ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ, ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ

ಹಲವು ಏಳು ಬೀಳುಗಳ ನಡುವೆ ಇತ್ತೀಚೆಗಷ್ಟೇ ಆರಂಭವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ, ನುರಿತ ತಜ್ಞರಿಲ್ಲದೇ ಪದೇ ಪದೇ ತಾಂತ್ರಿಕ ಸಮಸ್ಯೆ
ಮೈಶುಗರ್​​ ಕಾರ್ಖಾನೆ
Edited By:

Updated on: Jul 17, 2023 | 12:45 PM

ಮಂಡ್ಯ, (ಜುಲೈ 17): ಹಲವು ಏಳು ಬೀಳುಗಳ ನಡುವೆ ಇತ್ತೀಚೆಗಷ್ಟೇ ಆರಂಭವಾಗಿದ್ದ ಮಂಡ್ಯದ ಮೈಶುಗರ್ ಕಾರ್ಖಾನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ. ರಾಜ್ಯದಲ್ಲಿರುವ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಎನಿಸಿಕೊಂಡಿರುವ ಮಂಡ್ಯದ ಮೈಶುಗರ್ ಕಾರ್ಖಾನೆ(Mandya Mysugar factory) ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದೆ. ಜು.6ರಂದು ಕಬ್ಬು ಅರೆಯುವಿಕೆ ಕಾರ್ಯ ಆರಂಭಿಸಿದ್ದ ಕಾರ್ಖಾನೆ 9 ದಿನಗಳಲ್ಲೇ ತಾಂತ್ರಿಕ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ನಿನ್ನೆ(ಜುಲೈ 16) ರಾತ್ರಿಯಿಂದ ಕಬ್ಬು ಅರೆಯುವಿಕೆ ಕಾರ್ಯ ಸ್ಥಗಿತಗೊಂಡಿದೆ. ಹೀಗಾಗಿ ನೂರಾರು ಕಬ್ಬಿನ ಲಾರಿಗಳು, ಎತ್ತಿನ ಗಾಡಿಗಳು ಫ್ಯಾಕ್ಟರಿ ಆವರಣದಲ್ಲಿ ನಿಂತುಕೊಂಡಿದ್ದು, 12 ಗಂಟೆ ನಂತರ ಮತ್ತೆ ಕಾರ್ಖಾನೆ ಪುನರಾರಂಭವಾಗಿದೆ,

ನಿತ್ಯ 3 ಸಾವಿರ ಟನ್ ಕಬ್ಬು ಅರೆಯುವಿಕೆ ಗುರಿ ಹೊಂದಿರುವ ಕಾರ್ಖಾನೆಗೆ ನುರಿತ ತಜ್ಞರು ಇಲ್ಲದ ಕಾರಣ ಸ್ಥಗಿತಗೊಂಡಿತ್ತು ಎಂದು ರೈತರು ಆರೋಪಿಸುತ್ತಿದ್ದಾರೆ. ಈ ಹಿಂದೆ ಎಂಡಿ ಆಗಿದ್ದ ತಾಂತ್ರಿಕತೆಯಲ್ಲಿ ನಿಪುಣತೆ ಹೊಂದಿದ್ದ ಅಪ್ಪಸಾಹೇಬ್ ಪಾಟೀಲ್​ ಅವರನ್ನು ಸರ್ಕಾರ ಬೇರೆ ವಿಭಾಗಕ್ಕೆ ವರ್ಗಾಯಿಸಿದೆ. ಅಪ್ಪಸಾಹೇಬ್ ಹೋದ ಕೆಲ ಗಂಟೆಗಳಲ್ಲಿ ತಾಂತ್ರಿಕ ಸಮಸ್ಯೆಯಿಂದ ಕಾರ್ಖಾನೆ ಸ್ಥಗಿತವಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕೃಷ್ಣ ಹೇಳಿದ್ದಾರೆ.

ಹಲವು ಏಳು ಬೀಳುಗಳ ನಡುವೆ ಜುಲೈ 6 ರಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಗೆ ಚಾಲನೆ ನೀಡಿದ್ದರು. ಆದ್ರೆ, ಕಬ್ಬು ಅರೆಯುವಿಕೆ ಕಾರ್ಯ ಆರಂಭಿಸಿ 9 ದಿನಗಳಲ್ಲೇ ಕಬ್ಬು ಅರೆಯುವಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆವರಣದಲ್ಲಿ ಕಬ್ಬು ತುಂಬಿರುವ ನೂರಾರು ಲಾರಿಗಳು, ಎತ್ತಿನ ಗಾಡಿಗಳು ನಿಂತಿಕೊಂಡಿವೆ.

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us