AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ. ಪಂಗನಾಮ

ಲಿಂಗಾಯತ ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿನಿಗೆ ಮಕ್ಮಲ್ ಟೋಪಿ ಹಾಕಲಾಗಿದ ಆರೋಪಿ ಅರೆಸ್ಟ್

ಮಂಡ್ಯ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ. ಪಂಗನಾಮ
ಆರೋಪಿ ಮಧು ಮತ್ತು ಆರೋಪಿಯಿಂದ ವಶ ಪಡಿಸಿಕೊಳ್ಳಲಾದ ಹಣ
ಆಯೇಷಾ ಬಾನು
|

Updated on: Apr 06, 2023 | 12:48 PM

Share

ಮಂಡ್ಯ: ಮ್ಯಾಟ್ರಿಮೋನಿಯಲ್ಲಿ ವೈಯಕ್ತಿಕ ಮಾಹಿತಿ ಹಾಕುವವರೇ ಎಚ್ಚರ. ನಿಮ್ಮ ವೈಯಕ್ತಿಕ ದಾಖಲೆಯನ್ನ ಪಡೆದು ಸೈಬರ್ ಚೋರರು ವಂಚಿಸಲಿದ್ದಾರೆ. ಸಕ್ಕರೆ ನಾಡು ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಸೈಬರ್ ಚೋರರ ಹಾವಳಿ ಹೆಚ್ಚಾಗುತ್ತಿದೆ. ಲಿಂಗಾಯತ ಮ್ಯಾಟ್ರಿಮೋನಿಯಲ್ಲಿ ಹಾಕಿದ್ದ ಪ್ರಫೈಲೆ ಡಿಟೇಲ್ಸ್ ತೆಗೆದುಕೊಂಡು ವಂಚನೆ ಮಾಡಲಾಗಿದೆ. ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ವಿದ್ಯಾರ್ಥಿನಿಗೆ ಮಕ್ಮಲ್ ಟೋಪಿ ಹಾಕಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಿಂಗಾಯತ್ ಮ್ಯಾಟ್ರಿಮೋನಿ.ಕಾಮ್ (lingayatmatrimony.com) ಮೂಲಕ ವೈಯಕ್ತಿಕ ದಾಖಲೆಯನ್ನ ಪಡೆದು ಮಂಡ್ಯ ಜಿಲ್ಲೆ ಮದ್ದೂರು ಮೂಲದ ಬಿದರಕೋಟೆ ಗ್ರಾಮದ ವಿದ್ಯಾರ್ಥಿನಿಗೆ ಪರಿಚಯವಾದ ವ್ಯಕ್ತಿ ಆಕೆಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ 31 ಲಕ್ಷದ 34 ಸಾವಿರದ 300 ರೂಪಾಯಿ ವಂಚನೆ ಮಾಡಿದ್ದಾನೆ. ಈ ಕುರಿತು ಮಂಡ್ಯದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಬರ್ ಚೋರನ ಬಂಧಿಸಿದ್ದಾರೆ. ಕೆಲಸ ಕೊಡಿಸುವುದಾಗಿ 31 ಲಕ್ಷ ಹಣ ವಂಚಿಸಿದ್ದ ಆರೋಪಿ ಮಧುನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಬಂಧನದ ವೇಳೆ ಸ್ಪೋಟಕ ಸತ್ಯ ಬಯಲಾಗಿದೆ. ಮಂಡ್ಯ, ಮೈಸೂರು, ಕೆ.ಆರ್ ನಗರ, ಕಾಟನ್ ಪೇಟೆ, ಹರಿಹರದಲ್ಲಿಯೂ ಕೆಲಸ ಕೊಡಿಸುವುದಾಗಿ ಈತ ವಂಚಿಸಿಯುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮದುವೆಯಾದ ಒಂದೇ ವರ್ಷಕ್ಕೆ ಪತ್ನಿಯನ್ನು ಮನೆಯಿಂದ ದೂರವಿಟ್ಟ ಪತಿ; ಗಂಡನಿಗಾಗಿ ಧರಣಿ ಕುಳಿತ ಮಡದಿ

ಬಂಧಿತನಿಂದ 10 ಲಕ್ಷ ನಗದು, 2ಲಕ್ಷ 34 ಸಾವಿರ ಮೌಲ್ಯದ ಚಿನ್ನಾಭರಣ, 1ಲಕ್ಷ 30 ಸಾವಿರ ಮೌಲ್ಯದ ಐಫೋನ್, ಒಂದು ಪಲ್ಸರ್ ಬೈಕ್ ಜಪ್ತಿ ಮಾಡಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ವಿದ್ಯಾರ್ಥಿನಿ, ಕಳೆದ ಮಾ.29ರಂದು ಮಂಡ್ಯ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಾನು lingayatmatrimony.com ನಲ್ಲಿ ತನ್ನ ವೈಯಕ್ತಿಕ ವಿವರಗಳನ್ನು ದಾಖಲು ಮಾಡಿದ್ದೆ. ಇದರಿಂದ ವ್ಯಕ್ತಿಯೊಬ್ಬ ಪರಿಚಯವಾಗಿ ತನಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಲಸದ ಸಂಬಂಧ ಡಿ.ಡಿ.ತೆಗೆದುಕೊಳ್ಳಲು, ಸ್ಯಾಲರಿ ಖಾತೆ ಮಾಡಿಸಲು, ಮೊಬೈಲ್ ನಂಬರ್‌ಗೆ ಆಧಾರ್ ಲಿಂಕ್ ಮಾಡಿಸಲು, ಸೆಕ್ಯೂರಿಟಿ ಡಿಪಾಸಿಟ್ ಹಣ ಪಾವತಿಸಲು ಇತ್ಯಾದಿ ಕಾರಣಗಳನ್ನು ನೀಡಿ ಹಂತ ಹಂತವಾಗಿ ಫೋನ್‌, ಗೂಗಲ್‌ಪೇ ಹಾಗೂ ಇತರೆ ಆನ್‌ಲೈನ್‌ ಪೇಮಂಟ್ ಮುಖಾಂತರ ಆ ವ್ಯಕ್ತಿಯ ಹಾಗೂ ಆತನ ಪರಿಚಯಸ್ಥರು ಹಾಗೂ ಆತನ ಸ್ನೇಹಿತರ ಖಾತೆಗಳಿಗೆ ಒಟ್ಟು ₹ 31,34,300 ಗಳನ್ನು ಪಾವತಿಸಿಕೊಂಡು ಕೆಲಸ ಕೊಡಿಸದೇ ಮತ್ತು ಹಣ ವಾಪಸ್‌ ನೀಡದೆ ಮೋಸ ಮಾಡಿದ್ದಾರೆಂದು ದೂರು ದಾಖಲಿಸಿದ್ದರು. ಈ ದೂರಿನ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮತ್ತಷ್ಟು ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ