AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಸ್ಥಳದಲ್ಲೇ ಸಾವು; ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ

ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ತಡ ರಾತ್ರಿ ಟಿಸಿ ಅಳವಡಿಸಲು ಹೋದಾಗ ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಕರೀಗೌಡ(60) ಎಂಬಾತ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

ಮಂಡ್ಯ: ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಸ್ಥಳದಲ್ಲೇ ಸಾವು; ಪರಿಹಾರಕ್ಕಾಗಿ ಗ್ರಾಮಸ್ಥರ ಆಗ್ರಹ
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 28, 2023 | 10:38 AM

Share

ಮಂಡ್ಯ: ಮದ್ದೂರು ತಾಲೂಕಿನ ಚೆನ್ನಮ್ಮನ ಕೊಪ್ಪಲು ಗ್ರಾಮದಲ್ಲಿ ತಲೆ ಮೇಲೆ ವಿದ್ಯುತ್ ಕಂಬ ಬಿದ್ದು ರೈತ ಕರೀಗೌಡ(60) ಎಂಬಾತ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಟ್ರಾನ್ಸ್​ಫಾರ್ಮರ್ ಅಳವಡಿಸಲು ರಾತ್ರಿ ಸೆಸ್ಕ್ ಸಿಬ್ಬಂದಿ ರೈತ ಕರೀಗೌಡನನ್ನ ಕರೆದುಕೊಂಡು ಹೋಗಿದ್ದು, ಟಿಸಿ ಅಳವಡಿಸುವ ವೇಳೆ ವಿದ್ಯುತ್ ಕಂಬ ಬಿದ್ದು ಈ ದುರ್ಘಟನೆ ನಡೆದಿದೆ. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮಸ್ಥರ ಆಗ್ರಹ ಮಾಡುತ್ತಿದ್ದು, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬಂಗಾರಪೇಟೆ ತಾಲೂಕಿನಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಮಹಿಳೆ

ಕೋಲಾರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಪದ್ಮಾ(35) ಎಂಬ ಮಹಿಳೆ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಿಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ವರಲಕ್ಷ್ಮೀ ಎಂಬುವವರಿಂದ ಅತ್ತಿಗಿರಿಯ ಭಾಗ್ಯ, ಸಮ್ರತಿ, ಪ್ರೇಮಾ ಎಂಬ ಸ್ನೇಹಿತೆಯರಿಗೆ $1 ಲಕ್ಷ ಸಾಲ ಕೊಡಿಸಲು ಮಧ್ಯಸ್ಥಿಕೆ ವಹಿಸಿದ್ದ ಪದ್ಮಾ, ಸಾಲ ಮರುಪಾವತಿಸದೆ ಆಕೆಯ ಸ್ನೇಹಿತೆಯರು ಪದ್ಮಾ ಮೇಲೆ ಹಾಕಿದ್ದಾರೆ. ಇದರಿಂದ ಬೇಸತ್ತ ಪದ್ಮಾ ನನ್ನ ಸಾವಿಗೆ ಸ್ನೇಹಿತೆಯರೇ ಕಾರಣ ಎಂದು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಕುರಿತು ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡ ಭಾಗ್ಯ, ಸಮ್ರತಿ, ಪ್ರೇಮಾಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ:ರಸ್ತೆ ಅಪಘಾತ ಜಾಸ್ತಿಯಾಗುವುದಕ್ಕೆ ಉತ್ತಮ ರಸ್ತೆಗಳೇ ಕಾರಣ: ಮಧ್ಯಪ್ರದೇಶದ ಬಿಜೆಪಿ ಶಾಸಕ

ಭಾರತೀಯ ಸಿಟಿ ಕ್ರಾಸ್ ಬಳಿ ಬಿಬಿಎಂಟಿಸಿ ಸರಣಿ ಅಪಘಾತ; ಓರ್ವ ಸಾವು

ಬೆಂಗಳೂರು: ಭಾರತೀಯ ಸಿಟಿ ಕ್ರಾಸ್ ಬಳಿ ನಿನ್ನೆ(ಜ.27) ಸಂಜೆ 7.30ರ ಸುಮಾರಿಗೆ ಭೀಕರ ಸರಣಿ ಅಪಘಾತವಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ಮುಂದಿದ್ದ ಮೂರು ಬೈಕ್, ಎರಡು ಕಾರ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬಸ್ ಕೆಳಗೆ ಸಿಲುಕಿದ್ದ ಆಯುಬ್ ಎಂಬಾತ ಸಾವನಪ್ಪಿದ್ದಾನೆ. ಈ ಕುರಿತು ಚಿಕ್ಕಜಾಲ ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!