AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandya News: ಮಂಡ್ಯದಲ್ಲಿ ಮುಂದುವರೆದ ಚಿರತೆ ದಾಳಿ, ಚಿರತೆ ಬಾಯಿಗೆ ತುತ್ತಾದ ಹಸು, ಮಾಲೀಕನ ಗೋಳಾಟ

ಮಂಡ್ಯ ಜಿಲ್ಲೆಯಲ್ಲಿ ಚಿರತೆ ದಾಳಿ ಪ್ರಕರಣ ಮತ್ತೆ ಮುಂದುವರಿದಿದೆ. ಹಸುವೊಂದು ಚಿರತೆ ಬಾಯಿಗೆ ತುತ್ತಾದ ಘಟನೆ ಮಳವಳ್ಳಿ ತಾಲೂಕಿನ ಬಳಿ ನಡೆದಿದೆ.

Mandya News: ಮಂಡ್ಯದಲ್ಲಿ ಮುಂದುವರೆದ ಚಿರತೆ ದಾಳಿ, ಚಿರತೆ ಬಾಯಿಗೆ ತುತ್ತಾದ ಹಸು, ಮಾಲೀಕನ ಗೋಳಾಟ
ಮಂಡ್ಯದಲ್ಲಿ ಮುಂದುವರಿದ ಚಿರತೆ ದಾಳಿ, ಹಸು ಬಲಿ (ಫೋಟೋ: ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Dec 31, 2022 | 11:10 AM

Share

ಮಂಡ್ಯ: ಜಿಲ್ಲೆಯಲ್ಲಿ ಚಿರತೆ ದಾಳಿ (Leopard attack in Manya) ಪ್ರಕರಣ ಮತ್ತೆ ಮುಂದುವರಿದಿದೆ. ಚಿರತೆಯೊಂದು ಹಸುವಿನ ಮೇಲೆ ದಾಳಿ (Leopard Attacks On Cow) ನಡೆಸಿ ಕೊಂದು ಹಾಕಿದ ಘಟನೆ ಮಳವಳ್ಳಿ ತಾಲೂಕಿನ ಬ್ಲಫ್ ಬಳಿ ನಡೆದಿದ್ದು, ಪ್ರೀತಿಯಿಂದ ಸಾಕಿದ ಹಸುವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಸುರಿಸುತ್ತಿದ್ದಾರೆ. ತಾಲೂಕಿನಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸಹಜವಾಗಿ ಜನರಲ್ಲಿನ ಆತಂಕವನ್ನು ಹೆಚ್ಚಿಸಿದೆ. ಮಳವಳ್ಳಿ ತಾಲೂಕಿನ ಬ್ಲಫ್ ಬಳಿಯ ನಂಜಪ್ಪ ಎಂಬುವವರು ಸಾಕಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಗ್ರಾಮದಲ್ಲಿ ಕತ್ತಲಾದರೆ ಸಾಕು ಜನರು ಒಂಟಿಯಾಗಿ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಬಳಿ ಸಮರ್ಪಕ ಬೋನು ಇಲ್ಲದೆ ಇರುವ ಹಿನ್ನೆಲೆ ಚಿರತೆಗಳು ಸೆರೆಯಾಗದೆ ಅಲ್ಲೆಂದರಲ್ಲಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಚಿರತೆ ಪ್ರತ್ಯಕ್ಷಗೊಂಡ ಸ್ಥಳದಲ್ಲಿ ಬೋನ್ ಅಳವಡಿಸಿದರೆ ಅನಾಹುತಕ್ಕೆ ಕಡಿವಾಣ ಹಾಕ ಬಹುದೆಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಇದನ್ನೂ ಓದಿ: Leopard: ಬೆಂಗಳೂರಿನಲ್ಲಿ ಮತ್ತೆ ಶುರುವಾದ ಚಿರತೆ ಕಾಟ: ಹಸುವಿನ ಮೇಲೆ ದಾಳಿ, ಆತಂಕದಲ್ಲಿ ಜನ

ಚಾಮರಾಜನಗರದಲ್ಲಿ ಚಿರತೆ ದಾಳಿಗೆ ಕರು ಬಲಿ

ಚಾಮರಾಜನಗರ: ಚಿರತೆ ದಾಳಿಗೆ ಕರು ಬಲಿಯಾದ ಘಟನೆ ತಾಲೂಕಿನ ಬಂಡೀಪುರ ಪ್ರಾದೇಶಿಕ ಅರಣ್ಯ ವ್ಯಾಪ್ತಿಯ ಕಿಲಗೆರೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ಪ್ರಜ್ವಲ್ ಎಂಬವರಿಗೆ ಸೇರಿದ ಕರುವಿನ ಮೇಲೆ ಹುತ್ತೂರು ಕಿಲಗೆರೆ ಗೇಟ್ ಹಾಗೂ ಮಾದಲವಾಡಿ ಗ್ರಾಮದ ಮಾರ್ಗಮಧ್ಯೆ ಇರುವ ಜಮೀನಿನಲ್ಲಿ ತಡರಾತ್ರಿ ದಾಳಿ ನಡೆಸಿ ಕೊಂದು ಹಾಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 31 December 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ