AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಸಾವಿನ ಮನೆ ಸೇರಿದ

ಮೂರು ದಿನಗಳ ಹಿಂದೆ ಮೈಸೂರಿನಲ್ಲಿ ಅದ್ಧೂರಿಯಾಗಿ ವಿವಾಹವಾಗಿತ್ತು. ತಾನು ಪ್ರೀತಿಸಿ ಯುವತಿಯನ್ನು ಮಂಡ್ಯದ ಶಶಾಂಕ್​ ವಿವಾಹವಾಗಿದ್ದರು. ಟೆಕ್ಕಿ ಶಶಾಂಕ್​ ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹೊಸ ಜೀವನಕ್ಕೆ ಕಾಲಿಟ್ಟಿದ್ದ ಶಶಾಂಕ್ ಸಾವಿನ ಮನೆಯನ್ನು ಸೇರಿದ್ದಾರೆ. ಅಷ್ಟಕ್ಕೂ ಟೆಕ್ಕಿ ಶಶಾಂಕ್​ಗೆ ಆಗಿದ್ದೇನು. ಸುಖ ಸಂಸಾರ ನಡೆಸಬೇಕಿದ್ದ ಶಶಾಂಕ್​ಗೆ ಆಗಿದ್ದೇನು? ಈ ಸುದ್ದಿ ಓದಿ.

3 ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಸಾವಿನ ಮನೆ ಸೇರಿದ
ಮೃತ ಶಶಾಂಕ್
ಪ್ರಶಾಂತ್​ ಬಿ.
| Edited By: |

Updated on:Mar 05, 2025 | 10:17 AM

Share

ಮಂಡ್ಯ, ಮಾರ್ಚ್​ 05: ಮೂರು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್ (28) ಸಾವು ಮೃತ ದುರ್ದೈವಿ. ಶಶಾಂಕ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿಯಾಗಿದ್ದನು. ಜಾರ್ಖಂಡ್ ಮೂಲದ ಯುವತಿ ಅಷ್ಣಾ ಕೂಡ ಶಶಾಂಕ್​ ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದಾರೆ.

ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರಿಂದ ಇಬ್ಬರ ನಡುವೆ ಸ್ನೇಹ ಬೆಳೆದಿದೆ. ನಂತರ ಸ್ನೇಹ ಪ್ರೇಮಕ್ಕೆ ತಿರುಗಿದೆ. ಇಬ್ಬರೂ ಕಳೆದ ಒಂದು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ತಮ್ಮ ಪ್ರೇಮದ ವಿಚಾರವನ್ನು ಇಬ್ಬರೂ ತಮ್ಮ ಕುಟುಂಬಸ್ಥರಿಗೆ ತಿಳಿಸಿ, ಮದುವೆಯಾಗುವುದಾಗಿ ಹೇಳಿದ್ದಾರೆ.

ಮದುವೆಗೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿದ್ದಾರೆ. ಮನೆಯವರ ಸಮ್ಮುಖದಲ್ಲಿ ಪ್ರೇಮಿಗಳು ಕಳೆದ ಭಾನುವಾರ ಮೈಸೂರಿನ ರೆಸಾರ್ಟ್​ ಒಂದರಲ್ಲಿ ಮದುವೆಯಾಗಿದ್ದಾರೆ. ಶಶಾಂಕ್​ಗೆ​ ಮದುವೆ ದಿನ  ಸ್ವಲ್ಪ ಜ್ವರ ಕಾಣಿಸಿಕೊಂಡಿತ್ತು. ಈ  ವಿಚಾರವನ್ನು ಶಶಾಂಕ್​ ತನ್ನ ಸ್ನೇಹಿತರ ಮುಂದೆ ಹೇಳಿಕೊಂಡಿದ್ದನು.

ಇದನ್ನೂ ಓದಿ
Image
ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ
Image
ಪಲ್ಟಿ ಹೊಡೆದ ಆಟೋ ಮೇಲೆತ್ತಿದ ಶಾಸಕ: ಮಾನವೀಯತೆ ಮೆರೆದ ಹೆಚ್​​ಸಿ ಬಾಲಕೃಷ್ಣ
Image
ಹುಡ್ಗಿ ಸಲುವಾಗಿ ಯುವಕನ ಮೇಲೆ ಕ್ರೌರ್ಯ: ಫೇಸ್​ಬುಕ್ ಲೈವ್​​ನಲ್ಲೇ ಹಲ್ಲೆ
Image
ವಿಷ ಸೇವಿಸಿ ಬಳಿಕ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಸಾವು: ಕಾರಣವೇನು?

ನಂತರ, ಶಶಾಂಕ್​ ಮತ್ತು ಆತನ ಕುಟುಂಬಸ್ಥರು ಬೆಂಗಳೂರಿಗೆ ಬಂದು ವಾಸವಾಗಿದ್ದರು. ಮಂಗಳವಾರ (ಮಾ.04)  ಶಶಾಂಕ್​ಗೆ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಪೋಷಕರು ಕೂಡಲೇ ಶಶಾಂಕ್​ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಅಷ್ಟೊತ್ತಿಗಾಗಲೇ ಶಶಾಂಕ್ ಮೃತಪಟ್ಟಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 am, Wed, 5 March 25

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ