AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ತೆರೆದ ಕೆಆರ್​ಎಸ್​ ಡ್ಯಾಂ ಗೇಟ್​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು

ಕಳೆದ ವರ್ಷ ಬೇಸಿಗೆಯಲ್ಲಿ ಬೆಂಗಳೂರು ಮತ್ತು ಹಳೇ ಮೈಸೂರು ಭಾಗದ ಜನರು ಕುಡಿಯುವ ನೀರು ಮತ್ತು ಗೃಹ ಬಳಕೆ ನೀರಿಗಾಗಿ ಸಾಕಷ್ಟು ಪರದಾಡುವಂತಾಗಿತ್ತು. ಇದಕ್ಕೆ ಕಾರಣ ಕೆಆರ್​ಎಸ್​ ಡ್ಯಾಂನಲ್ಲಿ ನೀರು ಸಂಗ್ರಹ ಭಾರಿ ಪ್ರಮಾಣದಲ್ಲಿ ಕುಸಿದಿತ್ತು. ಇದರಿಂದ ಕಾವೇರಿ ತೀರದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಕಹಿ ಘಟನೆಗಳನ್ನು ಮರೆಯುವ ಮುನ್ನವೇ ಕೆಆರ್​ಎಸ್​ ಡ್ಯಾಂನಲ್ಲಿ ಮತ್ತೊಂದು ಅಚಾತುರ್ಯ ನಡೆದಿದೆ. ಏನದು? ಇಲ್ಲಿದೆ ವಿವರ

ಏಕಾಏಕಿ ತೆರೆದ ಕೆಆರ್​ಎಸ್​ ಡ್ಯಾಂ ಗೇಟ್​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು
ಕೆಆರ್​ಎಸ್​ ಡ್ಯಾಂ
ಪ್ರಶಾಂತ್​ ಬಿ.
| Edited By: |

Updated on:Mar 25, 2025 | 9:14 AM

Share

ಮಂಡ್ಯ, ಮಾರ್ಚ 25: ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೃಷ್ಣರಾಜ ಸಾಗರ (KRS) ಜಲಾಶಯದ +80 ಗೇಟ್ ಭಾನುವಾರ (ಮಾರ್ಚ್​ 23) ರಾತ್ರಿ ಏಕಾಏಕಿ‌ ತೆರೆದಿದ್ದು, ಸೋಮವಾರ (ಮಾ.24) ರಾತ್ರಿವರೆಗೂ ಗೇಟ್​ ತೆರದೇ ಇತ್ತು. 24 ಗಂಟೆಯಲ್ಲಿ ಬರೋಬ್ಬರಿ ಎರಡು ಸಾವಿರ ಕ್ಯೂಸೆಕ್ ನೀರು‌‌ ನದಿ ಪಾಲಾಗಿದೆ. ಸೋಮವರಾರ ರಾತ್ರಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಈ ವೇಳೆ, ಹೆಚ್ಚಿನ ಪ್ರಮಾಣದ ‌ನೀರು ಇದ್ದಿದ್ದರಿಂದ ಗೇಟ್ ಮುಚ್ಚಲು‌ ಅಧಿಕಾರಿಗಳು ಹರಸಾಹಸ ಪಟ್ಟರು.

ಗೇಟ್​ ತೆರೆಯಲು ಕಾರಣವೇನು?

ಜಲಾಶಯದ ಗೇಟ್ ಏಕಾಏಕಿ ತೆರೆಯುವುದು ವಿರಾಳಾತಿ ವಿರಳ. ಆದರೆ, ಇಲ್ಲಿ ಕೆಆರ್​ಎಸ್​ ಡ್ಯಾಂನ ಗೇಟ್​ ಏಕಾಏಕಿ ತೆರೆದಿದ್ದು, ಅನುಮಾನವನ್ನು ಹುಟ್ಟು ಹಾಕಿದೆ. ಎರಡು ಕಾರಣಗಳಿಂದ ಡ್ಯಾಂn ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

ತನಿಖೆಗೆ ಪೂರಕ ಸಾಕ್ಷ್ಯ ಕೊರತೆ?

ಡ್ಯಾಂನ ಗೇಟ್​ ಏಕಾಏಕಿ ತೆರೆದ ವಿಚಾರ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸುತ್ತಿದ್ದು, ಪರಿಶೀಲನೆ ನಡೆಸಲಿದ್ದಾರೆ. ಗೇಟ್​ ಏಕಾಏಕಿ ಹೇಗೆ ತೆರೆಯಿತು ಅಂತ ತನಿಖೆ ನಡೆಸಲು ಪೂರಕವಾದ ಸಾಕ್ಷ್ಯಾಧಾರಗಳು ಅತ್ಯಗತ್ಯ. ಆದರೆ, ಡ್ಯಾಂನ ಸುತ್ತಮುತ್ತ ಯಾವುದೇ ಸಿಸಿ ಕ್ಯಾಮೆರಾಗಳು ಇಲ್ಲ. ಇದರಿಂದ ತನಿಖೆ ನಿಧಾನವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ
Image
ಅಣ್ಣಾಮಲೈ ಪ್ರತಿಭಟನೆ ಬಗ್ಗೆ ಡಿಕೆ ಶಿವಕುಮಾರ್ ಹಾಸ್ಯಮಯವಾಗಿ ಹೇಳಿದ್ದೇನು?
Image
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
Image
ಕೃಷ್ಣ ನದಿ ಮತ್ತು ಕಳಸಾಬಂಡೂರಿ ಯೋಜನೆಗಳನ್ನೂ ಚರ್ಚಿಸಲಾಗಿದೆ: ಶಿವಕುಮಾರ್
Image
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಇದನ್ನೂ ಓದಿ: ಮೇಕೆದಾಟು: ಕರ್ನಾಟಕದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ತಮಿಳುನಾಡು

ತುಂಡಾಗಿತ್ತು ಕ್ರೆಸ್ಟರ್​ ಗೇಟ್​

ಇನ್ನು, ಕಳೆದ ವರ್ಷ ತುಂಗಭದ್ರಾ ಜಲಾಶಯದ ಕ್ರೆಸ್ಟರ್​ಗೇಟ್​ ತುಂಡಾಗಿ ಕೊಚ್ಚಿಕೊಂಡು ಹೋಗಿತ್ತು. ಇದರಿಂದ ಸಾವಿರಾರು ಕ್ಯೂಸೆಕ್​ ನೀರು ನದಿ ಪಾಲಾಗಿತ್ತು. ಗೇಟ್​ ತುಂಡಾಗುತ್ತಿದ್ದಂತೆ ಕಾರ್ಯಪ್ರವೃತ್ತವಾಗಿದ್ದ ಸರ್ಕಾರ ಮತ್ತು ಡ್ಯಾಂ ನಿರ್ವಹಣಾ ಅಧಿಕಾರಿಗಳು ಒಂದು ವಾರದಲ್ಲಿ ಹೊಸ ಸ್ಟಾಫ್​ ಗೇಟ್​ ಅಳವಡಿಸಿದ್ದರು. ಇದು ಸಹಜವಾಗಿ ಡ್ಯಾಂ ನಿರ್ವಹಣಾ ಅಧಿಕಾರಿಗಳ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಬಳಿಕವಾದರೂ ರಾಜ್ಯದ ಪ್ರಮುಖ ಜಲಾಶಯಗಳ ತಪಾಸಣೆ ಸರ್ಕಾರ ನಡೆಸಬೇಕಿತ್ತು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:11 am, Tue, 25 March 25

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ