AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನಿ ಆರ್​ಸಿಬಿ ತಂಡ ಖರೀದಿಸೋಣ: ಮಳವಳ್ಳಿ ಆರ್​ಸಿಬಿ ಅಭಿಮಾನಿಗಳ ಕರೆ

ಆರ್‌ಸಿಬಿ ಮ್ಯಾನೇಜ್ಮೆಂಟ್ ವಿರುದ್ಧ ಮಂಡ್ಯದ ಮಳವಳ್ಳಿ ​ಆರ್​ಸಿಬಿ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಆಲ್ ಇಂಡಿಯಾ ಆರ್‌ಸಿಬಿ ಅಭಿಮಾನಿ ಸಂಘವು ಆರ್‌ಸಿಬಿ ತಂಡವನ್ನು ಖರೀದಿಸಲು ಮುಂದಾಗಿದೆ. ಮತದಾನದ ಮೂಲಕ ಆಟಗಾರರನ್ನು ಆಯ್ಕೆ ಮಾಡಲಾಗುವುದು ಎಂದು ಪೋಸ್ಟರ್ ಬಿಡುಗಡೆ ಮಾಡಿದೆ.​​ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬನ್ನಿ ಆರ್​ಸಿಬಿ ತಂಡ ಖರೀದಿಸೋಣ: ಮಳವಳ್ಳಿ ಆರ್​ಸಿಬಿ ಅಭಿಮಾನಿಗಳ ಕರೆ
ಆರ್​ಸಿಬಿ
Follow us
ಪ್ರಶಾಂತ್​ ಬಿ.
| Updated By: ವಿವೇಕ ಬಿರಾದಾರ

Updated on:Nov 27, 2024 | 10:49 AM

ಮಂಡ್ಯ, ನವೆಂಬರ್​ 27: ಆರ್‌ಸಿಬಿ (RCB) ಮ್ಯಾನೇಜ್ಮೆಂಟ್ ವಿರುದ್ಧ ಫ್ಯಾನ್ಸ್ ಸಿಡಿದೆದಿದ್ದಾರೆ. ಆಲ್​ ಇಂಡಿಯಾ ಆರ್​ಸಿಬಿ ಫ್ಯಾನ್ಸ್​ ಅಸೋಸಿಯೇಷನ್​ ಆರ್‌ಸಿಬಿ ತಂಡವನ್ನು ಖರೀದಿಸಲು ಮುಂದಾಗಿದೆ. ಪ್ರಸಕ್ತ ಸೀಸನ್​ನಲ್ಲಿ ಆರ್‌ಸಿಬಿ ಮ್ಯಾನೇಜ್ಮೆಂಟ್​ ಪ್ರಮುಖ ಆಟಗಾರರನ್ನ ಖರೀದಿಸದ್ದಕ್ಕೆ ಮಳವಳ್ಳಿ ಆರ್​​ಸಿಬಿ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಹೀಗಾಗಿ, ತಂಡವೂ ನಮ್ಮದೇ, ಕಪ್ಪು ನಮ್ಮದೇ, ಬನ್ನಿ ಆರ್‌ಸಿಬಿ ಮಾಲೀಕತ್ವ ಪಡೆಯೋಣ ಎಂದು ಕರೆ ಕೊಟ್ಟಿದ್ದಾರೆ.

ಆಲ್​ ಇಂಡಿಯಾ ಆರ್​ಸಿಬಿ ಫ್ಯಾನ್ಸ್​ ಅಸೋಸಿಯೇಷನ್​ ವೇದಿಕೆ ಸಿದ್ದವಾಗಿದೆ. ನೋಂದಣಿಗೆ ವೇದಿಕೆ ಸಿದ್ಧವಾಗಿದೆ. ಆರ್​ಸಿಬಿ ಮಲೀಕತ್ವ ಪಡೆಯೋಣ ಎಂಬ ಪೋಸ್ಟರ್​​ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

10 ಲಕ್ಷ ಆರ್‌ಸಿಬಿ ಅಭಿಮಾನಿಗಳಿಂದ ತಲಾ 10 ಸಾವಿರದಂತೆ ಹಣ ಸಂಗ್ರಹ ಮಾಡೋಣ. ಸಂಗ್ರಹವಾದ 1000 ಕೋಟಿ ಹಣದಲ್ಲಿ ತಂಡದ ಆಟಗಾರರನ್ನು ನಾವೇ ಖರೀದಿಸೋಣ. ಅಭಿಮಾನಿಗಳ ಮತದಾನದ ಮೂಲಕ ಆಟಗಾರರ ಖರೀದಿ ಮಾಡಿ, ಪ್ರತಿ ಸದಸ್ಯರಿಗೆ ಸೀಸನ್​ನಲ್ಲಿ ಆರ್‌ಸಿಬಿ ಆಡುವ ಒಂದು ಪಂದ್ಯವನ್ನು ಉಚಿತವಾಗಿ ವೀಕ್ಷಣೆ ಮಾಡಲು ಅವಕಾಶ ನೀಡೋಣ. ಅಭಿಮಾನಿಗಳೇ ಬನ್ನಿ ಆರ್‌ಸಿಬಿ ಮಾಲೀಕರಾಗೋಣ ಎಂದು ಆಲ್​ ಇಂಡಿಯಾ ಆರ್​ಸಿಬಿ ಫ್ಯಾನ್ಸ್​ ಅಸೋಸಿಯೇಷನ್ ಕರೆ ಕೊಟ್ಟಿದೆ. ತಂಡವನ್ನು ಆಯ್ಕೆ ಮಾಡಲು ಕೈ ಜೋಡಿಸಿ ಎಂದು ಮನವಿ ಮಾಡಿದೆ.

ಇದನ್ನೂ ಓದಿ: IPL 2025: 2025 ರ ಐಪಿಎಲ್​ಗೆ ಆರ್​ಸಿಬಿಯ ಬಲಿಷ್ಠ ಪ್ಲೇಯಿಂಗ್ 11

ವೈರಲ್​ ಆದ ಪೋಸ್ಟರ್​ನಲ್ಲಿ ಏನಿದೆ?

  • ಹಾಲಿ RCB ಮಾಲೀಕರಿಂದ ತಂಡವನ್ನು ಅಭಿಮಾನಿಗಳ ಸಂಘಕ್ಕೆ ಖರೀದಿ ಮಾಡಿಕೊಳ್ಳುವ ಮಹತ್ವದ ಗುರಿಯನ್ನು ಹೊಂದಲಾಗಿದೆ.
  • 10 ಲಕ್ಷ ಅಭಿಮಾನಿಗಳಿಂದ ತಲಾ 10 ಸಾವಿರ ರೂ. ಹಣವನ್ನು ಚೇರಿನ ರೂಪದಲ್ಲಿ ಸಂಗ್ರಹಿಸುವ ಮೂಲಕ 1000 ಕೋಟಿ ಹಣ ಸಂಗ್ರಹಿಸುವ ಗುರಿ.
  • ಸಂಗ್ರಹವಾದ ಹಣದಿಂದ RCB ತಂಡದ ಮಾಲೀಕತ್ವವನ್ನು ಅಭಿಮಾನಿಗಳ ಸಂಘವೇ ಖರೀದಿಸಿ ತಂಡದಲ್ಲಿ ಯಾವ್ಯಾವ ಆಟಗಾರರನ್ನು ಆಡಿಸಬೇಕೆಂಬುದನ್ನು ಅಭಿಮಾನಿಗಲೇ ವೋಟ್ ಮೂಲಕ ಆಯ್ಕೆ ಮಾಡಿ ಅಂತಹ ಆಟಗಾರರನ್ನು ನಿಯಮದಂತೆ ಬಿಡ್ಡಿಂಗ್‌ನಲ್ಲಿ ಆಯ್ಕೆ ಮಾಡಿಕೊಳ್ಳುವುದೇ ಸಂಘದ ಉದ್ದೇಶ.
  • ಅಭಿಮಾನಿಗಳ ಸಂಘದ 1 ಲಕ್ಷ ಸದಸ್ಯರಲ್ಲಿ 10 ಮಂದಿಯನ್ನು 2 ವರ್ಷಕ್ಕೊಮ್ಮೆ ಚುನಾವಣೆಯ ಮೂಲಕ ಆಯ್ಕೆ ಮಾಡಿ ಬಿಡ್ಡಿಂಗ್‌ನಲ್ಲಿ ತಂಡವನ್ನು ಆಯ್ಕೆ ಮಾಡುವ ಅಧಿಕಾರ ನೀಡುವುದು.
  • ಸಂಘದ ಪ್ರತಿ ಸದಸ್ಯರಿಗೂ ಒಂದು ಬಾರಿ RCB ಆಡುವ ಯಾವುದಾದರೂ ಪಂದ್ಯವನ್ನು ವೀಕ್ಷಿಸಲು ಉಚಿತವಾಗಿ ಅವಕಾಶ ನೀಡಲಾಗುವುದು.
  • ಆಯ್ಕೆ ಮಂಡಲಿಯ ಬೇಜವಾಬ್ದಾರಿ ವಿರುದ್ಧ ಮಳವಳ್ಳಿ RCB ಅಭಿಮಾನಿಗಳಿಂದ/ ಕ್ರಾಂತಿಕಾರಿ ನಿರ್ಧಾರ. ನಮ್ಮ ತಂಡ. ನಮ್ಮದೇ ಮಾಲೀಕತ್ವ ಎಂದು ಕರೆ ಕೊಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:20 am, Wed, 27 November 24

Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Devotional: ಬೂದುಗುಂಬಳ ಕಾಯಿಯ ಮಹತ್ವ ಹಾಗೂ ಅದರ ಉಪಯೋಗ ತಿಳಿಯಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ