AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್​

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿಯಾಗಿರುವ ಶಿವಣ್ಣ ಎಂಬುವರು ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದಾರೆ. ಮಂಡ್ಯ ಕಾರಾಗೃಹದ ಸಿಬ್ಬಂದಿ ಬಟ್ಟೆ ಇದ್ದ ಬ್ಯಾಗ್​ ಅನ್ನು ಪರಿಶೀಲಿಸಿದ್ದಾರೆ. ಆಗ, ಬ್ಯಾಗ್​​ನಲ್ಲಿ 20 ಗ್ರಾಂ ಗಾಂಜಾ ಪತ್ತೆಯಾಗಿದೆ. ಮುಂದೇನಾಯ್ತು? ಈ ಸ್ಟೋರಿ ಓದಿ.

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್​
ಪುತ್ರ ಮಧುಸೂದನ್​, ತಂದೆ ಶಿವಣ್ಣ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on:Dec 13, 2024 | 10:18 AM

Share

ಮಂಡ್ಯ, ಡಿಸೆಂಬರ್​ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್​ ಆಗಿದ್ದಾರೆ. ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್​ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ​ತಂದೆ ಶಿವಣ್ಣ ಅವರಿಗೆ ಕರೆ ಮಾಡಿ “ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್​ ಕೊಡುತ್ತಾರೆ, ತೆಗೆದುಕೊಂಡು ಬಾ” ಎಂದು ಹೇಳಿದ್ದಾನೆ.

ಮಗನ ಮಾತಿನಂತೆ ಶಿವಣ್ಣ ಅವರು ಮಳ್ಳವಳ್ಳಿಯಲ್ಲಿ ಅಪರಿಚಿತನಿಂದ ಬಟ್ಟೆ ಇದ್ದ ಬ್ಯಾಗ್​ ಪಡೆದು, ಮಂಡ್ಯದ ಕಾರಾಗೃಹಕ್ಕೆ ಬರುತ್ತಾರೆ. ಕಾರಾಗೃಹದಲ್ಲಿನ ಜೈಲು ಸಿಬ್ಬಂದಿ ಬ್ಯಾಗ್​ ಅನ್ನು ಪರಿಶೀಲನೆ ನಡೆಸಿದಾಗ 20 ಗ್ರಾಂ ಗಾಂಜಾ ಪತ್ತೆಯಾಗಿದೆ.

ತಕ್ಷಣ ಸಿಬ್ಬಂದಿ ಶಿವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಗನ ಸೂಚನೆಯಂತೆ ಬ್ಯಾಗ್ ತಂದಿರುವುದಾಗಿ ಶಿವಣ್ಣ ಹೇಳಿದ್ದಾರೆ. ಬಳಿಕ, ಪೊಲೀಸರು ಎನ್​ಡಿಪಿಎಸ್ ಕಾಯ್ದೆಯಡಿ ಶಿವಣ್ಣ ಅವರನ್ನು ಬಂಧಿಸಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:10 am, Fri, 13 December 24

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ