AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವವಾಗಿ ಪತ್ತೆ

Subbanna Ayyappan: ಮೇ 7 ರಿಂದ ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಅವರ ಶವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ‌ ನದಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನದಿ ದಡದಲ್ಲಿ ಅವರ ಸ್ಕೂಟರ್ ಕೂಡ ಪತ್ತೆಯಾಗಿದೆ.

ಮಂಡ್ಯ: ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವವಾಗಿ ಪತ್ತೆ
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್
Follow us
ದಿಲೀಪ್​, ಚೌಡಹಳ್ಳಿ
| Updated By: ಗಂಗಾಧರ​ ಬ. ಸಾಬೋಜಿ

Updated on:May 11, 2025 | 8:16 AM

ಮಂಡ್ಯ, ಮೇ 11: ಕೃಷಿ ವಿಜ್ಞಾನಿ, ಪದ್ಮಶ್ರೀ ಪುರಸ್ಕೃತ ಡಾ.ಸುಬ್ಬಣ್ಣ ಅಯ್ಯಪ್ಪನ್ (70) ಅವರ ಶವ ಜಿಲ್ಲೆಯ ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಕಾವೇರಿ‌ ನದಿಯಲ್ಲಿ ಪತ್ತೆ (Found Dead) ಆಗಿರುವಂತಹ ಘಟನೆ ನಡೆದಿದೆ. ಮೈಸೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ನಿ ಜೊತೆಗೆ ವಾಸವಾಗಿದ್ದ ಡಾ.ಸುಬ್ಬಣ್ಣ ಅಯ್ಯಪ್ಪನ್ (Subbanna Ayyappan)​, ಮೇ 07 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಸದ್ಯ ಶ್ರೀರಂಗಪಟ್ಟಣ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನಿನ್ನೆ ಸಂಜೆ ನದಿಯಲ್ಲಿ ಅಪರಿಚಿತ ಶವದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ. ಸ್ಥಳಕ್ಕೆ ಬಂದು ಶವ ಮೇಲೆ ತೆಗೆದು ನೋಡಿದಾಗ ವಿಜ್ಞಾನಿಯ ಗುರುತು ಪತ್ತೆ ಆಗಿದೆ. ನದಿ ದಡದಲ್ಲಿ ವಿಜ್ಞಾನಿ ಅಯ್ಯಪ್ಪನ್ ಅವರ ಸ್ಕೂಟರ್​ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಡಾ.ಸುಬ್ಬಣ್ಣ ಅಯ್ಯಪ್ಪನ್​ ಮನೆಯಿಂದ ಹೊರಗೆ ಹೋದರವರು ವಾಪಸ್ಸ್​ ಆಗಿರಲಿಲ್ಲ. ಹೀಗಾಗಿ ಕುಟುಂಬಸ್ಥರು ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ

ಡಾ.ಸುಬ್ಬಣ್ಣ ಅಯ್ಯಪ್ಪನ್​ ಅವರು ಮೈಸೂರಿನ ವಿಶ್ವೇಶ್ವರ ನಗರ ಕೈಗಾರಿಕಾ ಪ್ರದೇಶದ ಅಕ್ಕಮಹಾದೇವಿ ರಸ್ತೆಯಲ್ಲಿ ವಾಸಿಸುತ್ತಿದ್ದರು. ಅವರ ಸ್ಕೂಟರ್ ನದಿಯ ದಡದಲ್ಲಿ ಪತ್ತೆಯಾಗಿದೆ. ಮೂರು ದಿನಗಳ ಹಿಂದೆ ಶ್ರೀರಂಗಪಟ್ಟಣದ ಸಾಯಿಬಾಬಾ ಆಶ್ರಮದ ಬಳಿ ನದಿಗೆ ಹಾರಿದ್ದಾರೆ ಎಂಬುವುದು ಪ್ರಾಥಮಿಕ ತನಿಖೆಯಲ್ಲಿ  ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ
Image
ಮಂಡ್ಯದ ರೈತರ ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಹುದ್ದೆಗಳಿಗೆ ನೇಮಕಾತಿ
Image
ನಾಪತ್ತೆಯಾಗಿದ್ದ ತಂದೆ, ಮಕ್ಕಳ ಮೃತ ದೇಹಗಳು KRS​ ವಿಸಿ ನಾಲೆಯಲ್ಲಿ ಪತ್ತೆ
Image
ಕಬಡ್ಡಿ ವೇಳೆ ಪ್ರೇಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾವು, 13 ಜನರಿಗೆ ಗಾಯ
Image
ಐಶ್ವರ್ಯ ಗೌಡ, ವಿನಯ್ ಕುಲಕರ್ಣಿ ಮನೆಗಳ ಮೇಲೆ ಇ.ಡಿ ದಾಳಿ

ನದಿ ದಡಕ್ಕೆ ಧ್ಯಾನಕ್ಕಾಗಿ ಹೋಗುತ್ತಿದ್ದರು: ವಕೀಲ ಶ್ರೀನಿಧಿ

ಸುಬ್ಬಣ್ಣ ಅಯ್ಯಪ್ಪನ್ ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಮತ್ತು ಶ್ರೀರಂಗಪಟ್ಟಣದ ಕಾವೇರಿ ನದಿಯ ದಡಕ್ಕೆ ಧ್ಯಾನಕ್ಕಾಗಿ ಹೋಗುತ್ತಿದ್ದರು. ದುರದೃಷ್ಟವಶಾತ್, ಅವರ ದೇಹವು ನದಿಯಲ್ಲಿ ಪತ್ತೆಯಾಗಿದೆ ಎಂದು ಅವರ ಸಂಬಂಧಿ ಮತ್ತು ವಕೀಲ ಶ್ರೀನಿಧಿ ಎಂಬುವವರು ಹೇಳಿದ್ದಾರೆ.

ಇದನ್ನೂ ಓದಿ: ದೇವನಹಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್‌ ಸಮೀಕ್ಷೆಗೆ ರೈಲ್ವೆ ಇಲಾಖೆ ಸಮ್ಮತಿ

1955 ಡಿಸೆಂಬರ್ 10 ರಂದು ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಡಾ.ಸುಬ್ಬಣ್ಣ ಅಯ್ಯಪ್ಪನ್ ಅವರು ಜನಿಸಿದರು. 1975 ಮಂಗಳೂರಿನಲ್ಲಿ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ (BFSc) ಮತ್ತು 1977 ಮೀನುಗಾರಿಕೆ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (MFSc) ಪಡೆದರು. 1998ರಲ್ಲಿ ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದುಕೊಂಡಿದ್ದಾರೆ.

ಹಲವೆಡೆ ಸೇವೆ

ಇನ್ನು ಡಾ.ಸುಬ್ಬಣ್ಣ ಅಯ್ಯಪ್ಪನ್​ ಅವರು ಕೃಷಿ ಮತ್ತು ಮೀನುಗಾರಿಕೆ (ಜಲಕೃಷಿ) ವಿಜ್ಞಾನಿಯಾಗಿದ್ದರು. ದೆಹಲಿ, ಮುಂಬೈ, ಭೋಪಾಲ್, ಬರಾಕ್‌ಪುರ, ಭುವನೇಶ್ವರ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ಭುವನೇಶ್ವರದ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಫ್ರೆಶ್‌ವಾಟರ್ ಅಕ್ವಾಕಲ್ಚರ್ (ಸಿಐಎಫ್‌ಎ) ನಿರ್ದೇಶಕರಾಗಿ, ಮುಂಬೈನ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಫಿಶರೀಸ್ ಎಜುಕೇಶನ್ (ಸಿಐಎಫ್‌ಇ) ನಿರ್ದೇಶಕರಾಗಿ, ಯೂನಿಯನ್ ಡಿಪಾರ್ಟ್‌ಮೆಂಟ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಅಂಡ್ ಎಜುಕೇಶನ್ (ಡಿಎಆರ್ಇ) ಕಾರ್ಯದರ್ಶಿಯಾಗಿ, ಹೈದರಾಬಾದ್‌ನ ನ್ಯಾಷನಲ್ ಫಿಶರೀಸ್ ಡೆವಲಪ್‌ಮೆಂಟ್ ಬೋರ್ಡ್‌ನ ಸ್ಥಾಪಕ ಮುಖ್ಯ ಕಾರ್ಯನಿರ್ವಾಹಕರಾಗಿ ಮತ್ತು ನ್ಯಾಷನಲ್ ಅಕ್ರಿಡಿಟೇಶನ್ ಬೋರ್ಡ್ ಫಾರ್ ಟೆಸ್ಟಿಂಗ್ ಆ್ಯಂಡ್​ ಕ್ಯಾಲಿಬ್ರೇಶನ್ ಲ್ಯಾಬೋರೇಟರೀಸ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಾಕ್​ ಡ್ರಿಲ್​ ನಡೆಸಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ಸುಬ್ಬಣ್ಣ ಅಯ್ಯಪ್ಪನ್​ ಅವರು ಭಾರತದ ‘ನೀಲಿ ಕ್ರಾಂತಿ’ಯಲ್ಲಿ ಪ್ರಮುಖ ಪಾತ್ರ ವಹಿಸಿದವರು. 2022 ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದರು. ಕೃಷಿ ಸಂಶೋಧನೆಯಲ್ಲಿ ಸಕ್ರಿಯರಾಗಿರುವುದರ ಜೊತೆಗೆ, ವಿವಿಧ ಸಂಸ್ಥೆಗಳನ್ನು ನಿರ್ಮಿಸಿದ್ದಾರೆ. ಇಂಫಾಲ್‌ನಲ್ಲಿರುವ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯದ (CAU) ಉಪಕುಲಪತಿಯಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:52 am, Sun, 11 May 25