Mandya News: ಚಲಿಸುತ್ತಿದ್ದ KSRTC ಬಸ್​ನಿಂದ ಬಿದ್ದು ಪ್ರಯಾಣಿಕ ಸಾವು

ಚಲಿಸುತ್ತಿದ್ದ KSRTC ಬಸ್​ನಿಂದ ಆಯತಪ್ಪಿ ಬಿದ್ದು ಪ್ರಯಾಣಿಕ ಸಾವನ್ನಪ್ಪಿರುವಂತಹ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಬಳಿ ನಡೆದಿದೆ.

Mandya News: ಚಲಿಸುತ್ತಿದ್ದ KSRTC ಬಸ್​ನಿಂದ ಬಿದ್ದು ಪ್ರಯಾಣಿಕ ಸಾವು
ಪ್ರಾತಿನಿಧಿಕ ಚಿತ್ರ
Follow us
|

Updated on: Jun 19, 2023 | 5:49 PM

ಮಂಡ್ಯ: ಚಲಿಸುತ್ತಿದ್ದ KSRTC ಬಸ್​ನಿಂದ ಆಯತಪ್ಪಿ ಬಿದ್ದು ಪ್ರಯಾಣಿಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಬಳಿ ನಡೆದಿದೆ. ಚಲುವೇಗೌಡ ಮೃತ ಪ್ರಯಾಣಿಕ. ಬಸ್ ಭರ್ತಿಯಾದ ಹಿನ್ನೆಲೆ ಫುಟ್​​ಬೋರ್ಡ್​ನಲ್ಲಿ ನಿಂತಿದ್ದ ಚಲುವೇಗೌಡ, ಈ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಜಕ್ಕನಹಳ್ಳಿ ಕಡೆಯಿಂದ ಮಂಡ್ಯ ಕಡೆ KSRTC ಬಸ್ ಹೊರಟಿದ್ದಾಗ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮೇಲುಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲೆ ವಿದ್ಯಾರ್ಥಿನಿ ಸಾವು

ಹಾವೇರಿ: ಸರ್ಕಾರಿ ಬಸ್​ನಿಂದ ಬಿದ್ದು ಪ್ರೌಢಶಾಲೆ ವಿದ್ಯಾರ್ಥಿನಿ ಮೃತಪಟ್ಟಿರುವಂತಹ ಘಟನೆ ಇತ್ತೀಚೆಗೆ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿತ್ತು. ಮಧು ಕುಂಬಾರ(14) ಮೃತ ದುರ್ದೈವಿ ವಿದ್ಯಾರ್ಥಿನಿ. ವಾಸನ ಗ್ರಾಮದಿಂದ ಕುಸನೂರು ಶಾಲೆಗೆ ಹೋಗಲು ಸರ್ಕಾರಿ ಬಸ್ ಹತ್ತಿದ್ದ ವಧು,​ ರಶ್​ ಇದ್ದುದರಿಂದ ಬಾಗಿಲ ಬಳಿ ನಿಂತಿದ್ದಳು. ಆದರೆ ನಿಯಂತ್ರಣ ತಪ್ಪಿ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದಳು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸರಣಿ ಅಪಘಾತಕ್ಕೆ ವ್ಯಕ್ತಿ ಸಾವು, ಮತ್ತೊಂದೆಡೆ ದೇವರ ಕೋಣ ದಾಳಿಗೆ ರೈತ ಬಲಿ

ಮಹಿಳೆಯರು ಸೇರಿದಂತೆ ಶಾಲಾ ಮಕ್ಕಳಿಂದ ಸರ್ಕಾರಿ ಬಸ್​​ ತುಂಬಿದೆ. ಈ ಹಿನ್ನೆಲೆಯಲ್ಲಿ ಮಧು ಬಸ್​ ಬಾಗಿಲು ಬಳಿ ನಿಂತುಕೊಂಡಿದ್ದಳು. ರಸ್ತೆ ತಿರುವಿನಲ್ಲಿ ಬಸ್ ಟರ್ನ್​ ಆಗುವಾಗ ಕೈಜಾರಿ ನೆಲಕ್ಕೆ ಬಿದ್ದಿದ್ದಳು. ಈ ಸಂಬಂಧ ಮೃತ ಮಧು ಪೋಷಕರು, ಸರ್ಕಾರಿ ಬಸ್ ಚಾಲಕನ ವಿರುದ್ಧ ಆಡೂರು ಠಾಣೆಗೆ ದೂರು ದಾಖಲಿಸಿದ್ದರು.

ಆಟೋ ಮತ್ತು ಕ್ಯಾಂಟರ್ ನಡುವೆ ಡಿಕ್ಕಿ: 2 ಮಹಿಳೆಯರು ಸಾವು, ಐವರಿಗೆ ಗಾಯ

ದೊಡ್ಡಬಳ್ಳಾಪುರ: ಆಟೋ ಮತ್ತು ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿದ್ದು, ಆಟೋದಲ್ಲಿದ್ದ ಇಬ್ಬರು ಮಹಿಳೆಯರ ದುರ್ಮರಣ ಹೊಂದಿದ್ದು, ಐದು ಜನರಿಗೆ ಗಾಯಗಳಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ತಾಂಡಾ ಬಳಿ ಘಟನೆ ನಡೆದಿದೆ.

ಇದನ್ನೂ ಓದಿ: Gadag News: ಜೀವನದಲ್ಲಿ‌ ಜಿಗುಪ್ಸೆ, ಬಾವಿಗೆ ಹಾರಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಆತ್ಮಹತ್ಯೆಗೆ ಶರಣು

ಆಟದಲ್ಲಿ ಗ್ರಾಮಕ್ಕೆ ಆರು ಜನ ಪ್ರಯಾಣಿಕರು ತೆರಳುತ್ತಿದ್ದರು. ಈ ವೇಳೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಗಾಯಾಳುಗಳು ದೊಡ್ಡಬಳ್ಳಾಪುರ ಸರ್ಕಾರಿ ಆಸ್ವತ್ರೆಗೆ ದಾಖಲು ಚಿಕಿತ್ಸೆ ನೀಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ