AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ದಂಧೆ: ಮಾವಿನಕೆರೆ ತೋಟದ ಮನೆಯಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು

ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳ ಹೊರತಾಗಿಯೂ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣು ಭ್ರೂಣ ಪತ್ತೆ, ಹತ್ಯೆ ನಡೆಯುತ್ತಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.

ಮಂಡ್ಯದಲ್ಲಿ ನಿಲ್ಲದ ಹೆಣ್ಣುಭ್ರೂಣ ಪತ್ತೆ, ಹತ್ಯೆ ದಂಧೆ: ಮಾವಿನಕೆರೆ ತೋಟದ ಮನೆಯಲ್ಲಿ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿಗಳು
ಆರೋಗ್ಯಾಧಿಕಾರಿಗಳ ದಾಳಿ (ಒಳ ಚಿತ್ರದಲ್ಲಿ ಬಂಧಿತ ಆರೋಪಿ ಧನಂಜಯ್)
ಪ್ರಶಾಂತ್​ ಬಿ.
| Edited By: |

Updated on: Aug 16, 2024 | 10:55 AM

Share

ಮಂಡ್ಯ, ಆಗಸ್ಟ್ 16: ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಪತ್ತೆ, ಹತ್ಯೆ ನಡೆಯುತ್ತಿರುವ ವಿಚಾರ ಕರ್ನಾಟಕದಾದ್ಯಂತ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮೇ ತಿಂಗಳಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಆ ವಿಚಾರ ಸಂಬಂಧಿತ ಚರ್ಚೆ ತಣ್ಣಗಾಗುತ್ತಿರುವ ಹೊತ್ತಿನಲ್ಲಿಯೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಮಂಡ್ಯದ ಆಲೆಮನೆ, ಹೆಲ್ತ್ ಕ್ವಾರ್ಟರ್ಸ್​ ಬಳಿಕ ಇದೀಗ ತೋಟದ ಮನೆಯಲ್ಲೂ ಹೆಣ್ಣು ಭ್ರೂಣ ಪತ್ತೆ, ಹತ್ಯೆ ಕೃತ್ಯ ನಡೆಯುತ್ತಿರುವುದು ಗೊತ್ತಾಗಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಭ್ರೂಣಲಿಂಗ ಪತ್ತೆ ಮಾಡುತ್ತಿದ್ದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರಿಂದ ಆರೋಪಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುರುವಾರ ತಡ‌ರಾತ್ರಿ ಡಿಹೆಚ್​ಒ ಡಾ. ಮೋಹನ್ ‌ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ‌ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್​ಗೆ ಬಂದಿದ್ದರು ಎಂಬುದೂ ಗೊತ್ತಾಗಿದೆ.

ಇದನ್ನೂ ಓದಿ: ಪಾಂಡವಪುರದಲ್ಲಿ ಭ್ರೂಣ ಹತ್ಯೆ ಕೇಸ್​ಗೆ ಆಘಾತಕಾರಿ ಟ್ವಿಸ್ಟ್​: ಮಂಡ್ಯ ಆಲೆಮನೆ ಆರೋಪಿ ಹಳೆ ಚಾಳಿ ಬಿಟ್ಟಿಲ್ಲ!

ಸದ್ಯ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆ ಗ್ರೂಪ್​ ಡಿ ಸಿಬ್ಬಂದಿ ಎನ್ನಲಾಗಿದೆ.

ಈ ಹಿಂದೆ ಮಂಡ್ಯದ ಆಲೆಮನೆ ಹಾಗೂ ಹೆಲ್ತ್ ಕ್ವಾರ್ಟರ್ಸ್​​​ನಲ್ಲಿ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ ನಡೆಯುತ್ತಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!