AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಅಪೂರ್ಣ

ಅಪೂರ್ಣಗೊಂಡಿರುವ ಬೆಂಗಳೂರು-ಮೈಸೂರು ಹೆದ್ದಾರಿಯ ರಸ್ತೆಗಳು. ಅರ್ಧಕ್ಕೆ ನಿಂತುರುವ ಚರಂಡಿ ಕಾಮಗಾರಿ. ಅಂಡರ್ ಪಾಸ್ ಕೆಳಗೆ ನಿಂತಿರುವ ನೀರು. ಈ ಎಲ್ಲ ದೃಶ್ಯಗಳು ಕಾಣಸಿಗುವುದು ಬೆಂಗಳೂರು-ಮೈಸೂರು ಹೆದ್ದಾರಿ ಅಕ್ಕ-ಪಕ್ಕದಲ್ಲಿ. ಏನಿದು ಹೆದ್ದಾರಿ ಅಪೂರ್ಣ ಕಾಮಗಾರಿ ಕಥೆ? ಈ ಸುದ್ದಿ ಓದಿ...

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಅಪೂರ್ಣ
ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್​ ರಸ್ತೆ, ಚರಂಡಿ
ಪ್ರಶಾಂತ್​ ಬಿ.
| Edited By: |

Updated on: May 17, 2024 | 10:31 AM

Share

ಮಂಡ್ಯ, ಮೇ 17: ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ (Bengaluru-Mysore Highway) ಸದಾ ಒಂದಿಲ್ಲ ಒಂದು ವಿವಾದಗಳಿಂದ ಅಪಖ್ಯಾತಿಗಳಿಸಿದೆ. ಹೆದ್ದಾರಿ ನಿರ್ಮಾಣದ ವೇಳೆ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ವಿಸ್ ರಸ್ತೆಗಳನ್ನು ಕೂಡ ನಿರ್ಮಾಣ ಮಾಡಲಾಗಿದೆ. ಆದರೆ ಸರಿಯಾಗಿ, ಪೂರ್ಣ ಪ್ರಮಾಣದಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡದ ಹಿನ್ನೆಲೆಯಲ್ಲಿ ಅಕ್ಕ-ಪಕ್ಕದ ಗ್ರಾಮದ ವಾಹನ ಸವಾರರು ಪರದಾಡುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.

ಕೋಟ್ಯಾಂತರ ರೂ. ವೆಚ್ಚದಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಿರ್ಮಿಸಲಾಗಿದೆ. ಹೆದ್ದಾರಿ ಪಕ್ಕದ ಗ್ರಾಮಸ್ಥರ ವಾಹನ ಸವಾರರಿಗೆ ಅನುಕೂಲವಾಗಲಿ ಅಂತ ಎರಡು ಕಡೆಗಳಲ್ಲಿ ಸರ್ವಿಸ್ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಪೂರ್ಣ ಹಾಗೂ ವೈಜ್ಞಾನಿಕವಾಗಿ ಸರ್ವಿಸ್ ರಸ್ತೆಯನ್ನು ನಿರ್ಮಾಣ ಮಾಡಿಲ್ಲ. ಇನ್ನು ಸರ್ವಿಸ್ ರಸ್ತೆಯ ಕಾಮಗಾರಿ ಪೂರ್ಣಗೊಳಿಸದೆ ಅರ್ಧಕ್ಕೆ ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ.

ಇನ್ನು ಸರ್ವಿಸ್ ರಸ್ತೆಯ ಎರಡು ಕಡೆಗಳಲ್ಲಿ ಚರಂಡಿಗಳನ್ನ ಪೂರ್ಣಗೊಳಿಸದ ಹಾಗೆ ಬಿಡಲಾಗಿದೆ. ಅವೈಜ್ಞಾನಿಕವಾಗಿ ಕಾಮಗಾರಿ ನಡೆದಿದೆ. ಇದರಿಂದಾಗಿ ಮಳೆ ಬಂದರೆ ಸರಿಯಾಗಿ ನೀರು ಚರಂಡಿಯಲ್ಲಿ ಹರಿಯುತ್ತಿಲ್ಲ. ಹೀಗಾಗಿ ಸರ್ವಿಸ್ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಅಲ್ಲದೆ ಅಂಡರ್ ಪಾಸ್​ನಲ್ಲಿಯೂ ನೀರು ನಿಲ್ಲುತ್ತಿದೆ. ನೀರು ಸರಿಯಾಗಿ ಚರಂಡಿ ಮೂಲಕ ಹರಿದು ಹೋಗದ ಹಿನ್ನೆಲೆಯಲ್ಲಿ ಸರ್ವಿಸ್ ರಸ್ತೆಯ ಪಕ್ಕದಲ್ಲಿ ಇರುವ ಮನೆಗಳಿಗೆ ನುಗ್ಗುತ್ತಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದರೆ ಫೈನ್ ಪಕ್ಕ; 16 ದಿನದಲ್ಲಿ 12 ಸಾವಿರ ಕೇಸ್

ಸರ್ವಿಸ್ ರಸ್ತೆ, ಅಂಡರ್ ಪಾಸ್ ನೀರು ನಿಲ್ಲುವುದರಿಂದ ವಾಹನ ಸವಾರರು ಕೂಡ ಪರದಾಡುವಂತಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಾರೆ ಅವೈಜ್ಷಾನಿಕ ಕಾಮಗಾರಿಯಿಂದ ಸ್ಥಳೀಯರು, ವಾಹನ ಸವಾರರು ಪರದಾಟ ನಡೆಸುವಂತೆ ಆಗಿದ್ದು, ಎನ್​ಹೆಚ್​ಎಐ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ