AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ: ವರ್ತೂರ್ ಸಂತೋಷ್ ವಿರುದ್ಧ ಮಂಡ್ಯ ರೈತರ ಆಕ್ರೋಶ

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ವಿರುದ್ಧ ಮತ್ತೊಂದು ವಿವಾದ ಎದ್ದಿದೆ. ವರ್ತೂರ್ ಸಂತೋಷ್ ಅವರಿಗೆ ಹಳ್ಳಿಕಾರ್ ಒಡೆಯ ಎಂಬ ಹೆಸರು ಕೊಟ್ಟ ಹಿನ್ನೆಲೆ ಆಕ್ರೋಶಗೊಂಡಿರುವ ಮಂಡ್ಯದ ರೈತರು, ವರ್ತೂರ್ ಸಂತೋಷ್​ಗೆ ಹಳ್ಳಿಕಾರ್ ಒಡೆಯ ಹೆಸರು ಇಟ್ಟಿರುವುವುದು ಸರಿಯಲ್ಲ ಎಂದಿದ್ದಾರೆ. ಅಲ್ಲದೆ, ಹಳ್ಳಿಕಾರ್ ಬಗ್ಗೆ ಚರ್ಚಾಗೋಷ್ಟಿ ಏರ್ಪಡಿಸಿ ವರ್ತೂರ್​ ಸಂತೋಷ್​ಗೂ ಆಹ್ವಾನ ನೀಡಿದ್ದಾರೆ.

ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ: ವರ್ತೂರ್ ಸಂತೋಷ್ ವಿರುದ್ಧ ಮಂಡ್ಯ ರೈತರ ಆಕ್ರೋಶ
ವರ್ತೂರ್ ಸಂತೋಷ್
ಪ್ರಶಾಂತ್​ ಬಿ.
| Edited By: Rakesh Nayak Manchi|

Updated on: Dec 08, 2023 | 5:27 PM

Share

ಮಂಡ್ಯ, ಡಿ.8: ಹುಲಿ ಉಗುರು ಧರಿಸಿ ಬಂಧನಕ್ಕೊಳಗಾಗಿ ಬಿಡುಗಡೆಯಾದ ನಂತರ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ (Varthur Santhosh) ಅವರ ವಿವಾಹದ ವಿಚಾರ ಜೋರಾಗಿಯೇ ಚರ್ಚೆ ನಡೆದಿತ್ತು. ಇದೀಗ ಅವರಿಗೆ ಹಳ್ಳಿಕಾರ್ ಒಡೆಯ ಎಂಬ ಹೆಸರು ಕೊಟ್ಟ ಹಿನ್ನೆಲೆ ಆ ತಳಿಯ ಗೋವು ಸಾಕಾಣಿಕೆ ಮಾಡುತ್ತಿರುವ ರೈತರು ಸಿಡಿದೆದ್ದಿದ್ದಾರೆ.

ಹಳ್ಳಿಕಾರ್ ತಳಿ ಹೆಸರಿಗೆ ವರ್ತೂರ್ ಸಂತೋಷ್ ಅವರಿಂದ ಅಪಮಾನ ಆಗಿದೆ ಎಂದು ಆರೋಪಿಸಿರುವ ರೈತರು, ಹಳ್ಳಿಕಾರ್ ಒಡೆಯರ್ ಹೆಸರಿಗೆ ಸ್ಪಷ್ಟೀಕರಣ ನೀಡುವಂತೆ ಆಗ್ರಹಿಸಿದ್ದಾರೆ. ಅಲ್ಲದೆ, ಮಂಡ್ಯದ ಸಿಲ್ವರ್ ಜ್ಯೂಬಲಿ ಪಾರ್ಕ್​ನಲ್ಲಿ ಡಿ.10 ರಂದು ಹಳ್ಳಿಕಾರ್ ಬಗ್ಗೆ ಚರ್ಚಾಗೋಷ್ಟಿ ಏರ್ಪಡಿಸಿದ ರೈತರು, ವರ್ತೂರ್ ಸಂತೋಷ್​ಗೂ ಆಹ್ವಾನ ಕೊಟ್ಟಿದ್ದಾರೆ.

ಹಳ್ಳಿಕಾರ್ ಹೆಸರು ಒಂದು ಇತಿಹಾಸ ಇರುವಂತಹದ್ದು. ಅಂತಹ ಹೆಸರಿಗೆ ಅಪಮಾನ ಮಾಡುವುದು ಸರಿಯಲ್ಲ. ತಲೆಮಾರಿನಿಂದ ನಮ್ಮ ಹಿರಿಯರು ಹಳ್ಳಿಕಾರ್ ಗೋ ತಳಿ ಬೆಳೆಸಿಕೊಂಡು ಬಂದಿದ್ದಾರೆ. ಹಳ್ಳಿಕಾರ್ ಒಡೆಯ ಎನ್ನುವುದಕ್ಕೆ ಒಂದು ಮಹತ್ವ ಇದೆ ಎಂದು ಮಂಡ್ಯದ ರೈತ ರವಿ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: Karnataka Breaking Kannada News Highlights: ನಟರಿಗೆ ನೋಟಿಸ್​ ಮಾತ್ರ, ಆದರೆ ವರ್ತೂರ್​ ಸಂತೋಷ್​ ಬಂಧನ ಯಾಕೆ? ಅಭಿಮಾನಿಗಳ ಆಕ್ರೋಶ

ಹಳ್ಳಿಕಾರ್ ಗೋವುಗಳನ್ನ ಸಾಕುತ್ತಿರುವ ಮೂಲ ರೈತರು ಎಷ್ಟು ಜನ ಇದ್ದಾರೆ? ವರ್ತೂರ್ ಸಂತೋಷ್ ಅವರಿಗೆ ಹಳ್ಳಿಕಾರ್ ಒಡೆಯ ಹೆಸರು ಇಟ್ಟಿರುವುವುದು ಸರಿಯಲ್ಲ. ವರ್ತೂರ್ ಸಂತೋಷ್ ಅವರು ಒಬ್ಬ ಹಳ್ಳಿಕಾರ್ ಗೋವು ಸಾಕಾಣಿಕೆದಾರ ಅಷ್ಟೇ. ಅವರಿಗೆ ಅವರೇ ಹಳ್ಳಿಕಾರ್ ಒಡೆಯ ಅನ್ನೋದು ಸರಿಯಲ್ಲ ಎಂದರು.

ಕೆಲವು ಯೂಟ್ಯೂಬ್​ಗಳಲ್ಲಿ ಹಳ್ಳಿಕಾರ್ ಒಡೆಯ ಎಂದು ಬಿಂಬಿಸುವುದು ತಪ್ಪು. ಮಂಡ್ಯದಲ್ಲಿ ಹಳ್ಳಿಕಾರ್ ತಳಿಯ ಬಗ್ಗೆ ಚರ್ಚಾ ವೇದಿಕೆ ಸಿದ್ದಪಡಿಸಿದ್ದೇವೆ. ಹಿರಿಯ ರೈತರು, ಪಶು ವೈದ್ಯರು, ವಿಜ್ಞಾನಿಗಳು, ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ತಕ್ಷಣವೇ ಸ್ಪಷ್ಟೀಕರಣ ನೀಡಿ ಆ ಹೆಸರನ್ನು ಬಳಸದೇ ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?