AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಸರಿಗೆ ವಿದ್ಯಾರ್ಥಿಗಳು, ಮಾಡ್ತಿದ್ದಿದ್ದು ದರೋಡೆ: ಮಂಡ್ಯ ಪೊಲೀಸರಿಂದ ಮೂವರು ಅರೆಸ್ಟ್​

ಬಸ್​​ಗಾಗಿ ಕಾಯುವವರನ್ನು ಟಾರ್ಗೆಟ್​​ ಮಾಡಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ಅನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ. ಕಾರಿನಲ್ಲಿ ಡ್ರಾಪ್ ಮಾಡುವುದಾಗಿ ಹೇಳಿ ಹತ್ತಿಸಿಕೊಳ್ಳುತ್ತಿದ್ದ ಗ್ಯಾಂಗ್, ಮಂಡ್ಯದ ನಿರ್ಜನ ಪ್ರದೇಶದ ಬಳಿ ಬರ್ತಿದ್ದಂತೆ ಕತ್ತಿಗೆ ಹಗ್ಗ ಹಾಕಿ ಬೆದರಿಸಿ ರಾಬರಿ ಮಾಡುತ್ತಿತ್ತು.

ಹೆಸರಿಗೆ ವಿದ್ಯಾರ್ಥಿಗಳು, ಮಾಡ್ತಿದ್ದಿದ್ದು ದರೋಡೆ: ಮಂಡ್ಯ ಪೊಲೀಸರಿಂದ ಮೂವರು ಅರೆಸ್ಟ್​
ಬಂಧಿತ ಆರೋಪಿಗಳು
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 20, 2025 | 9:44 AM

Share

ಮಂಡ್ಯ, ನವೆಂಬರ್​ 20: ಎಟಿಎಂಗಳಿಗೆ ಹಣ ಪೂರೈಸಲು ಹಣ ಕೊಂಡೊಯ್ಯುತ್ತಿದ್ದ ವಾಹನವನ್ನು ಅಡ್ಡಗಟ್ಟಿ 7.1 ಕೋಟಿ ರೂಪಾಯಿ ದೋಚಿರುವ ಘಟನೆ ರಾಜ್ಯವನ್ನು ಬೆಚ್ಚಿ ಬೀಳಿಸಿರುವ ನಡುವೆ, ದರೋಡೆ ನಡೆಸುತ್ತಿದ್ದ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ತಂಡವನ್ನು ಮಂಡ್ಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರು ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಇಂಜಿನಿಯರಿಂಗ್​ ವಿದ್ಯಾರ್ಥಿಗಳು ಎಂಬುದು ಗೊತ್ತಾಗಿದೆ.

ಬಸ್‌ಗಾಗಿ ಕಾಯುವವರೇ ಟಾರ್ಗೆಟ್

ಕೆಂಗೇರಿ ಬಸ್ ನಿಲ್ದಾಣ ಬಳಿ ಬಸ್‌ಗಾಗಿ ಕಾಯುವವರನ್ನೇ ಟಾರ್ಗೆಟ್​​ ಮಾಡಿ ಈ ವಿದ್ಯಾರ್ಥಿಗಳ ಗ್ಯಾಂಗ್​​ ರಾಬರಿ ಮಾಡುತ್ತಿತ್ತು. ಕಾರಿನಲ್ಲಿ ಡ್ರಾಪ್ ಮಾಡುವುದಾಗಿ ಹೇಳಿ ಹತ್ತಿಸಿಕೊಳ್ಳುತ್ತಿದ್ದ ಗ್ಯಾಂಗ್, ಮಂಡ್ಯದ ನಿರ್ಜನ ಪ್ರದೇಶದ ಬಳಿ ಬರ್ತಿದ್ದಂತೆ ಕತ್ತಿಗೆ ಹಗ್ಗ ಹಾಕಿ ಬೆದರಿಸಿ ಫೋನ್, ಜೇಬಿನಲ್ಲಿದ್ದ ಹಣ ದರೋಡೆ ಮಾಡುತ್ತಿತ್ತು. ಆರೋಪಿಗಳು ಫೋನ್ ಪೇ ಮೂಲಕ ಬೆಟ್ಟಿಂಗ್ ಆ್ಯಪ್‌ಗಳಿಗೆ ಹಣ ರವಾನೆ ಮಾಡಿಸಿಕೊಳ್ಳುತ್ತಿದ್ದರು. ದರೋಡೆ ಮಾಡಲು ಹೊರರಾಜ್ಯದ ಕಾರನ್ನ ಗ್ಯಾಂಗ್​​ ಬಾಡಿಗೆ ಪಡೆದಿತ್ತು ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಇದನ್ನೂ ಓದಿ:  ಬೆಂಗಳೂರಲ್ಲಿ 7 ಕೋಟಿ ದರೋಡೆ​, ವೆಬ್​​ ಸೀರೀಸ್​ನಿಂದ ಪ್ರೇರಿತರಾಗಿದ್ರಾ ರಾಬರ್ಸ್?

ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಕಿರಣ್​​, ಕುಶಾಲ್​ ಬಾಬು ಜೊತೆಗೆ ಗೋಕುಲ್ ಬಂಧಿತ ಆರೋಪಿಗಳಾಗಿದ್ದು, ಆನ್​ಲೈನ್​​ ಬ್ಯುಸಿನೆಸ್​ ನೆಪದಲ್ಲಿ ಮೂವರು ವಿದ್ಯಾರ್ಥಿಗಳು ಒಂದಾಗಿದ್ದರು. ದರೋಡೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನ ನಡೆಸುತ್ತಿದ್ದರು. ಪೋಷಕರಿಗೆ ಪಿಜಿಯಲ್ಲಿರುವುದಾಗಿ ಹೇಳಿದ್ದ ಇವರು, ಅಪಾರ್ಟ್​ಮೆಂಟ್​ನಲ್ಲಿ ಮನೆ ಬಾಡಿಗೆ ಪಡೆದು ವಾಸವಿದ್ದರು. ವಿರಾಜಪೇಟೆಯ ಅಬ್ದುಲ್ ಜಲೀಲ್, ಮೈಸೂರಿನ ಯತೀಂದ್ರ ಬಳಿ ಗ್ಯಾಂಗ್​ ದರೋಡೆ ಮಾಡಿತ್ತು. ಮಂಡ್ಯದ ತೂಬಿನಕೆರೆ, ಕರಿಘಟ್ಟ ಬಳಿ ನಡೆದಿದ್ದ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆನ್ನತ್ತಿದ ಪೊಲೀಸರು ಸಿಕ್ಕ ತಾಂತ್ರಿಕ ಸುಳಿವು ಹಿಡಿದು ದರೋಡೆಕೋರರ ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ. ಮಂಡ್ಯ, ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದರೋಡೆ ಬಗ್ಗೆ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ಮೈಸೂರು ರಸ್ತೆ ಕಳ್ಳರ ಹಾಟ್​ ಸ್ಪಾಟ್​ ಆಗಿ ಮಾರ್ಪಟ್ಟಿದೆ. ಸರ್ವೀಸ್​ ರಸ್ತೆಯಲ್ಲಿ ದರೋಡೆ, ಕಳ್ಳತನ ಪ್ರಕರಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ರಾತ್ರಿ ವೇಳೆ ಬೈಕ್​ನಲ್ಲಿ ಬರುವ, ಹೆದ್ದಾರಿ ಪಕ್ಕದಲ್ಲಿ ವಾಹನ ನಿಲ್ಲಿಸಿ ನಿದ್ರೆ ಮಾಡುವವರನ್ನೇ ಟಾರ್ಗೆಟ್ ಮಾಡಿ ಕಳ್ಳತನ, ದರೋಡೆ ಮಾಡುವ ಕೆಲಸಗಳು ವರದಿಯಾಗಿವೆ. ತಮಿಳುನಾಡು ಪೊಲೀಸರನ್ನೇ ಇಲ್ಲಿ ಕಳ್ಳರು ದೋಚಿದ್ದಾರೆ ಎಂದು ಇತ್ತೀಚೆಗಷ್ಟೇ ಸ್ಥಳೀಯರು ಆರೋಪಿಸಿದ್ದರು. ಆ ಬೆನ್ನಲ್ಲೇ ಅಂತಹುದೇ ಘಟನೆ ಸಂಬಂಧ ಆರೋಪಿಗಳನ್ನ ಬಂಧಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್