AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಕೋಮುಗಲಭೆ ಕೇಸ್: ದೂರು ನೀಡಿದ್ದ ಪೊಲೀಸ್ ಅಧಿಕಾರಿಯೇ ಸಸ್ಪೆಂಡ್

Nagamangala Violence: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಈ ಗಲಭೆ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಕೋಮುಗಲಭೆ ಪ್ರಕರಣಕ್ಕೆ ಟ್ವಿಸ್ಟ್​​ ಸಿಕ್ಕಿದೆ.

ನಾಗಮಂಗಲ ಕೋಮುಗಲಭೆ ಕೇಸ್: ದೂರು ನೀಡಿದ್ದ ಪೊಲೀಸ್ ಅಧಿಕಾರಿಯೇ ಸಸ್ಪೆಂಡ್
ನಾಗಮಂಗಲ ಪಿಎಸ್​ಐ ರವಿ
ಪ್ರಶಾಂತ್​ ಬಿ.
| Edited By: |

Updated on:Oct 08, 2024 | 10:25 AM

Share

ಮಂಡ್ಯ, ಅಕ್ಟೋಬರ್​​ 08: ನಾಗಮಂಗಲದಲ್ಲಿ ಗಣೇಶ ವಿಷರ್ಜನೆ ವೇಳೆ ನಡೆದ ಕೋಮುಗಲಭೆ (Nagamangala Violence) ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಈ ಗಲಭೆ ಪ್ರಕರಣಕ್ಕೆ ಈಗ ಟ್ವಿಸ್ಟ್​​ ಸಿಕ್ಕಿದೆ. ಗಲಭೆ ಬಗ್ಗೆ ದೂರು ನೀಡಿದ್ದ ಅಧಿಕಾರಿಯನ್ನೇ ಅಮಾನತು ಮಾಡಲಾಗಿದೆ.

ನಾಗಮಂಗಲ ಕೋಮುಗಲಭೆ ಬಳಿಕ ದೂರು ನೀಡಿದ್ದ ನಾಗಮಂಗಲ ಟೌನ್ ಠಾಣೆ ಪಿಎಸ್​ಐ ಬಿ.ಜೆ.ರವಿ ಅವರನ್ನು ಅಮಾನತು ಮಾಡಿ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಗಣೇಶ ವಿಸರ್ಜನೆ ಮಾಡುತ್ತಿದ್ದವರ ಪ್ರಚೋದನೆಯಿಂದ ಗಲಭೆ ಸೃಷ್ಷಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪಿಎಸ್ಐ ರವಿ ಅವರನ್ನು ಅಮಾನತು ಮಾಡಲಾಗಿದೆ. ಪಿಎಸ್ಐ ಬಿಜೆ ರವಿ ಜೊತೆಗೆ ಪೊಲೀಸ್​ ಪೇದೆ ​ ರಮೇಶ್ ಅವರನ್ನೂ ಕೂಡ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?, ಇನ್ಸ್‌ಪೆಕ್ಟರ್ ಅಮಾನತು

ಗಣೇಶ ವಿಷರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣ ಸಂಬಂಧ ಒಟ್ಟು ‌ನಾಲ್ವರ ತಲೆದಂಡವಾಗಿದೆ. ಈ ಹಿಂದೆ ಡಿವೈಎಸ್​ಪಿ ಸುಮಿತ್, ಪಿಐ ಅಶೋಕ್ ಅಮಾನತು ಆಗಿದ್ದರು. ಇದೀಗ ಮತ್ತಿಬ್ಬರನ್ನು ಅಮಾನತು ಮಾಡಿ ಎಸ್​ಪಿ ಬಾಲದಂಡಿ ಆದೇಶ ಹೊರಡಿಸಿದ್ದಾರೆ.

ಏನಿದು ಘಟನೆ?

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ದರ್ಗಾ ಬಳಿ ನಡೆದ ಗಲಭೆಯಲ್ಲಿ 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಲಾಗಿತ್ತು. ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಹಿಂದೂಗಳ ಗುಂಪು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದಂತೆ ಮುಸ್ಲಿಮರ ಗುಂಪು ಅಲ್ಲಾಹು ಅಕ್ಬರ್ ಘೋಷಣೆ ಕೂಗಿ ಗಲಾಟೆಯೆಬ್ಬಿಸಿದ್ದರು. ಬಳಿಕ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದರು.

ರಿಸರ್ವ್ ಪೊಲೀಸ್ ಸಿಬ್ಬಂದಿ ಊಟಕ್ಕೆ ಹೋದಾಗ ನಡೆಯಿತು ಗಲಭೆ!

ಗಲಾಟೆ ಹಿಂದೆ ಪೊಲೀಸರ ಲೋಪ ದೋಷ ಎದ್ದು ಕಾಣುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆಗೆ ಕಾವಲಿಗೆ 24 ಜನ ಡಿಎಆರ್​ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಈ ಸಿಬ್ಬಂದಿಗೆ ಊಟ ಕೊಡಿಸಲು ನಾಗಮಂಗಲ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಹಿಂದೇಟು ಹಾಕಿದ್ದರು. ಬದಲಿಗೆ 24 ಮಂದಿ ಡಿಎಆರ್​ ಸಿಬ್ಬಂದಿಯನ್ನು ಊಟಕ್ಕೆ ಬೇರೆ ಕಡೆ ಕಳುಹಿಸಿದ್ದರು. ರಿಸರ್ವ್ ಪೊಲೀಸ್ ಸಿಬ್ಬಂದಿ ‌ವಾಹನ ಹೊರಟ ಅರ್ಧ ಗಂಟೆ ನಂತರ ಕೋಮುಗಲಭೆ ಆರಂಭವಾಗಿತ್ತು.

ಗಲಾಟೆ ಆರಂಭವಾದಾಗ‌ ಸ್ಥಳದಲ್ಲಿ ಕೇವಲ ಏಳು ಸಿಬ್ಬಂದಿ‌ ಮಾತ್ರ ಇದ್ದರು. ಈ ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು‌ ಪರದಾಡಿದರು. ಪಿಎಸ್​ಐ ರವಿ ಸೇರಿದಂತೆ ಹಲವು ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ದಾಳಿ ಮಾಡಿದ್ದರು. ರಿಸರ್ವ್ ಸಿಬ್ಬಂದಿ ವಾಪಸ್‌ ಬರುವಷ್ಟರಲ್ಲಿ ಪರಿಸ್ಥಿತಿ ಕೈಮೀರಿತ್ತು. ಕಲ್ಲು, ದೊಣ್ಣೆ, ಮಾರಕಾಸ್ತ್ರ, ಪೆಟ್ರೋಲ್ ಬಾಂಬ್ ಎಸೆಯುವ ಜೊತೆಗೆ ‌ಅಂಗಡಿ ಮುಂಗಟ್ಟಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆಯಲಾಗಿತ್ತು. ಹೀಗಾಗಿ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗೃಹ ಇಲಾಖೆ ಅಮಾನತು ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:18 am, Tue, 8 October 24

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ