AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣ: ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿ ಐವರಿಗೆ 7 ವರ್ಷ ಶಿಕ್ಷೆ

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿದಂತೆ ಐದು ಮಂದಿಗೆ ತಲಾ 7 ವರ್ಷ ಶಿಕ್ಷೆ, 5 ಕೋಟಿ ದಂಡ ವಿಧಿಸಿ ಬೆಂಗಳೂರಿನ ಸಿಬಿಐ ಕೋರ್ಟ್‌ ಆದೇಶ ಹೊರಡಿಸಿದೆ. 

ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣ: ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿ ಐವರಿಗೆ 7 ವರ್ಷ ಶಿಕ್ಷೆ
ಸಿಬಿಐ
TV9 Web
| Edited By: |

Updated on:Sep 09, 2022 | 9:33 PM

Share

ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಕೆಬ್ಬಳ್ಳಿ ಆನಂದ್ ಸೇರಿದಂತೆ ಐದು ಮಂದಿಗೆ ತಲಾ 7 ವರ್ಷ ಶಿಕ್ಷೆ, 5 ಕೋಟಿ ದಂಡ ವಿಧಿಸಿ ಬೆಂಗಳೂರಿನ ಸಿಬಿಐ ಕೋರ್ಟ್‌ ಆದೇಶ ಹೊರಡಿಸಿದೆ.  ಕೆಬ್ಬಳ್ಳಿ ಆನಂದ್, ಹೆಚ್.ಎಸ್.ನಾಗಲಿಂಗಸ್ವಾಮಿ, ಚಂದ್ರಶೇಖರ್, ಹೆಚ್.ಕೆ.ನಾಗರಾಜ, ಕೆ.ಬಿ.ಹರ್ಷನ್‌ಗೆ ಶಿಕ್ಷೆಗೊಳಗಾದ ಆಪಾಧಿತರು.

ಪ್ರಕರಣದ ಹಿನ್ನೆಲೆ

2013ರಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಿಗೆ 5 ಕೋಟಿ ಹಣವನ್ನು ಪಡೆದು ಹಿಂತಿರುಗಿಸದೆ ವಂಚಿದ್ದ ಆರೋಪದ ಮೇರೆಗೆ ಕಾಂಗ್ರೆಸ್ ಮುಖಂಡ ಕೆಬ್ಬಹಳ್ಳಿ ಆನಂದ್​ ಸೇರಿ ಒಟ್ಟು 11 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಆರೋಪಿಗಳು ಮಂಡ್ಯ ಮಾತ್ರವಲ್ಲದೆ ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿಗೂ ಇದೇ ಆರೋಪಿಗಳು 5 ಕೋಟಿ ರೂ ಹಣ ವಂಚನೆ ಮಾಡಿರುವುದಾಗಿ ಬೆಳಕಿಗೆ ಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರ ಜುಲೈ 5 ರಂದು ಮಂಡ್ಯದ ಪಶ್ಚಿಮ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿತ್ತು. ಈ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು. ಸಿಬಿಐ ವಿಚಾರಣೆ ವೇಳೆ 6 ಜನರನ್ನು ಕೈಬಿಟ್ಟು 5 ಮಂದಿಯ ವಿರುದ್ಧ ಅಂದಿನ ಸಿಬಿಐ ಡಿವೈಎಸ್ಪಿ ಕೆ.ವೈ. ಗುರುಪ್ರಸಾದ್ ನೇತೃತ್ವದ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.

ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಐದು ಮಂದಿ ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ, ತಲಾ ಒಂದೊಂದು ಕೋಟಿಯಂತೆ ಐದು ಕೋಟಿ ದಂಡ ವಿಧಿಸಿ ತೀರ್ಪು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:05 pm, Fri, 9 September 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?