AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟು ಕೋಟ್ಯಧೀಶರಾಗಿದ್ದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು ಬಳಿ ಈಗ ಆಸ್ತಿ ಎಷ್ಟಿದೆ ಗೊತ್ತಾ?

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಇಂದು ಬೃಹತ್ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ಸ್ಟಾರ್ ಚಂದ್ರು ಅವರು ತಮ್ಮ ಹೆಸರಿನಲ್ಲಿರುವ ಆಸ್ತಿ ಹಾಗೂ ಕುಟುಂಬಸ್ಥರ ಹೆಸರಿನಲ್ಲಿರುವ ಆಸ್ತಿ ಮೌಲ್ಯದ ಬಗ್ಗೆ ಉಲ್ಲೇಖಿಸಿದ್ದಾರೆ.

ಹುಟ್ಟು ಕೋಟ್ಯಧೀಶರಾಗಿದ್ದ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು ಬಳಿ ಈಗ ಆಸ್ತಿ ಎಷ್ಟಿದೆ ಗೊತ್ತಾ?
ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ಆಸ್ತಿ ಮೌಲ್ಯ ಘೋಷಣೆ
ಪ್ರಶಾಂತ್​ ಬಿ.
| Edited By: |

Updated on: Apr 01, 2024 | 5:33 PM

Share

ಮಂಡ್ಯ, ಏ.1: ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪುತ್ರ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ವಿರುದ್ಧವೇ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru)ಎಂದು ಕರೆಯಲ್ಪಡುವ ವೆಂಕಟರಾಮೇಗೌಡ ಅವರು ಇಂದು ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿ ನಾಮಪತ್ರ ಸಲ್ಲಿಕೆ ಮಾಡಿದರು. ಉಮೇದುವಾರಿಕೆಯಲ್ಲಿ ಸ್ಟಾರ್ ಚಂದ್ರು ಅವರು ತಮ್ಮ ಹಾಗೂ ಕುಟುಂಬಸ್ಥರ ಹೆಸರಿನಲ್ಲಿರುವ ಆಸ್ತಿ ಮೌಲ್ಯಗಳ ಬಗ್ಗೆ ಘೋಷಣೆ ಮಾಡಿದ್ದಾರೆ.

ದೊಡ್ಡ ದೊಡ್ಡ ಮಟ್ಟದ ಕಾಮಗಾರಿಗಳನ್ನು ನಡೆಸುವ ಸ್ಟಾರ್‌ ಬಿಲ್ಡರ್ಸ್‌ ಎಂಬ ಕಂಪನಿಯ ಒಡೆದತನ ಹೊಂದಿರುವ ವೆಂಕಟರಾಮೇಗೌಡ ಅವರು 410 ಕೋಟಿ ಒಡೆಯರಾಗಿದ್ದಾರೆ. ವೆಂಕಟರಾಮೇಗೌಡ ಅವರ ಹೆಸರಿನಲ್ಲಿ 237 ಕೋಟಿ ರೂ. ಮೌಲ್ಯದ ಆಸ್ತಿ ಇದ್ದು, ಪತ್ನಿ ಕುಸುಮ ಹೆಸರಲ್ಲಿ 146 ಕೋಟಿ ಮೌಲ್ಯದ ಆದಾಯ ಇರುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ ಚಂದ್ರು ಯಾರು? ಅವರ ಹಿನ್ನೆಲೆ ಏನು? ಸ್ಟಾರ್ ಬಂದಿದ್ದೇಗೆ?

ಹುಟ್ಟವಾಗಲೇ ಸ್ಟಾರ್ ಚಂದ್ರು ಕೋಟ್ಯಾಧೀಶ

ಸ್ಟಾರ್ ಚಂದ್ರುಗೆ 26 ಕೋಟಿ ಮೌಲ್ಯದ ಆಸ್ತಿ ಪಿತ್ರಾರ್ಜಿತವಾಗಿ (ಅವಿಭಕ್ತ ಕುಟುಂಬದ ಆಸ್ತಿ) ಬಂದಿದೆ. ಸದ್ಯ, ಇವರ ಬಳಿ 99.36 ಕೋಟಿ ರೂಪಾಯಿ ಚರಾಸ್ತಿ ಇದ್ದು, ಪತ್ನಿ ಕುಸುಮ ಹೆಸರಲ್ಲಿ 4.20 ಕೋಟಿ ಚರಾಸ್ತಿ ಇದೆ.

ಸ್ಟಾರ್ ಚಂದ್ರು ಹೆಸರಲ್ಲಿ ಯಾವುದೇ ಕ್ರಿಮಿನಲ್ ಪ್ರಕರಣ ಇಲ್ಲ. 15 ಕೋಟಿ ರೂಪಾಯಿ ಸಾಲ ಮಾಡಿರುವ ಇವರು, ಉದ್ಯಮಿಯಾಗಿ ಕಾಲಕಾಲಕ್ಕೆ ತೆರಿಗೆ ಪಾವತಿಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿಗೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ಘೋಷಣೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​