AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಹೆಣ್ಣು ಭ್ರೂಣ ಪತ್ತೆ, ಹತ್ಯೆ: ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರು ಮಂದಿ ಬಂಧನ

ಒಂಟಿ ಮನೆ, ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10 ಸಾವಿರದಿಂದ 50 ಸಾವಿರದವರೆಗೂ ಚಾರ್ಜ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದೆ. ಪ್ರಕರಣದಲ್ಲಿ ಕೆಲ ವೈದ್ಯರು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೂ ಖಾಕಿ ಮುಂದಾಗಿದೆ.

ಮಂಡ್ಯ ಹೆಣ್ಣು ಭ್ರೂಣ ಪತ್ತೆ, ಹತ್ಯೆ: ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರು ಮಂದಿ ಬಂಧನ
ಸಾಂದರ್ಭಿಕ ಚಿತ್ರ
ಪ್ರಶಾಂತ್​ ಬಿ.
| Edited By: |

Updated on:Sep 11, 2024 | 9:55 AM

Share

ಮಂಡ್ಯ, ಸೆ.11: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ (Female Fetus) ಸಂಬಂಧಿಸಿ ಪ್ರತಿ ದಿನ ಒಬ್ಬೊಬ್ಬರೇ ಆರೋಪಿಗಳು ಖಾಕಿ ಬಲೆಗೆ ಬೀಳುತ್ತಿದ್ದಾರೆ. ಮತ್ತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಂಟಿ ಮನೆ, ಕಾರಿನಲ್ಲಿ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಒಂದು ಹೆಣ್ಣುಭ್ರೂಣ ಹತ್ಯೆಗೆ 10 ಸಾವಿರದಿಂದ 50 ಸಾವಿರದವರೆಗೂ ಚಾರ್ಜ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ಆಕ್ಟೀವ್ ಆಗಿದ್ದ ಈ ತಂಡ, ಕಳೆದ ಹಲವು ವರ್ಷಗಳಿಂದ ಕರಾಳದಂಧೆ ನಡೆಸುತ್ತಿತ್ತು. ಆರೋಪಿಗಳು ಪೊಲೀಸ್, ಆರೋಗ್ಯ ಇಲಾಖೆಯ ಕಣ್ತಪ್ಪಿಸಿ ದಂಧೆ ನಡೆಸುತ್ತಿದ್ದರು. ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಪಟೇಲ್, ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್, ಹರಳಹಳ್ಳಿಯ ಜಬ್ಬರ್, ಕೆ.ಆರ್. ನಗರದ ಶಂಕರ್ ಬಂಧಿತ ಆರೋಪಿಗಳು. ಬಂಧಿತರಿಂದ ಸ್ಕ್ಸಾನಿಂಗ್ ಮಶೀನ್, ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಇದುವರೆಗೂ 50ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ಮಾಡಿರುವುದು ಬಯಲಾಗಿದೆ.

ಆಸ್ಪತ್ರೆಗೆ ಸೋನೋಗ್ರಫಿ ಟೆಸ್ಟ್ ಮಾಡಿಸಿಕೊಳ್ಳಲು ಬರುವವರನ್ನೇ ಈ ಆರೋಪಿಗಳು ಟಾರ್ಗೆಟ್ ಮಾಡುತ್ತಿದ್ದರು. ವಾರದ ಹಿಂದೆ ಕಿಂಗ್ ಪಿನ್ ಅಭಿಷೇಕ್ ಹಾಗೂ ವಿರೇಶ್ ಸೇರಿ 12 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಬಳಿಕ ಮತ್ತೆ 6 ಜನರನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ 6 ಜನರನ್ನು ಬಂಧಿಸಲಾಗಿದೆ.

ಪ್ರಕರಣ ಭೇದಿಸಲು ಏಳು ತಂಡ ರಚನೆ ಮಾಡಲಾಗಿದೆ. ಪ್ರಕರಣದಲ್ಲಿ ಕೆಲ ವೈದ್ಯರು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೂ ಖಾಕಿ ಮುಂದಾಗಿದೆ. ಮೇಲುಕೋಟೆ, ಪಾಂಡವಪುರ, ಬೆಳ್ಳೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಘಟಕ ಪರೀಕ್ಷೆಗಳಿಗೂ ವೆಬ್ ಕಾಸ್ಟಿಂಗ್ ಅಸ್ತ್ರ ಪ್ರಯೋಗ; ಸರ್ಕಾರಿ ಶಾಲಾ ಶಿಕ್ಷಕರ ಪರದಾಟಕ್ಕೆ ಕಾರಣಾಯ್ತು ಇಲಾಖೆ ನಡೆ

ಪ್ರಕರಣ ಹಿನ್ನೆಲೆ

ಮೊದಲಿಗೆ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ ಹಲವು ಮಂದಿಯನ್ನ ಬಂಧಿಸಿದ್ದರು. ಆನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ಬಂಧನವಾಗದೇ ತಲೆ ಮರೆಸಿಕೊಂಡಿದ್ದ. ಆನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲೆಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಬೇಧಿಸಿ ಹಲವು ಆರೋಪಿಗಳನ್ನ ಬಂಧನ ಮಾಡಲಾಗಿತ್ತು. ಆದರೆ ಐದು ಪ್ರಕರಣಗಳಲ್ಲಿ ಸಿಐಡಿ ಪೊಲೀಸರು ಸೇರಿದಂತೆ ಮಂಡ್ಯ ಜಿಲ್ಲೆಯ ಪೊಲೀಸರಿಗೆ ಚಳ್ಳೆಯನ್ನು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನ ಮುಂದುವರೆಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಕೊನೆಗೂ ಐನಾತಿ ಅಭಿಷೇಕ್ ಬಂಧನವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Wed, 11 September 24

Follow Us
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ರೀಲ್ಸ್ ಕ್ರೇಜ್; ಅತಿವೇಗಕ್ಕೆ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್,ಯುವತಿ ಸಾವು
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಎರಡೂ ಪಂಚಮಸಾಲಿ ಟ್ರಸ್ಟ್‌ಗಳ ವಿರುದ್ಧ ಯತ್ನಾಳ್ ಗಂಭೀರ ಆರೋಪ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಹಲವು ಪ್ರಯಾಣಿಕರಿಗೆ ಗಾಯ