AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ: ವರ್ತೂರ್ ಸಂತೋಷ್ ವಿರುದ್ಧ ಮಂಡ್ಯ ರೈತರ ಆಕ್ರೋಶ

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ವಿರುದ್ಧ ಮತ್ತೊಂದು ವಿವಾದ ಎದ್ದಿದೆ. ವರ್ತೂರ್ ಸಂತೋಷ್ ಅವರಿಗೆ ಹಳ್ಳಿಕಾರ್ ಒಡೆಯ ಎಂಬ ಹೆಸರು ಕೊಟ್ಟ ಹಿನ್ನೆಲೆ ಆಕ್ರೋಶಗೊಂಡಿರುವ ಮಂಡ್ಯದ ರೈತರು, ವರ್ತೂರ್ ಸಂತೋಷ್​ಗೆ ಹಳ್ಳಿಕಾರ್ ಒಡೆಯ ಹೆಸರು ಇಟ್ಟಿರುವುವುದು ಸರಿಯಲ್ಲ ಎಂದಿದ್ದಾರೆ. ಅಲ್ಲದೆ, ಹಳ್ಳಿಕಾರ್ ಬಗ್ಗೆ ಚರ್ಚಾಗೋಷ್ಟಿ ಏರ್ಪಡಿಸಿ ವರ್ತೂರ್​ ಸಂತೋಷ್​ಗೂ ಆಹ್ವಾನ ನೀಡಿದ್ದಾರೆ.

ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ: ವರ್ತೂರ್ ಸಂತೋಷ್ ವಿರುದ್ಧ ಮಂಡ್ಯ ರೈತರ ಆಕ್ರೋಶ
ವರ್ತೂರ್ ಸಂತೋಷ್
Follow us
ಪ್ರಶಾಂತ್​ ಬಿ.
| Updated By: Rakesh Nayak Manchi

Updated on: Dec 08, 2023 | 5:27 PM

ಮಂಡ್ಯ, ಡಿ.8: ಹುಲಿ ಉಗುರು ಧರಿಸಿ ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ (Varthur Santhosh) ಅವರ ವಿವಾಹದ ವಿಚಾರ ಜೋರಾಗಿಯೇ ಚರ್ಚೆ ನಡೆದಿತ್ತು. ಇದೀಗ ಅವರಿಗೆ ಹಳ್ಳಿಕಾರ್ ಒಡೆಯ ಎಂಬ ಹೆಸರು ಕೊಟ್ಟ ಹಿನ್ನೆಲೆ ಆ ತಳಿಯ ಗೋವು ಸಾಕಾಣಿಕೆ ಮಾಡುತ್ತಿರುವ ರೈತರು ಸಿಡಿದೆದ್ದಿದ್ದಾರೆ.

ಹಳ್ಳಿಕಾರ್ ತಳಿ ಹೆಸರಿಗೆ ವರ್ತೂರ್ ಸಂತೋಷ್ ಅವರಿಂದ ಅಪಮಾನ ಆಗಿದೆ ಎಂದು ಆರೋಪಿಸಿರುವ ರೈತರು, ಹಳ್ಳಿಕಾರ್ ಒಡೆಯರ್ ಹೆಸರಿಗೆ ಸ್ಪಷ್ಟೀಕರಣ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಮಂಡ್ಯದ ಸಿಲ್ವರ್ ಜ್ಯೂಬಲಿ ಪಾರ್ಕ್​ನಲ್ಲಿ ಡಿ.10 ರಂದು ಹಳ್ಳಿಕಾರ್ ಬಗ್ಗೆ ಚರ್ಚಾಗೋಷ್ಟಿ ಏರ್ಪಡಿಸಿದ ರೈತರು, ವರ್ತೂರ್ ಸಂತೋಷ್​ಗೂ ಆಹ್ವಾನ ಕೊಟ್ಟಿದ್ದಾರೆ.

ಹಳ್ಳಿಕಾರ್ ಹೆಸರು ಒಂದು ಇತಿಹಾಸ ಇರುವಂತಹದ್ದು. ಅಂತಹ ಹೆಸರಿಗೆ ಅಪಮಾನ ಮಾಡುವುದು ಸರಿಯಲ್ಲ. ತಲೆಮಾರಿನಿಂದ ನಮ್ಮ ಹಿರಿಯರು ಹಳ್ಳಿಕಾರ್ ಗೋ ತಳಿ ಬೆಳೆಸಿಕೊಂಡು ಬಂದಿದ್ದಾರೆ. ಹಳ್ಳಿಕಾರ್ ಒಡೆಯ ಎನ್ನುವುದಕ್ಕೆ ಒಂದು ಮಹತ್ವ ಇದೆ ಎಂದು ಮಂಡ್ಯದ ರೈತ ರವಿ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Karnataka Breaking Kannada News Highlights: ನಟರಿಗೆ ನೋಟಿಸ್​ ಮಾತ್ರ, ಆದರೆ ವರ್ತೂರ್​ ಸಂತೋಷ್​ ಬಂಧನ ಯಾಕೆ? ಅಭಿಮಾನಿಗಳ ಆಕ್ರೋಶ

ಹಳ್ಳಿಕಾರ್ ಗೋವುಗಳನ್ನ ಸಾಕುತ್ತಿರುವ ಮೂಲ ರೈತರು ಎಷ್ಟು ಜನ ಇದ್ದಾರೆ? ವರ್ತೂರ್ ಸಂತೋಷ್ ಅವರಿಗೆ ಹಳ್ಳಿಕಾರ್ ಒಡೆಯ ಹೆಸರು ಇಟ್ಟಿರುವುವುದು ಸರಿಯಲ್ಲ. ವರ್ತೂರ್ ಸಂತೋಷ್ ಅವರು ಒಬ್ಬ ಹಳ್ಳಿಕಾರ್ ಗೋವು ಸಾಕಾಣಿಕೆದಾರ ಅಷ್ಟೇ. ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ ಎಂದರು.

ಕೆಲವು ಯೂಟ್ಯೂಬ್​ಗಳಲ್ಲಿ ಹಳ್ಳಿಕಾರ್ ಒಡೆಯ ಎಂದು ಬಿಂಬಿಸುವುದು ತಪ್ಪು. ಮಂಡ್ಯದಲ್ಲಿ ಹಳ್ಳಿಕಾರ್ ತಳಿಯ ಬಗ್ಗೆ ಚರ್ಚಾ ವೇದಿಕೆ ಸಿದ್ದಪಡಿಸಿದ್ದೇವೆ. ಹಿರಿಯ ರೈತರು, ಪಶು ವೈದ್ಯರು, ವಿಜ್ಞಾನಿಗಳು, ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ತಕ್ಷಣವೇ ಸ್ಪಷ್ಟೀಕರಣ ನೀಡಿ ಆ ಹೆಸರನ್ನು ಬಳಸದೇ ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್