AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮಹಿಳೆ ಮೇಲೆ ಚಿರತೆ ದಾಳಿ; ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಜಿಲ್ಲೆಯ ಅವ್ವೇರಹಳ್ಳಿ ಗ್ರಾಮದಲ್ಲಿ ಗೃಹಿಣಿ ಮೇಲೆ ಚಿರತೆ ದಾಳಿ ನಡೆಸಿದೆ. ತಕ್ಷಣ ಮಹಿಳೆ ಕೂಗಿದ್ದಾಳೆ ಅಕ್ಕ ಪಕ್ಕದ ಮನೆಯವರು ಬರುತ್ತಿದ್ದಂತೆ ಸ್ಥಳದಿಂದ ಚಿರತೆ ಓಡಿಹೋಗಿದೆ.

ಮಂಡ್ಯ: ಮಹಿಳೆ ಮೇಲೆ ಚಿರತೆ ದಾಳಿ; ಸ್ವಲ್ಪದರಲ್ಲೇ ತಪ್ಪಿದ ಅನಾಹುತ
ಚಿರತೆ ದಾಳಿ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jan 07, 2023 | 2:49 PM

Share

ಮಂಡ್ಯ: ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಕೊಟ್ಟಿಗೆಗೆ ಹೋದ ಬಸಮ್ಮಣ್ಣಿ ಎಂಬ ಗೃಹಿಣಿ ಮೇಲೆ ಏಕಾ ಏಕಿ ಚಿರತೆ ದಾಳಿ ಮಾಡಿದೆ. ಮಹಿಳೆಯು ಗಾಬರಿಯಿಂದ ಕಿರುಚಾಡುತ್ತಾ ಚಿರತೆಗೆ ಒದ್ದಿದ್ದು, ಚಿರತೆ ಗುಂಡಿಯೊಳಗೆ ಬಿದ್ದಿದೆ. ಮಹಿಳೆಯ ಕೂಗು ಕೇಳುತ್ತಿದ್ದಂತೆ ಅಕ್ಕ ಪಕ್ಕದ ಜನರು ಬಂದಿದ್ದಾರೆ. ತಕ್ಷಣವೇ ಚಿರತೆ ಅಲ್ಲಿಂದ ಓಡಿ ಹೋಗಿದೆ. ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಬಂದಿದ್ದು ಚಿರತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಕಾಡುತ್ತಿದೆ ಚಿರತೆ, ನಿನ್ನೆ ಮೊನ್ನೆ ಶ್ವಾನದ ಮೇಲೆ ದಾಳಿಯಾಗುತ್ತಿದ್ದು ಈಗ ಮನುಷ್ಯರ ಮೇಲೆ ದಾಳಿ ಮಾಡಲು ಆರಂಭಿಸಿದೆ. ಪದೇ ಪದೇ ಹೆಚ್ಚುತ್ತಿರುವ ಚಿರತೆ ದಾಳಿಗೆ ಗ್ರಾಮಸ್ಥರು ಭಯದಿಂದ ಹೊರ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕತ್ತಲಾಗುತ್ತಿದ್ದಂತೆ ಮನೆಯಿಂದ ಆಚೆ ಬರಲಾರದೆ ಗ್ರಾಮಸ್ಥರ ಪೀಕಲಾಟ ಹೇಳತೀರದು. ಕೂಡಲೇ ಚಿರತೆಯನ್ನ ಸೆರೆ ಹಿಡಿಯುವಂತೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ:ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ನಿನ್ನೆಯಷ್ಟೇ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲಿನಲ್ಲಿರುವ ಶಿವರಾಮ್ ಎಂಬುವವರ ತೋಟದಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿತ್ತು. ಕಳೆದ 30 ದಿನಗಳಲ್ಲಿ ಬೋನಿಗೆ ಬಿದ್ದ ಮೂರನೇ ಚಿರತೆ ಇದಾಗಿದ್ದು, ಡಿಸೆಂಬರ್ 12 ಹಾಗೂ ಡಿಸೆಂಬರ್ 27 ರಂದು ಎರಡು ಚಿರತೆಗಳನ್ನ ಸೆರೆ ಹಿಡಿಯಲಾಗಿತ್ತು. ಇನ್ನೇನು ಚಿರತೆಯಿಂದ ಬಚಾವ್​ ಆದ್ವಿ ಅನ್ನುವಷ್ಟರಲ್ಲಿ ಜಿಲ್ಲೆಯಲ್ಲಿ ಮತ್ತೆ ಚಿರತೆ ಅಟ್ಟಹಾಸ ಶುರುವಾಗಿದೆ. ಆದಷ್ಟು ಬೇಗ ಚಿರತೆಯನ್ನ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ತಮ್ಮ ಅಳಲನ್ನ ಅರಣ್ಯಾಧಿಕಾರಿಗಳ ಮುಂದೆ ತೋಡಿಕೊಂಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 am, Sat, 7 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ