AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಆರಂಭವಾದ ಮಂಡ್ಯದ ಮೈಶುಗರ್ ಕಾರ್ಖಾನೆ, ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ಮೊದಲ ಅನುದಾನ

ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮಂಡ್ಯದಲ್ಲಿರುವ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್.ಪಾಟೀಲ್ ಚಾಲನೆ ನೀಡಿದರು.​ ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಿದ ಸಿಎಂ, ಡಿಸಿಎಂಗೆ ಕೃತಜ್ಞತೆ ಸಲ್ಲಿಸಿದರು.

ಕೊನೆಗೂ ಆರಂಭವಾದ ಮಂಡ್ಯದ ಮೈಶುಗರ್ ಕಾರ್ಖಾನೆ, ಸಿದ್ದರಾಮಯ್ಯ ಸರ್ಕಾರದಿಂದ ಸಿಕ್ತು ಮೊದಲ ಅನುದಾನ
ಮಂಡ್ಯ ಸಕ್ಕರೆ ಕಾರ್ಖಾನೆ ಪ್ರಾರಂಭ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 16, 2023 | 1:30 PM

Share

ಮಂಡ್ಯ: ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಮಂಡ್ಯ(Mandya)ದಲ್ಲಿರುವ ಮೈಶುಗರ್ ಸಕ್ಕರೆ ಕಾರ್ಖಾನೆಗೆ ಸಚಿವ ಶಿವಾನಂದ ಎಸ್ ಪಾಟೀಲ್(Shivanand Patil)ಚಾಲನೆ ನೀಡಿದರು. ಹೌದು 2023-24ನೇ ಸಾಲಿನ ಕಬ್ಬು ನುರಿಯುವ ಹಂಗಾಮಿಗೆ ಚಾಲನೆ ಸಕ್ಕರೆ ಸಚಿವರು ಚಾಲನೆ ನೀಡಿದ್ದು, ಅವರಿಗೆ ಸಚಿವ ಚಲುವರಾಯಸ್ವಾಮಿ(Chaluvaraya Swamy) ಹಾಗೂ ಸ್ಥಳೀಯ ಶಾಸಕರು ಸಾಥ್ ನೀಡಿದ್ದಾರೆ. ಬಾಯ್ಲರ್‌ಗೆ ಬೆಂಕಿ‌ ಹಾಕುವ ಮುನ್ನ ಮೈಶುಗರ್‌ನಲ್ಲಿ‌ ಪುರೋಹಿತ ವರ್ಗ ವಿಶೇಷ ಪೂಜೆ ಹಾಗೂ‌ ಹೋಮ‌ ನಡೆಸಿದರು. ಈ ವೇಳೆ ಮೈಶುಗರ್‌ ಕಾರ್ಖಾನೆ‌ಗೆ ಅಡ್ಡಿ-ಅಡತಡೆಗಳು ಎದುರಾಗದಂತೆ ಪ್ರಾರ್ಥಿಸಿದರು.

ಈ ವೇಳೆ ಕೃಷಿ ಇಲಾಖೆ ಸಚಿವ ಎನ್​.ಚಲುವರಾಯಸ್ವಾಮಿ ಮಾತನಾಡಿ ‘ಮಂಡ್ಯಕ್ಕೆ ಕಾಂಗ್ರೆಸ್ ಸರ್ಕಾರದ ಮೊದಲ ಅನುದಾನ ನೀಡಲಾಗಿದೆ. ಮೈಶುಗರ್ ಕಾರ್ಖಾನೆ ಪುನಾರಂಭಿಸಲು 50 ಕೋಟಿ ಮಂಜೂರು ಮಾಡಿದ್ದು, ಜಿಲ್ಲೆಯ ರೈತರ ಪರವಾಗಿ ಸಿಎಂ, ಡಿಸಿಎಂಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ಜೂನ್ ಅಂತ್ಯದಲ್ಲಿ ಕಬ್ಬು ನುರಿಯುವ ಕಾರ್ಯ ಆರಂಭವಾಗಲಿದೆ. ಯಾವ ಸಮಸ್ಯೆ ಬಾರದಂತೆ ಮೈಶುಗರ್ ಕಾರ್ಖಾನೆ ನಡೆಯಲಿದೆ ಎಂದರು.

ಇದನ್ನೂ ಓದಿ:Bidar Sugar Mill: ರಾಜಕೀಯಕ್ಕೆ ಬಲಿಯಾಯ್ತಾ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ -ಆಡಳಿತಾರೂಢ ಬಿಜೆಪಿ ಸರ್ಕಾರ ಹೇಳಿದ್ದೇನು, ಮಾಡಿದ್ದೇನು?

ಇದೇ ಸಂದರ್ಭದಲ್ಲಿ APMC ಕಾಯ್ದೆ ವಾಪಾಸ್ ವಿಚಾರ ‘ನಾವು ಕೊಟ್ಟ ಭರವಸೆಗಳು ಹಂತ ಹಂತವಾಗಿ ಈಡೇರಿಸುತ್ತೇವೆ. ವಿದ್ಯುತ್ ದರ ಜಾಸ್ತಿ, ಕಡಿಮೆ ಮಾಡುವುದಕ್ಕೆ ನಿಗಮವಿದೆ. ಸರ್ಕಾರದ ಕೈಲಿ ಆ ತೀರ್ಮಾನ ಇರಲ್ಲ. ಯಾವ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿಲ್ಲ. ಅನಾವಶ್ಯಕವಾಗಿ ಟೆಂಡರ್‌ಗೆ ಹೋಗಿರುವ ಯೋಜನೆಗಳನ್ನು ಪರಿಶೀಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!