AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಕಳ್ಳತನ, ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ

Mandya News: ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಎಂಬ ಗ್ರಾಮವೊಂದರಲ್ಲಿ ತಡರಾತ್ರಿ ರೈತ ಲೋಕೇಶ್ ಎಂಬುವವರಿಗೆ ಸೇರಿದ 5 ಮೇಕೆಗಳು ಕಳ್ಳತನವಾಗಿವೆ. ಕಳ್ಳರು ಗ್ರಾಮಕ್ಕೆ ಆಗಮಿಸಿದ್ದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯ ಕೊಟ್ಟಿಗೆಯಲ್ಲಿ ಕಟ್ಟು ಹಾಕಿದ್ದ ಮೇಕೆಗಳು ಕಳ್ಳತನವಾಗಿವೆ.

ಮಂಡ್ಯ: ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಕಳ್ಳತನ, ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ
ಖದೀಮರ ಕಾರು ಸಿಸಿಟಿವಿಯಲ್ಲಿ ಸೆರೆ
ಪ್ರಶಾಂತ್​ ಬಿ.
| Edited By: |

Updated on: Sep 03, 2023 | 12:54 PM

Share

ಮಂಡ್ಯ, ಸೆ.03: ಚಾಲಾಕಿ ಕಳ್ಳರ ಕೈಚಳಕಕ್ಕೆ ಕೊಟ್ಟಿಗೆಯಲ್ಲಿ ಕಟ್ಟಿದ್ದ 5 ಮೇಕೆಗಳು ಕಳ್ಳತನವಾಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಎಂಬ ಗ್ರಾಮವೊಂದರಲ್ಲಿ ತಡರಾತ್ರಿ ರೈತ ಲೋಕೇಶ್ ಎಂಬುವವರಿಗೆ ಸೇರಿದ 5 ಮೇಕೆಗಳು ಕಳ್ಳತನವಾಗಿವೆ. ಕಳ್ಳರು ಗ್ರಾಮಕ್ಕೆ ಆಗಮಿಸಿದ್ದ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯ ಕೊಟ್ಟಿಗೆಯಲ್ಲಿ ಕಟ್ಟು ಹಾಕಿದ್ದ ಮೇಕೆಗಳು ಕಳ್ಳತನವಾಗಿವೆ. ಖದೀಮರು ಮನೆಯ ಬೀಗ ಮುರಿದು 5 ಮೇಕೆಗಳನ್ನು ಕದ್ದಿದ್ದಾರೆ.

ಕಳ್ಳತನದ ವೇಳೆ ಮನೆಯವರು ಎಚ್ಚರಗೊಳ್ಳಬಹುದು ಎನ್ನುವ ಕಾರಣಕ್ಕೆ ಕೊಟ್ಟಿಗೆಯ ಸಮೀಪದ ಮೂರು ಮನೆಗಳ ಹೊರ ಭಾಗದಿಂದ ಬಾಗಿಲು ಹಾಕಿ ಕಳ್ಳತನ ಮಾಡಲಾಗಿದೆ. ಘಟನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರಿಗೆ ನಷ್ಟ ಎದುರಾಗಿದೆ. ಮಾರುತಿ 800 ವಾಹನದಲ್ಲಿ ಗ್ರಾಮಕ್ಕೆ ಬಂದಿದ್ದ ಖದೀಮರು ಮೇಕೆ ಕದ್ದಿದ್ದಾರೆ. ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕರ್ನಾಟಕದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್, ತಸ್ತಿಕ್​​ ಹಣ ರಿಲೀಸ್​

ಮೇಕೆ ಕದ್ದರೆಂದು ಯುವಕರಿಗೆ ಚಿತ್ರಹಿಂಸೆ ಮಾಡಿದ ಗ್ರಾಮಸ್ಥರು

ತೆಲಂಗಾಣದ ಮಂದಮರ್ರಿಯಲ್ಲಿ ಮೇಕೆ ಕದ್ದ ಶಂಕೆಯಲ್ಲಿ ದಲಿತ ವ್ಯಕ್ತಿ ಹಾಗೂ ಯುವಕನಿಗೆ ಚಿತ್ರಹಿಂಸೆ ನೀಡಿದ್ದ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಹಿಂಡಿನಲ್ಲಿ ಮೇಕೆ ಕದ್ದಿದ್ದಾರೆ ಎಂಬ ಶಂಕೆಯಿಂದ ಮಂದಮರ್ರಿಯಲ್ಲಿ ದಲಿತ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ತಲೆಕೆಳಗಾಗಿ ಕಟ್ಟಿ ಹಾಕಿ ಹೊಗೆ ಹಾಕಿ, ಪ್ರಾಣಿಗಳಂತೆ ಥಳಿಸಿದ್ದಾರೆ ಎಂದು ಬೆಳ್ಳಂಪಳ್ಳಿ ಪೊಲೀಸರು ತಿಳಿಸಿದ್ದಾರೆ. ಮಂದಮರ್ರಿಯ ಅಂಗಡಿ ಬಜಾರ್‌ನ ಸ್ವರೂಪ್ ಮತ್ತು ಅವರ ಪುತ್ರ ಶ್ರೀನಿವಾಸ್‌ ಅವರು ಪಟ್ಟಣದ ಹೊರವಲಯದ ಗಂಗನೀಲಪಂಪುಳದಲ್ಲಿ ಕುರಿ ಸಾಕುತ್ತಿದ್ದರು. ಇಪ್ಪತ್ತು ದಿನಗಳ ಹಿಂದೆ ಒಂದು ಮೇಕೆ ನಾಪತ್ತೆಯಾಗಿದೆ. ಕುರುಬ ಬಾಲಕ ತೇಜ (19) ಮತ್ತು ಕಿರಣ್ (30) ಅವರ ಕೈವಾಡವಿದೆ ಆರೋಪಿಸಿ, ಥಳಿಸಿರುವ ಘಟನೆ ನಡೆದಿದೆ. ಸದ್ಯ ಈಗ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ