AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ: ಎದೆ ಝಲ್ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೆಎಸ್​ಆರ್​ಟಿಸಿ ಬಸ್​ ಚಾಲಕರ ಸಮಯ ಪ್ರಜ್ಞೆಯನ್ನು ಮೆಚ್ಚಲೇಬೇಕು. ಸಂಭವಿಸಬಹುದಾದ ಅದೆಷ್ಟೋ ಅಪಘಾತಗಳನ್ನು ತಮ್ಮ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಈ ಘಟನೆಯಲ್ಲೂ ಕೂಡ ಕೆಎಸ್​ಆರ್​ಟಿಸಿ ಬಸ್​ ಚಾಲಕನ ತತಕ್ಷಣದ ಜಾಗರೂಕತೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಏನದು ಇಲ್ಲಿದೆ ಓದಿ...

ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on:Dec 04, 2023 | 1:16 PM

Share

ಮಂಡ್ಯ ಡಿ.04: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ರವಿವಾರ ಮಧ್ಯಾಹ್ನ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದ ಸರ್ವಿಸ್​​ ರಸ್ತೆ ಮೇಲೆ ವೇಗವಾಗಿ ಕೆಎಸ್​ಆರ್​ಟಿಸಿ ಬಸ್​ ಬರುತ್ತಿತ್ತು. ಇದೇ ವೇಳೆ ಹೆದ್ದಾರಿಯ ಅಂಡರ್​ ಪಾಸ್ ಮೂಲಕ​ ಟಿಪ್ಪರ್ ವಾಹನ, ಬಸ್​​ಗೆ ಅಡ್ಡ ಬಂದಿದೆ​.

ಕೂಡಲೆ ಚಾಲಕ ಬಸ್​ ಅನ್ನು ಎಡ ತಿರುವು ತೆಗೆದುಕೊಂಡಿದ್ದಾರೆ. ಇದರಿಂದ ಭಾರಿ ಅಪಘಾತ ತಪ್ಪಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಎದೆ ಝಲ್ ಎನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಂಡರ್ ಪಾಸ್​ಗಳ ಸಮೀಪ ರಸ್ತೆ ಉಬ್ಬು ಇಲ್ಲದಿರುವುದೇ ಘಟನೆ ಕಾರಣವಾಗಿದೆ. ಕೂಡಲೇ ರಸ್ತೆ ಉಬ್ಬು ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೊಬ್ಬರಿ ಎಣ್ಣೆಯೊಂದಿಗೆ KSRTC ಬಸ್​ ಹತ್ತಿದ ಮಹಿಳೆ; ಏನಿದು ಎಂದು ಕೇಳಿದ ಚಾಲಕ, ಬಾಂಬ್ ಎಂದು ಗದರಿದ ಮಹಿಳೆ

ಕೆಎಸ್​ಆರ್​ಟಿಸಿ ಬಸ್​ ಚಾಲಕನ ಜಾಣ್ಮೆಗೆ ಗ್ರಾಮಸ್ಥರಿಂದ ಸನ್ಮಾನ

ಹುಬ್ಬಳ್ಳಿ: ಕೆಎಸ್​ಆರ್​ಟಿಸಿ ಬಸ್​ ಚಾಲಕನ ಸಮಯ ಪ್ರಜ್ಞೆಗೆ ಗ್ರಾಮಸ್ಥರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಕೆಎಸ್​ಆರ್​ಟಿಸಿ ಬಸ್​ವೊಂದು ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಶಿರಟ್ಟಿಯಿಂದ ಹುಬ್ಬಳ್ಳಿಗೆ ಬರುತ್ತಿತ್ತು. ಬಸ್​ನಲ್ಲಿ ಮಲ್ಲಿಗವಾಡ, ಮುಳಗುಂದ ಚಿಂಚಲಿ, ಕೋಳವಾಡದಿಂದ ನೂರಾರು ಪ್ರಯಾಣಿಕರು ಬರುತ್ತಿದ್ದರು.

ಬಸ್​ನಲ್ಲಿ ಶಾಲೆ ಮತ್ತು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿತ್ತು. ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದಾಗಿ ಬಸ್​​ ಎಕ್ಸೆಲ್​ ಕಟ್ ಆಗಿದೆ. ಇದನ್ನು ಅರಿತ ಚಾಲಕ ಕೂಡಲೆ ಬಸ್​ ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಬಹುದಾದ ಅಪಘಾತ ತಪ್ಪಿಸಿದ್ದಾರೆ. ಹೀಗಾಗಿ ಚಾಲಕನಿಗೆ ಕೋಳಿವಾಡ ಗ್ರಾಮಸ್ಥರು ಸನ್ಮಾನ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:14 pm, Mon, 4 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ