AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ, ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ

ಹಲವು ಏಳು ಬೀಳುಗಳ ನಡುವೆ ಇತ್ತೀಚೆಗಷ್ಟೇ ಆರಂಭವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ, ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ
ಮೈಶುಗರ್​​ ಕಾರ್ಖಾನೆ
Follow us
ಪ್ರಶಾಂತ್​ ಬಿ.
| Updated By: ರಮೇಶ್ ಬಿ. ಜವಳಗೇರಾ

Updated on: Jul 17, 2023 | 12:45 PM

ಮಂಡ್ಯ, (ಜುಲೈ 17): ಹಲವು ಏಳು ಬೀಳುಗಳ ನಡುವೆ ಇತ್ತೀಚೆಗಷ್ಟೇ ಆರಂಭವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ರಾಜ್ಯದಲ್ಲಿರುವ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಎನಿಸಿಕೊಂಡಿರುವ ಮಂಡ್ಯದ ಮೈಶುಗರ್ ಕಾರ್ಖಾನೆ(Mandya Mysugar factory) ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ಜು.6ರಂದು ಕಬ್ಬು ಅರೆಯುವಿಕೆ ಕಾರ್ಯ ಆರಂಭಿಸಿದ್ದ ಕಾರ್ಖಾನೆ 9 ದಿನಗಳಲ್ಲೇ ತಾಂತ್ರಿಕ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ(ಜುಲೈ 16) ರಾತ್ರಿಯಿಂದ ಕಬ್ಬು ಅರೆಯುವಿಕೆ ಕಾರ್ಯ ಸ್ಥಗಿತಗೊಂಡಿದೆ. ಹೀಗಾಗಿ ನೂರಾರು ಕಬ್ಬಿನ ಲಾರಿಗಳು, ಎತ್ತಿನ ಗಾಡಿಗಳು ಫ್ಯಾಕ್ಟರಿ ಆವರಣದಲ್ಲಿ ನಿಂತುಕೊಂಡಿದ್ದು, 12 ಗಂಟೆ ನಂತರ ಮತ್ತೆ ಕಾರ್ಖಾನೆ ಪುನರಾರಂಭವಾಗಿದೆ,

ನಿತ್ಯ 3 ಸಾವಿರ ಟನ್ ಕಬ್ಬು ಅರೆಯುವಿಕೆ ಗುರಿ ಹೊಂದಿರುವ ಕಾರ್ಖಾನೆಗೆ ನುರಿತ ತಜ್ಞರು ಇಲ್ಲದ ಕಾರಣ ಸ್ಥಗಿತಗೊಂಡಿತ್ತು ಎಂದು ರೈತರು ಆರೋಪಿಸುತ್ತಿದ್ದಾರೆ. ಈ ಹಿಂದೆ ಎಂಡಿ ಆಗಿದ್ದ ತಾಂತ್ರಿಕತೆಯಲ್ಲಿ ನಿಪುಣತೆ ಹೊಂದಿದ್ದ ಅಪ್ಪಸಾಹೇಬ್ ಪಾಟೀಲ್​ ಅವರನ್ನು ಸರ್ಕಾರ ಬೇರೆ ವಿಭಾಗಕ್ಕೆ ವರ್ಗಾಯಿಸಿದೆ. ಅಪ್ಪಸಾಹೇಬ್ ಹೋದ ಕೆಲ ಗಂಟೆಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಕಾರ್ಖಾನೆ ಸ್ಥಗಿತವಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣ ಹೇಳಿದ್ದಾರೆ.

ಹಲವು ಏಳು ಬೀಳುಗಳ ನಡುವೆ ಜುಲೈ 6 ರಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದರು. ಆದ್ರೆ, ಕಬ್ಬು ಅರೆಯುವಿಕೆ ಕಾರ್ಯ ಆರಂಭಿಸಿ 9 ದಿನಗಳಲ್ಲೇ ಕಬ್ಬು ಅರೆಯುವಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆವರಣದಲ್ಲಿ ಕಬ್ಬು ತುಂಬಿರುವ ನೂರಾರು ಲಾರಿಗಳು, ಎತ್ತಿನ ಗಾಡಿಗಳು ನಿಂತಿಕೊಂಡಿವೆ.

ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ