AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ: ಎದೆ ಝಲ್ ಎನಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೆಎಸ್​ಆರ್​ಟಿಸಿ ಬಸ್​ ಚಾಲಕರ ಸಮಯ ಪ್ರಜ್ಞೆಯನ್ನು ಮೆಚ್ಚಲೇಬೇಕು. ಸಂಭವಿಸಬಹುದಾದ ಅದೆಷ್ಟೋ ಅಪಘಾತಗಳನ್ನು ತಮ್ಮ ಸಮಯ ಪ್ರಜ್ಞೆಯಿಂದ ತಪ್ಪಿಸಿದ್ದಾರೆ. ಈ ಘಟನೆಯಲ್ಲೂ ಕೂಡ ಕೆಎಸ್​ಆರ್​ಟಿಸಿ ಬಸ್​ ಚಾಲಕನ ತತಕ್ಷಣದ ಜಾಗರೂಕತೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಏನದು ಇಲ್ಲಿದೆ ಓದಿ...

ಪ್ರಶಾಂತ್​ ಬಿ.
| Edited By: |

Updated on:Dec 04, 2023 | 1:16 PM

Share

ಮಂಡ್ಯ ಡಿ.04: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್​​ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ರವಿವಾರ ಮಧ್ಯಾಹ್ನ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದ ಸರ್ವಿಸ್​​ ರಸ್ತೆ ಮೇಲೆ ವೇಗವಾಗಿ ಕೆಎಸ್​ಆರ್​ಟಿಸಿ ಬಸ್​ ಬರುತ್ತಿತ್ತು. ಇದೇ ವೇಳೆ ಹೆದ್ದಾರಿಯ ಅಂಡರ್​ ಪಾಸ್ ಮೂಲಕ​ ಟಿಪ್ಪರ್ ವಾಹನ, ಬಸ್​​ಗೆ ಅಡ್ಡ ಬಂದಿದೆ​.

ಕೂಡಲೆ ಚಾಲಕ ಬಸ್​ ಅನ್ನು ಎಡ ತಿರುವು ತೆಗೆದುಕೊಂಡಿದ್ದಾರೆ. ಇದರಿಂದ ಭಾರಿ ಅಪಘಾತ ತಪ್ಪಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಎದೆ ಝಲ್ ಎನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಂಡರ್ ಪಾಸ್​ಗಳ ಸಮೀಪ ರಸ್ತೆ ಉಬ್ಬು ಇಲ್ಲದಿರುವುದೇ ಘಟನೆ ಕಾರಣವಾಗಿದೆ. ಕೂಡಲೇ ರಸ್ತೆ ಉಬ್ಬು ನಿರ್ಮಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಕೊಬ್ಬರಿ ಎಣ್ಣೆಯೊಂದಿಗೆ KSRTC ಬಸ್​ ಹತ್ತಿದ ಮಹಿಳೆ; ಏನಿದು ಎಂದು ಕೇಳಿದ ಚಾಲಕ, ಬಾಂಬ್ ಎಂದು ಗದರಿದ ಮಹಿಳೆ

ಕೆಎಸ್​ಆರ್​ಟಿಸಿ ಬಸ್​ ಚಾಲಕನ ಜಾಣ್ಮೆಗೆ ಗ್ರಾಮಸ್ಥರಿಂದ ಸನ್ಮಾನ

ಹುಬ್ಬಳ್ಳಿ: ಕೆಎಸ್​ಆರ್​ಟಿಸಿ ಬಸ್​ ಚಾಲಕನ ಸಮಯ ಪ್ರಜ್ಞೆಗೆ ಗ್ರಾಮಸ್ಥರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಕೆಎಸ್​ಆರ್​ಟಿಸಿ ಬಸ್​ವೊಂದು ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಶಿರಟ್ಟಿಯಿಂದ ಹುಬ್ಬಳ್ಳಿಗೆ ಬರುತ್ತಿತ್ತು. ಬಸ್​ನಲ್ಲಿ ಮಲ್ಲಿಗವಾಡ, ಮುಳಗುಂದ ಚಿಂಚಲಿ, ಕೋಳವಾಡದಿಂದ ನೂರಾರು ಪ್ರಯಾಣಿಕರು ಬರುತ್ತಿದ್ದರು.

ಬಸ್​ನಲ್ಲಿ ಶಾಲೆ ಮತ್ತು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಿತ್ತು. ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದಾಗಿ ಬಸ್​​ ಎಕ್ಸೆಲ್​ ಕಟ್ ಆಗಿದೆ. ಇದನ್ನು ಅರಿತ ಚಾಲಕ ಕೂಡಲೆ ಬಸ್​ ನಿಲ್ಲಿಸಿದ್ದಾರೆ. ಇದರಿಂದ ಸಂಭವಿಸಬಹುದಾದ ಅಪಘಾತ ತಪ್ಪಿಸಿದ್ದಾರೆ. ಹೀಗಾಗಿ ಚಾಲಕನಿಗೆ ಕೋಳಿವಾಡ ಗ್ರಾಮಸ್ಥರು ಸನ್ಮಾನ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:14 pm, Mon, 4 December 23