AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ. ಪಂಗನಾಮ

ಲಿಂಗಾಯತ ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ನಂಬಿಸಿ ವಿದ್ಯಾರ್ಥಿನಿಗೆ ಮಕ್ಮಲ್ ಟೋಪಿ ಹಾಕಲಾಗಿದ ಆರೋಪಿ ಅರೆಸ್ಟ್

ಮಂಡ್ಯ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ. ಪಂಗನಾಮ
ಆರೋಪಿ ಮಧು ಮತ್ತು ಆರೋಪಿಯಿಂದ ವಶ ಪಡಿಸಿಕೊಳ್ಳಲಾದ ಹಣ
Follow us
ಆಯೇಷಾ ಬಾನು
|

Updated on: Apr 06, 2023 | 12:48 PM

ಮಂಡ್ಯ: ಮ್ಯಾಟ್ರಿಮೋನಿಯಲ್ಲಿ ವೈಯಕ್ತಿಕ ಮಾಹಿತಿ ಹಾಕುವವರೇ ಎಚ್ಚರ. ನಿಮ್ಮ ವೈಯಕ್ತಿಕ ದಾಖಲೆಯನ್ನ ಪಡೆದು ಸೈಬರ್ ಚೋರರು ವಂಚಿಸಲಿದ್ದಾರೆ. ಸಕ್ಕರೆ ನಾಡು ಮಂಡ್ಯದಲ್ಲಿ ದಿನದಿಂದ ದಿನಕ್ಕೆ ಸೈಬರ್ ಚೋರರ ಹಾವಳಿ ಹೆಚ್ಚಾಗುತ್ತಿದೆ. ಲಿಂಗಾಯತ ಮ್ಯಾಟ್ರಿಮೋನಿಯಲ್ಲಿ ಹಾಕಿದ್ದ ಪ್ರಫೈಲೆ ಡಿಟೇಲ್ಸ್ ತೆಗೆದುಕೊಂಡು ವಂಚನೆ ಮಾಡಲಾಗಿದೆ. ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ವಿದ್ಯಾರ್ಥಿನಿಗೆ ಮಕ್ಮಲ್ ಟೋಪಿ ಹಾಕಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಿಂಗಾಯತ್ ಮ್ಯಾಟ್ರಿಮೋನಿ.ಕಾಮ್ (lingayatmatrimony.com) ಮೂಲಕ ವೈಯಕ್ತಿಕ ದಾಖಲೆಯನ್ನ ಪಡೆದು ಮಂಡ್ಯ ಜಿಲ್ಲೆ ಮದ್ದೂರು ಮೂಲದ ಬಿದರಕೋಟೆ ಗ್ರಾಮದ ವಿದ್ಯಾರ್ಥಿನಿಗೆ ಪರಿಚಯವಾದ ವ್ಯಕ್ತಿ ಆಕೆಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ 31 ಲಕ್ಷದ 34 ಸಾವಿರದ 300 ರೂಪಾಯಿ ವಂಚನೆ ಮಾಡಿದ್ದಾನೆ. ಈ ಕುರಿತು ಮಂಡ್ಯದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸೈಬರ್ ಚೋರನ ಬಂಧಿಸಿದ್ದಾರೆ. ಕೆಲಸ ಕೊಡಿಸುವುದಾಗಿ 31 ಲಕ್ಷ ಹಣ ವಂಚಿಸಿದ್ದ ಆರೋಪಿ ಮಧುನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಬಂಧನದ ವೇಳೆ ಸ್ಪೋಟಕ ಸತ್ಯ ಬಯಲಾಗಿದೆ. ಮಂಡ್ಯ, ಮೈಸೂರು, ಕೆ.ಆರ್ ನಗರ, ಕಾಟನ್ ಪೇಟೆ, ಹರಿಹರದಲ್ಲಿಯೂ ಕೆಲಸ ಕೊಡಿಸುವುದಾಗಿ ಈತ ವಂಚಿಸಿಯುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮದುವೆಯಾದ ಒಂದೇ ವರ್ಷಕ್ಕೆ ಪತ್ನಿಯನ್ನು ಮನೆಯಿಂದ ದೂರವಿಟ್ಟ ಪತಿ; ಗಂಡನಿಗಾಗಿ ಧರಣಿ ಕುಳಿತ ಮಡದಿ

ಬಂಧಿತನಿಂದ 10 ಲಕ್ಷ ನಗದು, 2ಲಕ್ಷ 34 ಸಾವಿರ ಮೌಲ್ಯದ ಚಿನ್ನಾಭರಣ, 1ಲಕ್ಷ 30 ಸಾವಿರ ಮೌಲ್ಯದ ಐಫೋನ್, ಒಂದು ಪಲ್ಸರ್ ಬೈಕ್ ಜಪ್ತಿ ಮಾಡಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

ವಿದ್ಯಾರ್ಥಿನಿ, ಕಳೆದ ಮಾ.29ರಂದು ಮಂಡ್ಯ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತಾನು lingayatmatrimony.com ನಲ್ಲಿ ತನ್ನ ವೈಯಕ್ತಿಕ ವಿವರಗಳನ್ನು ದಾಖಲು ಮಾಡಿದ್ದೆ. ಇದರಿಂದ ವ್ಯಕ್ತಿಯೊಬ್ಬ ಪರಿಚಯವಾಗಿ ತನಗೆ ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಕೆಲಸ ಕೊಡಿಸುವುದಾಗಿ ನಂಬಿಸಿ ಕೆಲಸದ ಸಂಬಂಧ ಡಿ.ಡಿ.ತೆಗೆದುಕೊಳ್ಳಲು, ಸ್ಯಾಲರಿ ಖಾತೆ ಮಾಡಿಸಲು, ಮೊಬೈಲ್ ನಂಬರ್‌ಗೆ ಆಧಾರ್ ಲಿಂಕ್ ಮಾಡಿಸಲು, ಸೆಕ್ಯೂರಿಟಿ ಡಿಪಾಸಿಟ್ ಹಣ ಪಾವತಿಸಲು ಇತ್ಯಾದಿ ಕಾರಣಗಳನ್ನು ನೀಡಿ ಹಂತ ಹಂತವಾಗಿ ಫೋನ್‌, ಗೂಗಲ್‌ಪೇ ಹಾಗೂ ಇತರೆ ಆನ್‌ಲೈನ್‌ ಪೇಮಂಟ್ ಮುಖಾಂತರ ಆ ವ್ಯಕ್ತಿಯ ಹಾಗೂ ಆತನ ಪರಿಚಯಸ್ಥರು ಹಾಗೂ ಆತನ ಸ್ನೇಹಿತರ ಖಾತೆಗಳಿಗೆ ಒಟ್ಟು ₹ 31,34,300 ಗಳನ್ನು ಪಾವತಿಸಿಕೊಂಡು ಕೆಲಸ ಕೊಡಿಸದೇ ಮತ್ತು ಹಣ ವಾಪಸ್‌ ನೀಡದೆ ಮೋಸ ಮಾಡಿದ್ದಾರೆಂದು ದೂರು ದಾಖಲಿಸಿದ್ದರು. ಈ ದೂರಿನ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ಮತ್ತಷ್ಟು ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ