Mandya News: ಸಿದ್ದರಾಮಯ್ಯ ಹೇಳಿಲ್ವಾ ಫ್ರೀ ಎಂದು, ಕರೆಂಟ್ ಬಿಲ್ ಕಟ್ಟಲ್ಲವೆಂದು ಆವಾಜ್ ಹಾಕಿದ ಮಂಡ್ಯದ ವ್ಯಕ್ತಿ
ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ ಉಚಿತದ ಗ್ಯಾರಂಟಿ ಈಗ ಮಂಡ್ಯದಲ್ಲಿ ಚೆಸ್ಕಾಂ ಸಿಬ್ಬಂದಿಯ ತಲೆನೋವಿಗೆ ಕಾರಣವಾಗಿದೆ.
ಮಂಡ್ಯ: ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ 200 ಯುನಿಟ್ ವಿದ್ಯುತ್ (Free Electricity) ಉಚಿತದ ಗ್ಯಾರಂಟಿ ಈಗ ಮಂಡ್ಯದಲ್ಲಿ ಚೆಸ್ಕಾಂ ಸಿಬ್ಬಂದಿಯ ತಲೆನೋವಿಗೆ ಕಾರಣವಾಗಿದೆ. ಜನರು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ವ್ಯಕ್ತಿಯೊಬ್ಬರು ಚೆಸ್ಕಾಂ ಸಿಬ್ಬಂದಿ ಬಳಿ ಶುಲ್ಕ ಪಾವತಿ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಗ್ಯಾರಂಟಿ ಜಾರಿಗೊಳಿಸದಿದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿರುವ ಘಟನೆ ಮಂಡ್ಯದ ಎಲೆಚಾಕನಹಳ್ಳಿಯಲ್ಲಿ ನಡೆದಿದೆ.
ಸಿದ್ದರಾಮಯ್ಯ ಹೇಳಿಲ್ವಾ ನಿಂಗೂ ಫ್ರೀ ನಂಗೂ ಫ್ರೀ ಅಂತಾ ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದು ವಿದ್ಯುತ್ ಬಿಲ್ ವಸೂಲಿಗೆ ಹೋದ ಚೆಸ್ಕಾಂ ಸಿಬ್ಬಂದಿಗೆ ವ್ಯಕ್ತಿ ಅವಾಜ್ ಹಾಕುತ್ತಿರುವುದು ವಿಡಿಯೋದಲ್ಲಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ