AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಷಿಯಲ್ ಮೀಡಿಯಾದಲ್ಲಿ ಶೋಕಿ ಮಾಡುತ್ತಿದ್ದ ಪಿಡಿಒ ಶಶಿಧರ್ ಸಸ್ಪೆಂಡ್: 1.5 ಕೋಟಿ ರೂ.ಗೂ ಹೆಚ್ಚು ಸರ್ಕಾರಿ ಹಣ ಲೂಟಿ ಆರೋಪ

ಮಂಡ್ಯದ ಪಿಡಿಓ ಶಶಿಧರ್, ಸಮಾಜಸೇವಕನಂತೆ ಪೋಸ್ ನೀಡುತ್ತಾ, 15ನೇ ಹಣಕಾಸು ಯೋಜನೆಯ ₹1.5 ಕೋಟಿಗೂ ಹೆಚ್ಚು ಸರ್ಕಾರಿ ಅನುದಾನ ದುರುಪಯೋಗಪಡಿಸಿಕೊಂಡ ಆರೋಪದಡಿ ಅಮಾನತುಗೊಂಡಿದ್ದಾರೆ. ಇಲಾಖಾ ತನಿಖೆಯಲ್ಲಿ ಹಣ ಲೂಟಿ ಸಾಕ್ಷಿ ಸಮೇತ ಬಯಲಾಗಿದೆ. ಇದು ಇವರ ಎರಡನೇ ಅಮಾನತಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಳ್ಳಿಗಳ ಅಭಿವೃದ್ಧಿಗೆ ಬರಬೇಕಿದ್ದ ಹಣವನ್ನು ಲಪಟಾಯಿಸಿ 'ಹೀರೋ' ಆಗುತ್ತಿದ್ದ ಶಶಿಧರ್ ನಿಜ ಬಣ್ಣ ಬಯಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಶೋಕಿ ಮಾಡುತ್ತಿದ್ದ ಪಿಡಿಒ ಶಶಿಧರ್ ಸಸ್ಪೆಂಡ್: 1.5 ಕೋಟಿ ರೂ.ಗೂ ಹೆಚ್ಚು ಸರ್ಕಾರಿ ಹಣ ಲೂಟಿ ಆರೋಪ
ಸರ್ಕಾರಿ ಹಣ ದುರುಪಯೋಗ
ದಿಲೀಪ್​, ಚೌಡಹಳ್ಳಿ
| Edited By: |

Updated on: Sep 01, 2026 | 10:03 PM

Share

ಮಂಡ್ಯ, ಸೆ.1: ಸೋಷಿಯಲ್ ಮೀಡಿಯಾದಲ್ಲಿ ಸಮಾಜಸೇವಕನಂತೆ ಪೋಸ್ ನೀಡುತ್ತಾ, ಹಿಂಬಾಲಕರೊಂದಿಗೆ ಓಡಾಡಿಕೊಂಡು ‘ಬಿಲ್ಡಪ್’ ನೀಡುತ್ತಿದ್ದ ಪಂಚಾಯತಿ ಅಭಿವೃದ್ಧಿ ಅಧಿಕಾರಿಯೊಬ್ಬರ (PDO) ಅಸಲಿ ಬಣ್ಣ ಬಯಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಕೋಟ್ಯಾಂತರ ರೂಪಾಯಿ ಸರ್ಕಾರಿ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಡಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಆತಗೂರು ಗ್ರಾ.ಪಂ. ಪಿಡಿಒ ಶಶಿಧರ್ ಅವರನ್ನು ಮಂಡ್ಯ ಜಿಲ್ಲಾ ಪಂಚಾಯತ್ ಸಿಇಓ ಕೆ.ಆರ್. ನಂದಿನಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಆತಗೂರು ಹಾಗೂ ತಗ್ಗಹಳ್ಳಿ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ 15ನೇ ಹಣಕಾಸು ಯೋಜನೆಯ ಬರೋಬ್ಬರಿ 1.5 ಕೋಟಿ ರೂ.ಗೂ ಅಧಿಕ ಹಣವನ್ನು ಪಿಡಿಒ ಶಶಿಧರ್ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಕೇಳಿಬಂದಿತ್ತು. ಸಲ್ಲಿಕೆಯಾಗಿದ್ದ ದೂರಿನ ಅನ್ವಯ ಮಂಡ್ಯ ಜಿ.ಪಂ ಸಿಇಓ ಕೆ.ಆರ್. ನಂದಿನಿ ಅವರು ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತಂಡವು ಡಿ.ಸಿ. ಬಿಲ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಸಾಲು ಸಾಲು ಲೋಪಗಳು ಹಾಗೂ ಹಣ ಲೂಟಿಯಾಗಿರುವುದು ಸಾಕ್ಷಿ ಸಮೇತ ಪತ್ತೆಯಾಗಿದೆ.

ತನಿಖಾ ವರದಿ ಕೈಸೇರುತ್ತಿದ್ದಂತೆ ಆಕ್ಷನ್‌ನಲ್ಲಿ ಇಳಿದ ಸಿಇಓ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಶಶಿಧರ್‌ನನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಪಿಡಿಒ ಶಶಿಧರ್‌ಗೆ ಇದು ಮೊದಲೇನಲ್ಲ. ಈ ಹಿಂದೆ ಹಲಗೂರು ಗ್ರಾಮ ಪಂಚಾಯತಿ ಪಿಡಿಒ ಆಗಿದ್ದ ಸಂದರ್ಭದಲ್ಲೂ ಇದೇ ರೀತಿ ಸರ್ಕಾರಿ ಹಣ ಲಪಟಾಯಿಸಿ ಸೇವೆಯಿಂದ ಸಸ್ಪೆಂಡ್ ಆಗಿದ್ದ. ಹಳೆ ಚಾಳಿಯನ್ನು ಮುಂದುವರಿಸಿ ಮತ್ತೆ ಅದೇ ಕಳ್ಳಾಟವಾಡಿ ಇದೀಗ ಎರಡನೇ ಬಾರಿಗೆ ಅಮಾನತಿನ ಬಲೆಗೆ ಬಿದ್ದಿದ್ದಾನೆ.

ಇದನ್ನೂ ಓದಿ: ವಿಕಲಚೇತನರ ಪಿಂಚಣಿಗೆ ಲಂಚ ಪಡೆದಿದ್ದ ಉಪ ತಹಶೀಲ್ದಾರ್‌ಗೆ 4 ವರ್ಷ ಜೈಲು, 40 ಸಾವಿರ ರೂ. ದಂಡ

ಸಾಮಾನ್ಯ ಪಿಡಿಒ ಆಗಿದ್ದುಕೊಂಡು ಲಕ್ಷ ಲಕ್ಷ ಖರ್ಚು ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಬಿಲ್ಡಪ್ ಕೊಡುವ ಹಾಗೂ ಸಮಾಜಸೇವೆ ಹೆಸರಿನಲ್ಲಿ ಶೋಕಿ ಮಾಡುವ ಹಣ ಎಲ್ಲಿಂದ ಬಂತು? ಹಳ್ಳಿಗಳ ಅಭಿವೃದ್ಧಿಗೆ ಬರಬೇಕಿದ್ದ ಸರ್ಕಾರಿ ಹಣವನ್ನೇ ಲಪಟಾಯಿಸಿ ಈತ ‘ಹೀರೋ’ ಆಗುತ್ತಿದ್ದನಾ ಎಂದು ಸ್ಥಳೀಯರು ಹಾಗೂ ದೂರುದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸಿಇಓ ಕ್ರಮವನ್ನು ಸ್ವಾಗತಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ