AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಆರಂಭವಾದ ಮಂಡ್ಯದ ಮೈಶುಗರ್ ಕಾರ್ಖಾನೆ, ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ಮೊದಲ ಅನುದಾನ

ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮಂಡ್ಯದಲ್ಲಿರುವ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್.ಪಾಟೀಲ್ ಚಾಲನೆ ನೀಡಿದರು.​ ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಿದ ಸಿಎಂ, ಡಿಸಿಎಂಗೆ ಕೃತಜ್ಞತೆ ಸಲ್ಲಿಸಿದರು.

ಕೊನೆಗೂ ಆರಂಭವಾದ ಮಂಡ್ಯದ ಮೈಶುಗರ್ ಕಾರ್ಖಾನೆ, ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ಮೊದಲ ಅನುದಾನ
ಮಂಡ್ಯ ಸಕ್ಕರೆ ಕಾರ್ಖಾನೆ ಪ್ರಾರಂಭ
ಕಿರಣ್ ಹನುಮಂತ್​ ಮಾದಾರ್
|

Updated on: Jun 16, 2023 | 1:30 PM

Share

ಮಂಡ್ಯ: ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮಂಡ್ಯ(Mandya)ದಲ್ಲಿರುವ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್(Shivanand Patil)ಚಾಲನೆ ನೀಡಿದರು. ಹೌದು 2023-24ನೇ ಸಾಲಿನ ಕಬ್ಬು ನುರಿಯುವ ಹಂಗಾಮಿಗೆ ಚಾಲನೆ ಸಕ್ಕರೆ ಸಚಿವರು ಚಾಲನೆ ನೀಡಿದ್ದು, ಅವರಿಗೆ ಸಚಿವ ಚಲುವರಾಯಸ್ವಾಮಿ(Chaluvaraya Swamy) ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದಾರೆ. ಬಾಯ್ಲರ್‌ಗೆ ಬೆಂಕಿ‌ ಹಾಕುವ ಮುನ್ನ ಮೈಶುಗರ್‌ನಲ್ಲಿ‌ ಪುರೋಹಿತ ವರ್ಗ ವಿಶೇಷ ಪೂಜೆ ಹಾಗೂ‌ ಹೋಮ‌ ನಡೆಸಿದರು. ಈ ವೇಳೆ ಮೈಶುಗರ್‌ ಕಾರ್ಖಾನೆ‌ಗೆ ಅಡ್ಡಿ-ಅಡತಡೆಗಳು ಎದುರಾಗದಂತೆ ಪ್ರಾರ್ಥಿಸಿದರು.

ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದೆ. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಿದ್ದು, ಜಿಲ್ಲೆಯ ರೈತರ ಪರವಾಗಿ ಸಿಎಂ, ಡಿಸಿಎಂಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಜೂನ್ ಅಂತ್ಯದಲ್ಲಿ ಕಬ್ಬು ನುರಿಯುವ ಕಾರ್ಯ ಆರಂಭವಾಗಲಿದೆ. ಯಾವ ಸಮಸ್ಯೆ ಬಾರದಂತೆ ಮೈಶುಗರ್ ಕಾರ್ಖಾನೆ ನಡೆಯಲಿದೆ ಎಂದರು.

ಇದನ್ನೂ ಓದಿ:Bidar Sugar Mill: ರಾಜಕೀಯಕ್ಕೆ ಬಲಿಯಾಯ್ತಾ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ -ಆಡಳಿತಾರೂಢ ಬಿಜೆಪಿ ಸರ್ಕಾರ ಹೇಳಿದ್ದೇನು, ಮಾಡಿದ್ದೇನು?

ಇದೇ ಸಂದರ್ಭದಲ್ಲಿ APMC ಕಾಯ್ದೆ ವಾಪಾಸ್ ವಿಚಾರ ‘ನಾವು ಕೊಟ್ಟ ಭರವಸೆಗಳು ಹಂತ ಹಂತವಾಗಿ ಈಡೇರಿಸುತ್ತೇವೆ. ವಿದ್ಯುತ್ ದರ ಜಾಸ್ತಿ, ಕಡಿಮೆ ಮಾಡುವುದಕ್ಕೆ ನಿಗಮವಿದೆ. ಸರ್ಕಾರದ ಕೈಲಿ ಆ ತೀರ್ಮಾನ ಇರಲ್ಲ. ಯಾವ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿಲ್ಲ. ಅನಾವಶ್ಯಕವಾಗಿ ಟೆಂಡರ್‌ಗೆ ಹೋಗಿರುವ ಯೋಜನೆಗಳನ್ನು ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ರಾಜ್​​ಕುಮಾರ್ ಸಮಾಧಿ ಬಗ್ಗೆ ಪ್ರಶ್ನೆ, ವಿತಂಡ ವಾದ ಮುಂದುವರೆಸಿದ ಚೇತನ್
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದರು: ವಿದ್ಯಾರ್ಥಿ ಗಂಭೀರ ಆರೋಪ
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ತೆಲಂಗಾಣದಲ್ಲಿ ತಂದೆ ಮಗಳ ರಾಜಕೀಯ ಜಿದ್ದು: ಹೊಸ ಪಕ್ಷ ಘೋಷಿಸಿದ ಕವಿತಾ!
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ಕಲಬುರಗಿ ಜಿಲ್ಲೆ ಡಿಸಿ ಕಚೇರಿಯಲ್ಲೇ ಇಲ್ಲ ಕುಡಿಯುವ ನೀರು
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತ ಅಭಿಮಾನಿಗಳು!
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ರಣವೀರ್ ಸಿಂಗ್ ದೈವಕ್ಕೆ ಅವಮಾನ ಮಾಡಿದ ಪ್ರಕರಣ ಇತ್ಯರ್ಥ; ಷರತ್ತುಗಳೇನು?
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ
ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ