೆ ಎದುರಾಗಿದೆ. ಇದರಿಂದ ಜಮೀನಿನಲ್ಲಿ ಉಳುಮೆ ಮಾಡುವುದಕ್ಕೂ ತೇವಾಂಶ ಇಲ್ಲದಂತಾಗಿದ್ದು, ರೈತರು ಆಗಸದತ್ತ ಮುಖ ಮಾಡಿ ಕುಳಿತುಕೊಳ್ಳುವಂತಾಗಿದೆ.​

ಕೃಷಿ ಚಟುವಟಿಕೆಗಿಲ್ಲ ನೀರು 

ಇನ್ನೊಂದೆಡೆ ಜೀವನಾಡಿ ಕೆಆರ್​ಎಸ್ ಜಲಾಶಯದ ಸ್ಥಿತಿ ಕೂಡ ಶೋಚನೀಯವಾಗಿದೆ. ಡ್ಯಾಂನಲ್ಲಿ ಸದ್ಯಕ್ಕೆ ಇರುವುದು ಕೇವಲ 92 ಅಡಿ ನೀರು ಮಾತ್ರ. ಇದರಲ್ಲಿ ಕೇವಲ 12 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ. ಹೀಗಾಗಿ ಸರ್ಕಾರ ಲಭ್ಯವಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಕಾಯ್ದಿರಿಸಿದ್ದು, ಆಣೆಕಟ್ಟೆಯಿಂದ ಕೃಷಿಗೆ ನೀರು ಹರಿಸುವುದಿಲ್ಲ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Karnataka Dam Water Level: ಇನ್ನೊಂದೇ ವಾರದಲ್ಲಿ ಪೂರ್ಣ ಭರ್ತಿಯಾಗಲಿದೆ ಆಲಮಟ್ಟಿ ಡ್ಯಾಂ! ಜಲಾಶಯಗಳ ನೀರಿನ ಮಟ್ಟದ ವಿವರ

ಪರಿಣಾಮ ಕಾಲುವೆ ನಂಬಿಕೊಂಡಿದ್ದ ರೈತರಿಗೆ ಬಿತ್ತನೆ ಮಾಡಲಾಗದೆ ದೊಡ್ಡ ಹೊಡೆತ ಬಿದ್ದಿದೆ. ಜಿಲ್ಲೆಯಲ್ಲಿ ಈ ಬಾರಿ 2 ಲಕ್ಷದ 6 ಸಾವಿರ ಹೆಕ್ಟೇರ್ ಕೃಷಿ ಗುರಿ ಹೊಂದಲಾಗಿತ್ತು. ಆದರೆ, ಈವರೆಗೆ ಬಿತ್ತನೆಯಾಗಿರುವುದು ಕೇವಲ 18 ಸಾವಿರ ಹೆಕ್ಟೇರ್ ಮಾತ್ರ. ಅಂದರೆ ಶೇಕಡಾ 9 ರಷ್ಟು ಮಾತ್ರ.

ಬರ ಪೀಡಿತ ಜಿಲ್ಲೆ ಘೋಷಣೆ ಒತ್ತಾಯ

ಮಂಡ್ಯ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ಈಗ ಬರದ ಛಾಯೆ ಆವರಿಸಿದೆ. ಮಳೆ ಇಲ್ಲ, ನದಿ ನೀರೂ ಸಿಗದೇ  ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯನ್ನ ಬರ ಪೀಡಿತ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಬಿಗ್​​ಬಾಸ್ ಮನೆಗೆ ಹೋಗಲು ಅಪ್ಪ-ಮಗನ ನಡುವೆಯೇ ಪೈಪೋಟಿ: ವಿಡಿಯೋ
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಹೆಬ್ಬಾಳ್ಕರ್​​ ಪರ ನಿಂತ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸೋಮಾವತಿ ನದಿಗೆ ಬಿದ್ದ ಕಾರು: ಬಂಡೆಯಿಂದಾಗಿ ಉಳಿದ ದಂಪತಿ ಜೀವ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ
ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶನ; ಓರ್ವನ ಬಂಧನ