AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಗೇರಿದ ಮಂಡ್ಯ ಲೋಕಸಭಾ ಅಖಾಡ; ಟಿಕೆಟ್ ಘೋಷಣೆಗೂ ಮೊದಲೇ ಹಾಲಿ ಸಂಸದೆ ಸುಮಲತಾ ಫುಲ್ ಆಕ್ಟೀವ್

ಲೋಕಸಭಾ ಚುನಾವಣೆಗೆ ಇನ್ನೇನೂ ಕೆಲವೇ ದಿನಗಳು ಬಾಕಿ ಇವೆ. ಸಕ್ಕರೆ ನಗರಿ ಮಂಡ್ಯದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸದ್ಯ ಬಿಜೆಪಿ ಟಿಕೆಟ್​ಗಾಗಿ ಸಾಕಷ್ಟು ಪ್ರಯತ್ನ ಪಡುತ್ತಿರುವ ರೇಬಲ್ ಲೇಡಿ ಸಂಸದೆ ಸುಮಲತಾ, ಟಿಕೆಟ್ ಘೋಷಣೆಗೂ ಮೊದಲೇ ಕ್ಷೇತ್ರದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ.

ರಂಗೇರಿದ ಮಂಡ್ಯ ಲೋಕಸಭಾ ಅಖಾಡ; ಟಿಕೆಟ್ ಘೋಷಣೆಗೂ ಮೊದಲೇ ಹಾಲಿ ಸಂಸದೆ ಸುಮಲತಾ ಫುಲ್ ಆಕ್ಟೀವ್
ಸುಮಲತಾ
ಪ್ರಶಾಂತ್​ ಬಿ.
| Edited By: |

Updated on: Mar 03, 2024 | 3:57 PM

Share

ಮಂಡ್ಯ, ಮಾ.03: ಲೋಕಸಭಾ ಸಮರಕ್ಕೆ ಇನ್ನೇನೂ ಕೆಲವು ದಿನಗಳು ಬಾಕಿ ಇವೆ. ಅದರಲ್ಲೂ ಸಕ್ಕರೆ ನಗರಿ ಮಂಡ್ಯ (Mandya)ದಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ ಹೈಕಮಾಂಡ್ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಸದ್ಯ ಬಿಜೆಪಿ ಟಿಕೆಟ್​ಗಾಗಿ ರೆಬಲ್ ಲೇಡಿ ಸುಮಲತಾ(Sumalatha) ಅವರು ದೆಹಲಿ ಮಟ್ಟದಲ್ಲಿ ದಾಳ ಉರುಳಿಸಿ, ಮಂಡ್ಯ ಬಿಜೆಪಿ ಟಿಕೆಟ್ ಗಾಗಿ ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಮತ್ತೊಂದು ಕಡೆ ಬಿಜೆಪಿ, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಮಂಡ್ಯ ಮೈತ್ರಿ ಟಿಕೆಟ್ ಯಾರಿಗೆ ಎಂಬ ಬಗ್ಗೆ ಇನ್ನು ತೀರ್ಮಾನವಾಗಿಲ್ಲ. ಆದರೆ, ಹಾಲಿ ಸಂಸದೆ ಸುಮಲತಾ, ತಮಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿ ತಾವು ಸ್ವರ್ಧಿಸುವ ಮಂಡ್ಯ ಕ್ಷೇತ್ರದಲ್ಲಿ ಫುಲ್ ಆಕ್ಟೀವ್ ಆಗಿದ್ದಾರೆ.

15 ದಿನಗಳಲ್ಲಿ 6ನೇ ಬಾರಿ ಮಂಡ್ಯ ಪ್ರವಾಸ

ಚುನಾವಣೆ ಪೂರ್ವದಲ್ಲಿ ಕ್ಷೇತ್ರದತ್ತ ಅಷ್ಟಾಗಿ ಬಾರದ ಸುಮಲತಾ, ತಿಂಗಳಿಗೆ ಒಮ್ಮೆ ಬಂದು ಹೋಗುತ್ತಿದ್ದರು. ಆದರೆ, ಇದೀಗ 15 ದಿನಗಳಲ್ಲಿ 6ನೇ ಬಾರಿ ಮಂಡ್ಯ ಪ್ರವಾಸ ಮಾಡುತ್ತಿದ್ದಾರೆ. ಟಿಕೆಟ್ ಸಿಗುವ ನಿರೀಕ್ಷೆಯಲ್ಲಿರುವ ರೇಬಲ್ ಲೇಡಿ, ಮಂಡ್ಯ ಜಿಲ್ಲೆಯಾದ್ಯಂತ ಹಲವು ಕಾಮಗಾರಿಗಳ ಉದ್ಘಾಟನೆ ಸೇರಿದಂತೆ ಖಾಸಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅದರಲ್ಲೂ ಇಂದು ಇಡೀ ದಿನ ಮಂಡ್ಯ ಜಿಲ್ಲೆಯಲ್ಲಿಯೇ ಓಡಾಟ ಮಾಡಿ, ಪ್ರಮುಖವಾಗಿ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಕಾಲಭೈರವೇಶ್ವರನ ದರ್ಶನ ಪಡೆದು, ನಿರ್ಮಲಾನಂದ ಸ್ವಾಮೀಜಿಗಳ ಆರ್ಶೀವಾದ ಕೂಡ ಪಡೆದಿದ್ದಾರೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ: ಮಂಡ್ಯ ಕಣದಿಂದ ಹಿಂದೆ ಸರಿದ ನಿಖಿಲ್, ಯಾರಿಗೆ ಸಿಗಲಿದೆ ಮೈತ್ರಿಯ ಟಿಕೆಟ್, ಮಹತ್ವದ ಸಭೆ

ಇನ್ನು ಕಳೆದ ಬಾರಿ ಚುನಾವಣೆಯಲ್ಲಿ ಪ್ರಚಾರಕ್ಕೂ ಮೊದಲು ನಿರ್ಮಲಾನಂದ ಶ್ರೀಗಳ ಆರ್ಶೀವಾದ ಪಡೆದಿದ್ದರು. ಅದೇ ರೀತಿ ಮೊನ್ನೆ ಸಹಾ ಶ್ರೀಗಳ ಆರ್ಶೀವಾದ ಪಡೆದು, ನಾನು ಪ್ರಚಾರ ಕೂಡ ಆರಂಭಿಸುತ್ತೇನೆ ಎಂದಿದ್ದರು. ಅದರ ಬೆನ್ನಲ್ಲೇ ಇಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀಗಳನ್ನ ಭೇಟಿ ಮಾಡಿ, ಆರ್ಶೀವಾದ ಪಡೆದಿದ್ದಾರೆ. ಒಟ್ಟಾರೆ ಟಿಕೆಟ್ ಘೋಷಣೆಗೂ ಮೊದಲೇ ಹಾಲಿ ಸಂಸದೆ ತಮ್ಮ ಕ್ಷೇತ್ರದಲ್ಲಿ ಫುಲ್ ಆಕ್ಟೀವ್ ಆಗಿದ್ದು, ಸುಮಲತಾ ನಡೆ ಸಾಕಷ್ಟು ಕುತೂಹಲ ಮೂಡಿಸುತ್ತಿದೆ. ಹಾಗಾದರೆ ರೇಬಲ್ ಲೇಡಿಗೆ ಟಿಕೆಟ್ ಸಿಗುತ್ತಾ ಇಲ್ಲವೇ, ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?