AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ ನಂಜಯ್ಯ

ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ.

ಮಂಡ್ಯ ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ ನಂಜಯ್ಯ
ಕಲಾವಿದ ನಂಜಯ್ಯ
TV9 Web
| Edited By: |

Updated on: Jan 08, 2023 | 10:37 AM

Share

ಮಂಡ್ಯ: ರಂಗಸ್ಥಳದಲ್ಲೇ ಕುಸಿದುಬಿದ್ದು ಕಲಾವಿದ ನಂಜಯ್ಯ(46)ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದ ನಾಟಕದ ವೇಳೆ ಘಟನೆ ನಡೆದಿದೆ. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿದರು.

ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಕಲಾವಿದರು ಸೇರಿಕೊಂಡು ಪೌರಾಣಿಕ ನಾಟಕ ಆಯೋಜಿಸಿದ್ದರು. ಡ್ರಾಮಾ‌ಸೀನ್ಸ್ ಸೆಟ್​​ನಲ್ಲಿ ಕುರುಕ್ಷೇತ್ರ ಎಂಬ ಪೌರಾಣಿಕ ನಾಟಕದಲ್ಲಿ ಸೈಂಧವ ಮತ್ತು ಸಾರ್ಥಕಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚಿ ನಟನೆ ಮಾಡುವ ವೇಳೆ ವೇದಿಕೆಯಲ್ಲೇ ಹೃದಯಾಘಾತ ಸಂಭವಿಸಿ ಕಲಾವಿದ ನಂಜಯ್ಯ ಪ್ರಾಣ ಬಿಟ್ಟಿದ್ದಾರೆ.

ಇದನ್ನೂ ಓದಿ: ಯುವಕನಿಂದ ಅಪ್ರಾಪ್ತ ಬಾಲಕನ ಅಪಹರಣ: ಕಾರಣ ಕೇಳಿ ದಂಗಾದ ಪೊಲೀಸರು

ಕಲಾವಿದ ನಂಜಯ್ಯ ಕುಸಿದು ಬೀಳುತ್ತಿದ್ದಂತೆ ಕೂಡಲೇ ಅಲ್ಲಿದ್ದ ಜನರು ಮಳವಳ್ಳಿ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಪರೀಕ್ಷಿಸಿದ ವೈದ್ಯರು ಕಲಾವಿದ ವೇದಿಕೆಯಲ್ಲೇ ಮೃತಪಟ್ಟಿರುವುದಾಗಿ ಖಚಿತ ಪಡಿಸಿದ್ದಾರೆ. ಇದೀಗ ಕಲಾವಿದ ನಂಜಯ್ಯ ಅವರಿಗೆ ವೇದಿಕೆಯಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದಿರುವ ವಿಡಿಯೋ ವೈರಲ್ ಆಗುತ್ತಿದೆ. ಪತಿಯ ಸಾವಿನ ಕೊನೆ ಕ್ಷಣವನ್ನು ಕಂಡ ಪತ್ನಿ, ಮಗಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ