AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕಾವೇರಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು; ಮುಗಿಲು ಮುಟ್ಟಿದ ತಾಯಿಯ ಆಕ್ರಂದನ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ (Srirangapatna)ದ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಇಂದು(ಜೂ.13) ನಡೆದಿದೆ. ಘಟನೆ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಮಂಡ್ಯ: ಕಾವೇರಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು; ಮುಗಿಲು ಮುಟ್ಟಿದ ತಾಯಿಯ ಆಕ್ರಂದನ
ಕಾವೇರಿ ನದಿಗೆ ಈಜಲು ಹೋಗಿದ್ದ ಇಬ್ಬರು ಯುವಕರು ಸಾವು
ಪ್ರಶಾಂತ್​ ಬಿ.
| Edited By: |

Updated on:Jun 13, 2024 | 7:38 PM

Share

ಮಂಡ್ಯ, ಜೂ.13: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ (Srirangapatna)ದಲ್ಲಿ ನಡೆದಿದೆ. ಬೆಂಗಳೂರು ಮೂಲದ ವಿಶಾಲ್(19)‌ ಹಾಗೂ ತಮಿಳುನಾಡು ಮೂಲದ ರೋಹನ್ (18) ಮೃತ ಯುವಕರು. ಮೈಸೂರಿನ ಅಜ್ಜಿ ಮನೆಗೆ ಪೋಷಕರೊಂದಿಗೆ ಬಂದಿದ್ದ ಯುವಕರು, ಇಂದು(ಜೂ.13) ಶ್ರೀರಂಗಪಟ್ಟಣದ ನಿಮಿಷಾಂಭ ದೇವಿ ದರ್ಶನಕ್ಕಾಗಿ ಕುಟುಂಬ ಸಮೇತ ಬಂದಿದ್ದರು.

ಮುಗಿಲು ಮುಟ್ಟಿದ ತಾಯಿಯ ಆಕ್ರಂದನ

ಈ ವೇಳೆ ಇತ್ತ ಈಜಲು ಕಾವೇರಿ ನದಿಗಿಳಿದಿದ್ದ ಇಬ್ಬರು ಯುವಕರು ಈಜು ಬಾರದೇ ಸಾವನ್ನಪ್ಪಿದ್ದಾರೆ. ಇನ್ನು ಮಗನನ್ನ ಕಳೆದುಕೊಂಡ ತಾಯಿ ರೋಧನೆ ಮುಗಿಲು ಮುಟ್ಟಿದ್ದು, ಕಾವೇರಿ ನದಿಗಿಳಿದು ಮಕ್ಕಳಿಗಾಗಿ ತಾಯಿ ಕೂಡ ಹುಡುಕಾಟ ನಡೆಸಿದ್ದರು. ‘ನನಗೆ ನನ್ನ ಮಗ ಬೇಕು ಎಂದು ಕಣ್ಣೀರಾಕಿ ಹುಡುಕಾಟ ಮಾಡುತ್ತಿದ್ದಂತೆ ಸ್ಥಳೀಯರು ಸೇರಿಕೊಂಡು ನದಿಯಿಂದ ತಾಯಿಯನ್ನ ಹೊರತಂದಿದ್ದಾರೆ. ಬಳಿಕ ಮೃತರ ಶವ ಮೇಲೆತ್ತಿದ್ದು, ಘಟನೆ ಕುರಿತು ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕೆಸರಿನಲ್ಲಿ ಮುಳುಗಿ ಸಾವು ಬದುಕಿನ ನಡುವೆ ಹೋರಾಡ್ತಿದ್ದ ವ್ಯಕ್ತಿ ರಕ್ಷಿಸಿದ ಪೊಲೀಸರು

ಪಾರ್ಕಿಂಗ್​ ವಿಚಾರಕ್ಕೆ ಇಬ್ಬರು ಹಿರಿಯ ವ್ಯಕ್ತಿಗಳ ಮಧ್ಯೆ ಗಲಾಟೆ; ಚಾಕು ಇರಿತ

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೋರ್ಟ್ ರಸ್ತೆಯಲ್ಲಿ ಪಾರ್ಕಿಂಗ್​ ವಿಚಾರಕ್ಕೆ ಹಿರಿಯ ವ್ಯಕ್ತಿಗಳಾದ ಗುಣಶೇಖರ್ ಹಾಗೂ ಸದಾಶಿವ ಪೈ ನಡುವೆ ಜಗಳವಾಗಿದ್ದು, ಇದು ತಾರಕಕ್ಕೇರಿ ಸದಾಶಿವ ಪೈಯವರ ಕೈಗೆ ಗುಣಶೇಖರ್ ಚಾಕು ಇರಿದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಗಲಾಟೆ ಬಳಿಕ ಗುಣಶೇಖರ್ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:32 pm, Thu, 13 June 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್