Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್​

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿಯಾಗಿರುವ ಶಿವಣ್ಣ ಎಂಬುವರು ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿದ್ದಾರೆ. ಮಂಡ್ಯ ಕಾರಾಗೃಹದ ಸಿಬ್ಬಂದಿ ಬಟ್ಟೆ ಇದ್ದ ಬ್ಯಾಗ್​ ಅನ್ನು ಪರಿಶೀಲಿಸಿದ್ದಾರೆ. ಆಗ, ಬ್ಯಾಗ್​​ನಲ್ಲಿ 20 ಗ್ರಾಂ ಗಾಂಜಾ ಪತ್ತೆಯಾಗಿದೆ. ಮುಂದೇನಾಯ್ತು? ಈ ಸ್ಟೋರಿ ಓದಿ.

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್​
ಪುತ್ರ ಮಧುಸೂದನ್​, ತಂದೆ ಶಿವಣ್ಣ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Dec 13, 2024 | 10:18 AM

ಮಂಡ್ಯ, ಡಿಸೆಂಬರ್​ 13: ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್​ ಆಗಿದ್ದಾರೆ. ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್​ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ​ತಂದೆ ಶಿವಣ್ಣ ಅವರಿಗೆ ಕರೆ ಮಾಡಿ “ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್​ ಕೊಡುತ್ತಾರೆ, ತೆಗೆದುಕೊಂಡು ಬಾ” ಎಂದು ಹೇಳಿದ್ದಾನೆ.

ಮಗನ ಮಾತಿನಂತೆ ಶಿವಣ್ಣ ಅವರು ಮಳ್ಳವಳ್ಳಿಯಲ್ಲಿ ಅಪರಿಚಿತನಿಂದ ಬಟ್ಟೆ ಇದ್ದ ಬ್ಯಾಗ್​ ಪಡೆದು, ಮಂಡ್ಯದ ಕಾರಾಗೃಹಕ್ಕೆ ಬರುತ್ತಾರೆ. ಕಾರಾಗೃಹದಲ್ಲಿನ ಜೈಲು ಸಿಬ್ಬಂದಿ ಬ್ಯಾಗ್​ ಅನ್ನು ಪರಿಶೀಲನೆ ನಡೆಸಿದಾಗ 20 ಗ್ರಾಂ ಗಾಂಜಾ ಪತ್ತೆಯಾಗಿದೆ.

ತಕ್ಷಣ ಸಿಬ್ಬಂದಿ ಶಿವಣ್ಣ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಗನ ಸೂಚನೆಯಂತೆ ಬ್ಯಾಗ್ ತಂದಿರುವುದಾಗಿ ಶಿವಣ್ಣ ಹೇಳಿದ್ದಾರೆ. ಬಳಿಕ, ಪೊಲೀಸರು ಎನ್​ಡಿಪಿಎಸ್ ಕಾಯ್ದೆಯಡಿ ಶಿವಣ್ಣ ಅವರನ್ನು ಬಂಧಿಸಿದ್ದಾರೆ. ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:10 am, Fri, 13 December 24

ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್