ಮಂಡ್ಯ: ವಂದೇ ಭಾರತ್ ರೈಲಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು

ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಡ್ಯ: ವಂದೇ ಭಾರತ್ ರೈಲಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
ವಂದೇ ಭಾರತ್ ಎಕ್ಸ್​ಪ್ರೆಸ್​
Image Credit source: The Hindu
ಆಯೇಷಾ ಬಾನು

Updated on: May 17, 2023 | 7:39 AM

ಮಂಡ್ಯ: ಸೋಮವಾರ ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ(Vande Bharat Express) ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗ್ಗೆ 11.30ರ ಸುಮಾರಿಗೆ ಮಹಿಳೆ ಪ್ಲಾಟ್‌ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು. ರೈಲು ನಿಲ್ದಾಣದಲ್ಲಿದ್ದವರು ಕೂಗಿ ಮಹಿಳೆಯನ್ನು ಎಚ್ಚರಿಸಲು ಪ್ರಯತ್ನಿಸಿದರೂ ವೇಗವಾಗಿ ಬಂದ ರೈಲು ಆಕೆಯ ಮೇಲೆ ಹರಿದಿದೆ. ಈ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Mangaluru news: ಬೈಕಂಪಾಡಿಯಲ್ಲಿ ಗೂಡ್ಸ್​ ರೈಲಿಗೆ ಸಿಲುಕಿ 20 ಎಮ್ಮೆಗಳು ಸಾವು

ಮುಂಬೈ-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯೋಗಿಕ ಸಂಚಾರ ಆರಂಭ

ಮುಂಬೈ-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯೋಗ ಮೇ 16 ರಂದು ಆರಂಭವಾಗಿದ್ದು, ಶೀಘ್ರದಲ್ಲೇ ಈ ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ. ಮುಂಬೈ ಪ್ರಸ್ತುತ ಮೂರು ವಂದೇ ಭಾರತ್ ರೈಲುಗಳನ್ನು ಹೊಂದಿದೆ. ಮುಂಬೈ ಸೆಂಟ್ರಲ್ – ಅಹಮದಾಬಾದ್ – ಗಾಂಧಿನಗರ ರಾಜಧಾನಿ; ಮುಂಬೈ – ಸಾಯಿನಗರ ಶಿರಡಿ, ಮತ್ತು ಮುಂಬೈ – ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು. ನಾಲ್ಕನೇ ವಂದೇ ಭಾರತ್ ಸೆಮಿ-ಹೈ-ಸ್ಪೀಡ್ ರೈಲು ಪ್ರಾಯೋಗಿಕ ಪರೀಕ್ಷೆ ಮುಗಿಯುತ್ತಿದ್ದಂತೆ ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us