AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ: ವರ್ತೂರ್ ಸಂತೋಷ್ ವಿರುದ್ಧ ಮಂಡ್ಯ ರೈತರ ಆಕ್ರೋಶ

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ವಿರುದ್ಧ ಮತ್ತೊಂದು ವಿವಾದ ಎದ್ದಿದೆ. ವರ್ತೂರ್ ಸಂತೋಷ್ ಅವರಿಗೆ ಹಳ್ಳಿಕಾರ್ ಒಡೆಯ ಎಂಬ ಹೆಸರು ಕೊಟ್ಟ ಹಿನ್ನೆಲೆ ಆಕ್ರೋಶಗೊಂಡಿರುವ ಮಂಡ್ಯದ ರೈತರು, ವರ್ತೂರ್ ಸಂತೋಷ್​ಗೆ ಹಳ್ಳಿಕಾರ್ ಒಡೆಯ ಹೆಸರು ಇಟ್ಟಿರುವುವುದು ಸರಿಯಲ್ಲ ಎಂದಿದ್ದಾರೆ. ಅಲ್ಲದೆ, ಹಳ್ಳಿಕಾರ್ ಬಗ್ಗೆ ಚರ್ಚಾಗೋಷ್ಟಿ ಏರ್ಪಡಿಸಿ ವರ್ತೂರ್​ ಸಂತೋಷ್​ಗೂ ಆಹ್ವಾನ ನೀಡಿದ್ದಾರೆ.

ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ: ವರ್ತೂರ್ ಸಂತೋಷ್ ವಿರುದ್ಧ ಮಂಡ್ಯ ರೈತರ ಆಕ್ರೋಶ
ವರ್ತೂರ್ ಸಂತೋಷ್
ಪ್ರಶಾಂತ್​ ಬಿ.
| Edited By: |

Updated on: Dec 08, 2023 | 5:27 PM

Share

ಮಂಡ್ಯ, ಡಿ.8: ಹುಲಿ ಉಗುರು ಧರಿಸಿ ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ (Varthur Santhosh) ಅವರ ವಿವಾಹದ ವಿಚಾರ ಜೋರಾಗಿಯೇ ಚರ್ಚೆ ನಡೆದಿತ್ತು. ಇದೀಗ ಅವರಿಗೆ ಹಳ್ಳಿಕಾರ್ ಒಡೆಯ ಎಂಬ ಹೆಸರು ಕೊಟ್ಟ ಹಿನ್ನೆಲೆ ಆ ತಳಿಯ ಗೋವು ಸಾಕಾಣಿಕೆ ಮಾಡುತ್ತಿರುವ ರೈತರು ಸಿಡಿದೆದ್ದಿದ್ದಾರೆ.

ಹಳ್ಳಿಕಾರ್ ತಳಿ ಹೆಸರಿಗೆ ವರ್ತೂರ್ ಸಂತೋಷ್ ಅವರಿಂದ ಅಪಮಾನ ಆಗಿದೆ ಎಂದು ಆರೋಪಿಸಿರುವ ರೈತರು, ಹಳ್ಳಿಕಾರ್ ಒಡೆಯರ್ ಹೆಸರಿಗೆ ಸ್ಪಷ್ಟೀಕರಣ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಮಂಡ್ಯದ ಸಿಲ್ವರ್ ಜ್ಯೂಬಲಿ ಪಾರ್ಕ್​ನಲ್ಲಿ ಡಿ.10 ರಂದು ಹಳ್ಳಿಕಾರ್ ಬಗ್ಗೆ ಚರ್ಚಾಗೋಷ್ಟಿ ಏರ್ಪಡಿಸಿದ ರೈತರು, ವರ್ತೂರ್ ಸಂತೋಷ್​ಗೂ ಆಹ್ವಾನ ಕೊಟ್ಟಿದ್ದಾರೆ.

ಹಳ್ಳಿಕಾರ್ ಹೆಸರು ಒಂದು ಇತಿಹಾಸ ಇರುವಂತಹದ್ದು. ಅಂತಹ ಹೆಸರಿಗೆ ಅಪಮಾನ ಮಾಡುವುದು ಸರಿಯಲ್ಲ. ತಲೆಮಾರಿನಿಂದ ನಮ್ಮ ಹಿರಿಯರು ಹಳ್ಳಿಕಾರ್ ಗೋ ತಳಿ ಬೆಳೆಸಿಕೊಂಡು ಬಂದಿದ್ದಾರೆ. ಹಳ್ಳಿಕಾರ್ ಒಡೆಯ ಎನ್ನುವುದಕ್ಕೆ ಒಂದು ಮಹತ್ವ ಇದೆ ಎಂದು ಮಂಡ್ಯದ ರೈತ ರವಿ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Karnataka Breaking Kannada News Highlights: ನಟರಿಗೆ ನೋಟಿಸ್​ ಮಾತ್ರ, ಆದರೆ ವರ್ತೂರ್​ ಸಂತೋಷ್​ ಬಂಧನ ಯಾಕೆ? ಅಭಿಮಾನಿಗಳ ಆಕ್ರೋಶ

ಹಳ್ಳಿಕಾರ್ ಗೋವುಗಳನ್ನ ಸಾಕುತ್ತಿರುವ ಮೂಲ ರೈತರು ಎಷ್ಟು ಜನ ಇದ್ದಾರೆ? ವರ್ತೂರ್ ಸಂತೋಷ್ ಅವರಿಗೆ ಹಳ್ಳಿಕಾರ್ ಒಡೆಯ ಹೆಸರು ಇಟ್ಟಿರುವುವುದು ಸರಿಯಲ್ಲ. ವರ್ತೂರ್ ಸಂತೋಷ್ ಅವರು ಒಬ್ಬ ಹಳ್ಳಿಕಾರ್ ಗೋವು ಸಾಕಾಣಿಕೆದಾರ ಅಷ್ಟೇ. ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ ಎಂದರು.

ಕೆಲವು ಯೂಟ್ಯೂಬ್​ಗಳಲ್ಲಿ ಹಳ್ಳಿಕಾರ್ ಒಡೆಯ ಎಂದು ಬಿಂಬಿಸುವುದು ತಪ್ಪು. ಮಂಡ್ಯದಲ್ಲಿ ಹಳ್ಳಿಕಾರ್ ತಳಿಯ ಬಗ್ಗೆ ಚರ್ಚಾ ವೇದಿಕೆ ಸಿದ್ದಪಡಿಸಿದ್ದೇವೆ. ಹಿರಿಯ ರೈತರು, ಪಶು ವೈದ್ಯರು, ವಿಜ್ಞಾನಿಗಳು, ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ತಕ್ಷಣವೇ ಸ್ಪಷ್ಟೀಕರಣ ನೀಡಿ ಆ ಹೆಸರನ್ನು ಬಳಸದೇ ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!