Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಕಳ್ಳತನ, ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ

Mandya News: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಎಂಬ ಗ್ರಾಮವೊಂದರಲ್ಲಿ ತಡರಾತ್ರಿ ರೈತ ಲೋಕೇಶ್ ಎಂಬುವವರಿಗೆ ಸೇರಿದ 5 ಮೇಕೆಗಳು ಕಳ್ಳತನವಾಗಿವೆ. ಕಳ್ಳರು ಗ್ರಾಮಕ್ಕೆ ಆಗಮಿಸಿದ್ದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯ ಕೊಟ್ಟಿಗೆಯಲ್ಲಿ ಕಟ್ಟು ಹಾಕಿದ್ದ ಮೇಕೆಗಳು ಕಳ್ಳತನವಾಗಿವೆ.

ಮಂಡ್ಯ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಕಳ್ಳತನ, ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ
ಖದೀಮರ ಕಾರು ಸಿಸಿಟಿವಿಯಲ್ಲಿ ಸೆರೆ
Follow us
ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Sep 03, 2023 | 12:54 PM

ಮಂಡ್ಯ, ಸೆ.03: ಚಾಲಾಕಿ ಕಳ್ಳರ ಕೈಚಳಕಕ್ಕೆ ಕೊಟ್ಟಿಗೆಯಲ್ಲಿ ಕಟ್ಟಿದ್ದ 5 ಮೇಕೆಗಳು ಕಳ್ಳತನವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಎಂಬ ಗ್ರಾಮವೊಂದರಲ್ಲಿ ತಡರಾತ್ರಿ ರೈತ ಲೋಕೇಶ್ ಎಂಬುವವರಿಗೆ ಸೇರಿದ 5 ಮೇಕೆಗಳು ಕಳ್ಳತನವಾಗಿವೆ. ಕಳ್ಳರು ಗ್ರಾಮಕ್ಕೆ ಆಗಮಿಸಿದ್ದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯ ಕೊಟ್ಟಿಗೆಯಲ್ಲಿ ಕಟ್ಟು ಹಾಕಿದ್ದ ಮೇಕೆಗಳು ಕಳ್ಳತನವಾಗಿವೆ. ಖದೀಮರು ಮನೆಯ ಬೀಗ ಮುರಿದು 5 ಮೇಕೆಗಳನ್ನು ಕದ್ದಿದ್ದಾರೆ.

ಕಳ್ಳತನದ ವೇಳೆ ಮನೆಯವರು ಎಚ್ಚರಗೊಳ್ಳಬಹುದು ಎನ್ನುವ ಕಾರಣಕ್ಕೆ ಕೊಟ್ಟಿಗೆಯ ಸಮೀಪದ ಮೂರು ಮನೆಗಳ ಹೊರ ಭಾಗದಿಂದ ಬಾಗಿಲು ಹಾಕಿ ಕಳ್ಳತನ ಮಾಡಲಾಗಿದೆ. ಘಟನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ನಷ್ಟ ಎದುರಾಗಿದೆ. ಮಾರುತಿ 800 ವಾಹನದಲ್ಲಿ ಗ್ರಾಮಕ್ಕೆ ಬಂದಿದ್ದ ಖದೀಮರು ಮೇಕೆ ಕದ್ದಿದ್ದಾರೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್, ತಸ್ತಿಕ್​​ ಹಣ ರಿಲೀಸ್​

ಮೇಕೆ ಕದ್ದರೆಂದು ಯುವಕರಿಗೆ ಚಿತ್ರಹಿಂಸೆ ಮಾಡಿದ ಗ್ರಾಮಸ್ಥರು

ತೆಲಂಗಾಣದ ಮಂದಮರ್ರಿಯಲ್ಲಿ ಮೇಕೆ ಕದ್ದ ಶಂಕೆಯಲ್ಲಿ ದಲಿತ ವ್ಯಕ್ತಿ ಹಾಗೂ ಯುವಕನಿಗೆ ಚಿತ್ರಹಿಂಸೆ ನೀಡಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಹಿಂಡಿನಲ್ಲಿ ಮೇಕೆ ಕದ್ದಿದ್ದಾರೆ ಎಂಬ ಶಂಕೆಯಿಂದ ಮಂದಮರ್ರಿಯಲ್ಲಿ ದಲಿತ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ತಲೆಕೆಳಗಾಗಿ ಕಟ್ಟಿ ಹಾಕಿ ಹೊಗೆ ಹಾಕಿ, ಪ್ರಾಣಿಗಳಂತೆ ಥಳಿಸಿದ್ದಾರೆ ಎಂದು ಬೆಳ್ಳಂಪಳ್ಳಿ ಪೊಲೀಸರು ತಿಳಿಸಿದ್ದಾರೆ. ಮಂದಮರ್ರಿಯ ಅಂಗಡಿ ಬಜಾರ್‌ನ ಸ್ವರೂಪ್ ಮತ್ತು ಅವರ ಪುತ್ರ ಶ್ರೀನಿವಾಸ್‌ ಅವರು ಪಟ್ಟಣದ ಹೊರವಲಯದ ಗಂಗನೀಲಪಂಪುಳದಲ್ಲಿ ಕುರಿ ಸಾಕುತ್ತಿದ್ದರು. ಇಪ್ಪತ್ತು ದಿನಗಳ ಹಿಂದೆ ಒಂದು ಮೇಕೆ ನಾಪತ್ತೆಯಾಗಿದೆ. ಕುರುಬ ಬಾಲಕ ತೇಜ (19) ಮತ್ತು ಕಿರಣ್ (30) ಅವರ ಕೈವಾಡವಿದೆ ಆರೋಪಿಸಿ, ಥಳಿಸಿರುವ ಘಟನೆ ನಡೆದಿದೆ. ಸದ್ಯ ಈಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ