AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ: ಮಂಡ್ಯದಲ್ಲಿ ಡಿಕೆ ಶಿವಕುಮಾರ್ ವಾಗ್ದಾಳಿ

ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರು ಬೃಹತ್ ರ್ಯಾಲಿ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಅಧಿಕಾರ ತೆಗೆದವರೊಂದಿಗೆ ಕುಮಾರಸ್ವಾಮಿ ಹೋಗಿದ್ದಾರೆ. ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ: ಮಂಡ್ಯದಲ್ಲಿ ಡಿಕೆ ಶಿವಕುಮಾರ್ ವಾಗ್ದಾಳಿ
ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ: ಮಂಡ್ಯದಲ್ಲಿ ಡಿಕೆ ಶಿವಕುಮಾರ್ ವಾಗ್ದಾಳಿ
ಪ್ರಶಾಂತ್​ ಬಿ.
| Edited By: |

Updated on: Apr 01, 2024 | 2:37 PM

Share

ಮಂಡ್ಯ, ಏ.1: ಹೆಚ್.​ಡಿ. ಕುಮಾರಸ್ವಾಮಿ (H.D.Kumaraswamy) ಅವರು ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ (Mandya) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು (Star Chandru) ಅವರು ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು.

ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್​ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಅಲ್ಲದೆ, ಸ್ಥಳೀಯರನ್ನು ಆಯ್ಕೆ ಮಂಡ್ಯ ಗೌಡಿಕೆಯನ್ನು ಬೇರೆಯವರಿಗೆ ಕೊಟ್ಟಿಲ್ಲ. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.

ಇದನ್ನೂ ಓದಿ: ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆ ಖಚಿತ, ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ಹೆಚ್​.ಡಿ.ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು ಮಾಡುತ್ತಾರೆ ಎಂದು ಡಿಕೆ ಶಿವಕುಮಾರ್ ಅವರು ಪ್ರಶ್ನಿಸಿದರು.

ಈ ಬಾರಿ ಎಂಟು ಮಂದಿ ಒಕ್ಕಲಿಗರಿಗೆ ನಾವು​​ ಟಿಕೆಟ್ ನೀಡಿದ್ದೇವೆ. ನನ್ನನ್ನು ನೋಡಿ ಮಂಡ್ಯ ಜಿಲ್ಲೆಯಲ್ಲಿ ಅಧಿಕ ಸೀಟ್ ಕೊಟ್ಟಿದ್ದೀರಿ. ನಿಮ್ಮ ನಂಬಿಕೆ ಸುಳ್ಳು ಆಗಿಲ್ಲ. ನಾನು ಮಂಡ್ಯ ಸ್ವಾಭಿಮಾನದ ಜೊತೆ ಇರುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಇದೊಂದು ಐತಿಹಾಸಿಕ ನಾಮಪತ್ರ. ಮಂಡ್ಯ ಜನರ ಸ್ವಾಭಿಮಾನ ನಾಮಪತ್ರ. ಸ್ಥಳೀಯರನ್ನು ಆಯ್ಕೆ ಮಾಡಿ ಮಂಡ್ಯ ಗೌಡಿಕೆಯನ್ನು ಬೇರೆಯವರ ಕೈಗೆ ಕೊಟ್ಟಿಲ್ಲ. ಸ್ಟಾರ್ ಚಂದ್ರು ಮಂಡ್ಯ ಜಿಲ್ಲೆಯ ರೈತ ಮಗ. ಇದು ಟೂರಿಂಗ್ ಟಾಕೀಸ್​, ಸಿನಿಮಾ ರಾಜಕಾರಣ ಅಲ್ಲ. ಇದು ಬದುಕಿನ ರಾಜಕಾರಣ. ಮಂಡ್ಯ ಕ್ಷೇತ್ರದ ಜನರು ಮಂಡ್ಯದವರಿಗೆ ಮತ ಹಾಕುತ್ತಾರೆ. ಚಂದ್ರು ಅವರು ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ. ಹಾಸನದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಡಿ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ