AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಆಲೆಮನೆ ಮಾತ್ರವಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?

ಅಧಿಕಾರಿಗಳು ಭೇಟಿ ನೀಡಿದ ವೇಳೆ ಸ್ಕ್ಯಾನಿಂಗ್ ಸೆಂಟರ್‌ಗಳ ಸಿಬ್ಬಂದಿ ಸಮರ್ಪಕ ದಾಖಲೆ ನೀಡಿಲ್ಲ.  ಹೀಗಾಗಿ ಅಧಿಕಾರಿಗಳು ಸಿಸ್ಟಮ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿದೆ!

ಮಂಡ್ಯದ ಆಲೆಮನೆ ಮಾತ್ರವಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?
ಮಂಡ್ಯದ ಆಲೆಮನೆ ಮಾತ್ರವಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ?
ಪ್ರಶಾಂತ್​ ಬಿ.
| Edited By: |

Updated on:Dec 20, 2023 | 8:31 AM

Share

ಮಂಡ್ಯ, ಡಿಸೆಂಬರ್ 20: ಭ್ರೂಣಲಿಂಗ ಪತ್ತೆ (Fetus gender detection) ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಹಾಗೂ ತಪಾಸಣೆಯನ್ನು ಅಧಿಕಾರಿಗಳು ತೀವ್ರಗೊಳಿಸಿದ್ದು, ಒಂದೊಂದೇ ಕರ್ಮಕಾಂಡ ಬಯಲಿಗೆಳೆಯುತ್ತಿದ್ದಾರೆ. ಈ ಮಧ್ಯೆ, ಮಂಡ್ಯದಲ್ಲಿ (Mandya) ಆಲೆಮನೆಯಲ್ಲಿ ಮಾತ್ರವಲ್ಲದೆ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲೂ ಭ್ರೂಣಲಿಂಗ ಪತ್ತೆ ಹಚ್ಚುವ ಕೃತ್ಯ ನಡೆಯುತ್ತಿತ್ತಾ ಎಂಬ ಅನುಮಾನ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ತಪಾಸಣೆ ವೇಳೆ ಅಂಥ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಿವೆ.

ನಾಗಮಂಗಲದ 2 ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಕರಾಳ ದಂಧೆ ನಡೆಯುತ್ತಿತ್ತಾ ಎಂಬ ಅನುಮಾನ ಅಧಿಕಾರಿಗಳಿಗೆ ವ್ಯಕ್ತವಾಗಿದೆ. ಅಧಿಕಾರಿಗಳ ಪರಿಶೀಲನೆ ವೇಳೆ ಸಿಬ್ಬಂದಿಗಳ ಕಳ್ಳಾಟ ಆಡಿರುವುದು ಗೊತ್ತಾಗಿದೆ. ಸಿಸ್ಟಮ್‌ನಲ್ಲಿದ್ದ ಡೇಟಾ ಡಿಲೀಟ್ ಮಾಡಿ ಅಧಿಕಾರಿಗಳ ಕಣ್ತಪ್ಪಿಸಲು ಅಲ್ಲಿನ ಸಿಬ್ಬಂದಿ ಯತ್ನಿಸಿದ್ದಾರೆ.

ಅಧಿಕಾರಿಗಳು ಭೇಟಿ ನೀಡಿದ ವೇಳೆ ಸ್ಕ್ಯಾನಿಂಗ್ ಸೆಂಟರ್‌ಗಳ ಸಿಬ್ಬಂದಿ ಸಮರ್ಪಕ ದಾಖಲೆ ನೀಡಿಲ್ಲ.  ಹೀಗಾಗಿ ಅಧಿಕಾರಿಗಳು ಸಿಸ್ಟಮ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿದೆ. ಇದಕ್ಕೆ ಕಾರಣ, ಸ್ಕ್ಯಾನಿಂಗ್ ಮಾಡಿದ್ದ ಇಮೇಜ್ ಹಾಗೂ ಡೇಟಾವನ್ನೇ ಸಿಬ್ಬಂದಿ ಡಿಲೀಟ್ ಮಾಡಿದ್ದರು. ಇದೀಗ, ಮಾಹಿತಿ ಡಿಲೀಟ್ ಮಾಡಿದ ಹಿನ್ನೆಲೆ 2 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ ಮಾಡಲಾಗಿದೆ. ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಬೀಗ ಜಡಿಯಲಾಗಿದೆ.

ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ 2 ವರ್ಷದ ಮಾಹಿತಿ ಹಾಗೂ ಕಾವೇರಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ 3 ತಿಂಗಳ ಮಾಹಿತಿ ಡಿಲೀಟ್ ಮಾಡಲಾಗಿತ್ತು. ಈ ಸ್ಕ್ಯಾನಿಂಗ್ ಸೆಂಟರ್‌‌ಗಳು ನಾಗಮಂಗಲದ ಸರ್ಕಾರಿ ಆಸ್ಪತ್ರೆ ಸಮೀಪವೇ ಇವೆ. ಉಪವಿಭಾಗಾಧಿಕಾರಿ ನಂದೀಶ್ ಹಾಗೂ ಕುಟುಂಬ‌ ಕಲ್ಯಾಣ ಅಧಿಕಾರಿ ಡಾ. ಬೆಟ್ಟಸ್ವಾಮಿ ನೇತೃತ್ವದಲ್ಲಿ ಅವುಗಳನ್ನು ಸೀಜ್ ಮಾಡಲಾಗಿದೆ.

ಇದನ್ನೂ ಓದಿ: ಭ್ರೂಣ ಪತ್ತೆ, ಹತ್ಯೆ ಪ್ರಕರಣ; ಮೈಸೂರಿನಲ್ಲಿ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಬೀಗ

ಭ್ರೂಣ ಪತ್ತೆ, ಹತ್ಯೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ವೈದ್ಯಕೀಯ ಪ್ರಮಾಣಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಕೆಲವು ದಿನಗಳ ಹಿಂದಷ್ಟೇ ಬೀಗ ಜಡಿಯಲಾಗಿತ್ತು. ಇದೀಗ ಮಂಡ್ಯದಲ್ಲಿ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:29 am, Wed, 20 December 23

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ