AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ, ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ

ಹಲವು ಏಳು ಬೀಳುಗಳ ನಡುವೆ ಇತ್ತೀಚೆಗಷ್ಟೇ ಆರಂಭವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ, ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ
ಮೈಶುಗರ್​​ ಕಾರ್ಖಾನೆ
ಪ್ರಶಾಂತ್​ ಬಿ.
| Edited By: |

Updated on: Jul 17, 2023 | 12:45 PM

Share

ಮಂಡ್ಯ, (ಜುಲೈ 17): ಹಲವು ಏಳು ಬೀಳುಗಳ ನಡುವೆ ಇತ್ತೀಚೆಗಷ್ಟೇ ಆರಂಭವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ರಾಜ್ಯದಲ್ಲಿರುವ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಎನಿಸಿಕೊಂಡಿರುವ ಮಂಡ್ಯದ ಮೈಶುಗರ್ ಕಾರ್ಖಾನೆ(Mandya Mysugar factory) ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ಜು.6ರಂದು ಕಬ್ಬು ಅರೆಯುವಿಕೆ ಕಾರ್ಯ ಆರಂಭಿಸಿದ್ದ ಕಾರ್ಖಾನೆ 9 ದಿನಗಳಲ್ಲೇ ತಾಂತ್ರಿಕ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ(ಜುಲೈ 16) ರಾತ್ರಿಯಿಂದ ಕಬ್ಬು ಅರೆಯುವಿಕೆ ಕಾರ್ಯ ಸ್ಥಗಿತಗೊಂಡಿದೆ. ಹೀಗಾಗಿ ನೂರಾರು ಕಬ್ಬಿನ ಲಾರಿಗಳು, ಎತ್ತಿನ ಗಾಡಿಗಳು ಫ್ಯಾಕ್ಟರಿ ಆವರಣದಲ್ಲಿ ನಿಂತುಕೊಂಡಿದ್ದು, 12 ಗಂಟೆ ನಂತರ ಮತ್ತೆ ಕಾರ್ಖಾನೆ ಪುನರಾರಂಭವಾಗಿದೆ,

ನಿತ್ಯ 3 ಸಾವಿರ ಟನ್ ಕಬ್ಬು ಅರೆಯುವಿಕೆ ಗುರಿ ಹೊಂದಿರುವ ಕಾರ್ಖಾನೆಗೆ ನುರಿತ ತಜ್ಞರು ಇಲ್ಲದ ಕಾರಣ ಸ್ಥಗಿತಗೊಂಡಿತ್ತು ಎಂದು ರೈತರು ಆರೋಪಿಸುತ್ತಿದ್ದಾರೆ. ಈ ಹಿಂದೆ ಎಂಡಿ ಆಗಿದ್ದ ತಾಂತ್ರಿಕತೆಯಲ್ಲಿ ನಿಪುಣತೆ ಹೊಂದಿದ್ದ ಅಪ್ಪಸಾಹೇಬ್ ಪಾಟೀಲ್​ ಅವರನ್ನು ಸರ್ಕಾರ ಬೇರೆ ವಿಭಾಗಕ್ಕೆ ವರ್ಗಾಯಿಸಿದೆ. ಅಪ್ಪಸಾಹೇಬ್ ಹೋದ ಕೆಲ ಗಂಟೆಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಕಾರ್ಖಾನೆ ಸ್ಥಗಿತವಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣ ಹೇಳಿದ್ದಾರೆ.

ಹಲವು ಏಳು ಬೀಳುಗಳ ನಡುವೆ ಜುಲೈ 6 ರಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದರು. ಆದ್ರೆ, ಕಬ್ಬು ಅರೆಯುವಿಕೆ ಕಾರ್ಯ ಆರಂಭಿಸಿ 9 ದಿನಗಳಲ್ಲೇ ಕಬ್ಬು ಅರೆಯುವಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆವರಣದಲ್ಲಿ ಕಬ್ಬು ತುಂಬಿರುವ ನೂರಾರು ಲಾರಿಗಳು, ಎತ್ತಿನ ಗಾಡಿಗಳು ನಿಂತಿಕೊಂಡಿವೆ.

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು