Mandya: ಮಂಡ್ಯದಲ್ಲಿ ಕೆಎಸ್​ಆರ್​ಟಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಜೆಡಿಎಸ್​ ಕಾರ್ಯಕರ್ತರು

Rakesh Nayak Manchi

|

Updated on:Mar 18, 2023 | 7:16 PM

ಮಾಜಿ ಕೈ ಶಾಸಕ ಪಿಎಂ ನರೇಂದ್ರಸ್ವಾಮಿ ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರು ಕೆಎಸ್​ಆರ್​ಟಿಸಿ ಬಸ್ ಚಾಲನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತರಾವ್ ವೃತ್ತದಲ್ಲಿ ನಡೆದಿದೆ.

Mandya: ಮಂಡ್ಯದಲ್ಲಿ ಕೆಎಸ್​ಆರ್​ಟಿಸಿ ಚಾಲಕನ ಮೇಲೆ ಹಲ್ಲೆ ನಡೆಸಿದ ಜೆಡಿಎಸ್​ ಕಾರ್ಯಕರ್ತರು
ಕೆಎಸ್​ಆರ್​ಟಿಸಿ ಚಾಲಕನಿಗೆ ಥಳಿಸಿದ ಜೆಡಿಎಸ್​ ಕಾರ್ಯಕರ್ತರು

ಮಂಡ್ಯ: ಮಾಜಿ ಕೈ ಶಾಸಕ ಪಿಎಂ ನರೇಂದ್ರಸ್ವಾಮಿ (Narendraswamy) ವಿರುದ್ದ ಪ್ರತಿಭಟನೆ ನಡೆಸುತ್ತಿದ್ದ ಜೆಡಿಎಸ್ ಕಾರ್ಯಕರ್ತರು ಕೆಎಸ್​ಆರ್​ಟಿಸಿ ಬಸ್ ಚಾಲನ ಮೇಲೆ ಹಲ್ಲೆ (JDS Workers Assault On KSRTC Bus Driver) ನಡೆಸಿದ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ ಅನಂತರಾವ್ ವೃತ್ತದಲ್ಲಿ ನಡೆದಿದೆ. ಜೆಡಿಎಸ್ ದ ವಿರುದ್ದ ಪುಟಗೋಸಿ ಎಂಬ ಪದ ಬಳಕೆ ಮಾಡಿದ್ದ ಮಾಜಿ ಶಾಸಕ ನರೇಂದ್ರಸ್ವಾಮಿ ವಿರುದ್ಧ ಆನಂತರಾವ್ ವೃತ್ತದ ಬಳಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಮಾನವ ಸರಪಳಿ ನಡೆಸುವ ಮೂಲಕ ರಸ್ತೆ ತಡೆ ನಡೆಸಲಾಗಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಅಸಮಾಧಾನಗೊಂಡಿದ್ದ ಕೆಎಸ್​ಆರ್​ಟಿಸಿ ಪ್ರಯಾಣಿಕನೊಬ್ಬ ಪ್ರತಿಭಟನೆಯನ್ನು (JDS Protest In Mandya) ನಿಂದಿಸಿದ್ದಾನೆ. ಪ್ರಯಾಣಿಕನು ತಮ್ಮ ಪ್ರತಿಭಟನೆಯನ್ನು ನಿಂದಿಸಿದ್ದಕ್ಕೆ ಆಕ್ರೋಶಗೊಂಡ ಕೆಲವು ಕಾರ್ಯಕರ್ತರು ಸಾರಿಗೆ ಬಸ್​ಗೆ ಕೈಯಿಂದ ಹೊಡೆಯಲು ಪ್ರಾರಂಭಿಸಿದ್ದಾರೆ. ಇದನ್ನು ಪ್ರಶ್ನಿಸಿದ ಚಾಲಕ ಬಸ್​ಗೆ ಹೊಡೆಯದಂತೆ ಸೂಚಿಸಿದ್ದಾರೆ. ಈ ವೇಳೆ ಉದ್ರಿಕ್ತಗೊಂಡ ಗುಂಪು ಚಾಲಕನನ್ನು ಬಸ್​ನಿಂದ ಕೆಳಗೆಳೆದು ಹಲ್ಲೆ ನಡೆಸಿದ್ದಾರೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವೆ ಟೀಕಾ ಪ್ರಹಾರ, ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ. ಕೆಲವರು ನಾಲಿಗೆ ಹರಿಬಿಡುತ್ತಿದ್ದಾರೆ. ಅದರಂತೆ ಜೆಡಿಎಸ್ ಪಕ್ಷನ್ನು ಟೀಕಿಸುವ ಭರದಲ್ಲಿ ಅದೊಂದು ಪುಟ್ಕೋಸಿ ಪಕ್ಷ ಎಂದು ಕಾಂಗ್ರೆಸ್ ಮಾಜಿ ಶಾಸಕ ನರೇಂದ್ರಸ್ವಾಮಿ ನಾಲಿಗೆ ಹರಿಬಿಟ್ಟಿದ್ದರು.

ಇದನ್ನೂ ಓದಿ: ಹಾಸನದಲ್ಲಿ ತಾರಕಕ್ಕೇರಿದ ಜೆಡಿಎಸ್ ಟಿಕೆಟ್​ ಫೈಟ್: ರೇವಣ್ಣ ನಡೆಯಿಂದ ಬೇಸರ ವ್ಯಕ್ತಪಡಿಸಿದ ಹೆಚ್​ಡಿ ಕುಮಾರಸ್ವಾಮಿ

ವಸತಿ ಶಾಲೆ ಉದ್ಘಾಟನೆಗೆ ಜೆಡಿಎಸ್ ನಾಯಕರು ಮುಂದಾಗಿದ್ದಾರೆ. ಆದರೆ ಕಾಮಗಾರಿ ಪೂರ್ಣಗೊಳಿಸದೇ ಕಟ್ಟಡ ಉದ್ಘಾಟನೆ ನಡೆಸಬಾರದು ಎಂದು ಕಾಂಗ್ರೆಸ್ ನಾಯಕರು ಅಡ್ಡಿಪಡಿಸಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಕಾರ್ಯಕ್ರಮಕ್ಕೆ ಅಡಚಣೆ ಉಂಟುಮಾಡದಂತೆ ಪೊಲೀಸರು ಸೂಚಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ನರೇಂದ್ರಸ್ವಾಮಿ, ಪುಟ್ಕೋಸಿ ಪಕ್ಷವೇ ಇಷ್ಟು ಆಡಬೇಕಾದ್ರೆ, ನಾವು ಎಷ್ಟು ಆಡಬೇಕು, ನಮ್ಮದು ಇಡೀ ದೇಶದಲ್ಲಿರುವ ಪಕ್ಷ. ಪ್ರತಿಭಟನೆ ಮಾಡಿದರೆ ಬಂಧಿಸುತ್ತೀರಾ ಎಂದು ಪ್ರಶ್ನಿಸಿ ಬಂಧಿಸುವಂತೆ ಸವಾಲು ಹಾಕಿದ್ದರು. ಈ ಹೇಳಿಕೆಗೆ ಕೆರಳಿದ ಜೆಡಿಎಸ್ ಕಾರ್ಯಕರ್ತರು ನರೇಂದ್ರಸ್ವಾಮಿ ವಿರುದ್ಧ ಪ್ರತಿಭಟನೆಗೆ ಇಳಿದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada