AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಸ್ಥಳದಲ್ಲೇ ಸಾವು; ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ

ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ತಡ ರಾತ್ರಿ ಟಿಸಿ ಅಳವಡಿಸಲು ಹೋದಾಗ ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಕರೀಗೌಡ(60) ಎಂಬಾತ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

ಮಂಡ್ಯ: ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಸ್ಥಳದಲ್ಲೇ ಸಾವು; ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 28, 2023 | 10:38 AM

Share

ಮಂಡ್ಯ: ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಕರೀಗೌಡ(60) ಎಂಬಾತ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಟ್ರಾನ್ಸ್​ಫಾರ್ಮರ್ ಅಳವಡಿಸಲು ರಾತ್ರಿ ಸೆಸ್ಕ್ ಸಿಬ್ಬಂದಿ ರೈತ ಕರೀಗೌಡನನ್ನ ಕರೆದುಕೊಂಡು ಹೋಗಿದ್ದು, ಟಿಸಿ ಅಳವಡಿಸುವ ವೇಳೆ ವಿದ್ಯುತ್ ಕಂಬ ಬಿದ್ದು ಈ ದುರ್ಘಟನೆ ನಡೆದಿದೆ. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರ ಆಗ್ರಹ ಮಾಡುತ್ತಿದ್ದು, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಂಗಾರಪೇಟೆ ತಾಲೂಕಿನಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಮಹಿಳೆ

ಕೋಲಾರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಪದ್ಮಾ(35) ಎಂಬ ಮಹಿಳೆ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ವರಲಕ್ಷ್ಮೀ ಎಂಬುವವರಿಂದ ಅತ್ತಿಗಿರಿಯ ಭಾಗ್ಯ, ಸಮ್ರತಿ, ಪ್ರೇಮಾ ಎಂಬ ಸ್ನೇಹಿತೆಯರಿಗೆ $1 ಲಕ್ಷ ಸಾಲ ಕೊಡಿಸಲು ಮಧ್ಯಸ್ಥಿಕೆ ವಹಿಸಿದ್ದ ಪದ್ಮಾ, ಸಾಲ ಮರುಪಾವತಿಸದೆ ಆಕೆಯ ಸ್ನೇಹಿತೆಯರು ಪದ್ಮಾ ಮೇಲೆ ಹಾಕಿದ್ದಾರೆ. ಇದರಿಂದ ಬೇಸತ್ತ ಪದ್ಮಾ ನನ್ನ ಸಾವಿಗೆ ಸ್ನೇಹಿತೆಯರೇ ಕಾರಣ ಎಂದು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಕುರಿತು ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡ ಭಾಗ್ಯ, ಸಮ್ರತಿ, ಪ್ರೇಮಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ರಸ್ತೆ ಅಪಘಾತ ಜಾಸ್ತಿಯಾಗುವುದಕ್ಕೆ ಉತ್ತಮ ರಸ್ತೆಗಳೇ ಕಾರಣ: ಮಧ್ಯಪ್ರದೇಶದ ಬಿಜೆಪಿ ಶಾಸಕ

ಭಾರತೀಯ ಸಿಟಿ ಕ್ರಾಸ್ ಬಳಿ ಬಿಬಿಎಂಟಿಸಿ ಸರಣಿ ಅಪಘಾತ; ಓರ್ವ ಸಾವು

ಬೆಂಗಳೂರು: ಭಾರತೀಯ ಸಿಟಿ ಕ್ರಾಸ್ ಬಳಿ ನಿನ್ನೆ(ಜ.27) ಸಂಜೆ 7.30ರ ಸುಮಾರಿಗೆ ಭೀಕರ ಸರಣಿ ಅಪಘಾತವಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಂದಿದ್ದ ಮೂರು ಬೈಕ್, ಎರಡು ಕಾರ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬಸ್ ಕೆಳಗೆ ಸಿಲುಕಿದ್ದ ಆಯುಬ್ ಎಂಬಾತ ಸಾವನಪ್ಪಿದ್ದಾನೆ. ಈ ಕುರಿತು ಚಿಕ್ಕಜಾಲ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ