AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಹತ್ಯೆ ಮಾಡಿ ಕುಂದೂರು ನಾಲೆಗೆ ಹಾಕಿ ಬಂದಿದ್ದ ಪತಿರಾಯ ವಾರದ ಬಳಿಕ ಅರೆಸ್ಟ್ ಆದ, ಹೇಗೆ?

ಸಂಧ್ಯಾ ಪತಿ ಷಡಕ್ಷರಿ ಆಸ್ಪತ್ರೆಯಿಂದ ಬಿಡುಗಡೆಯಾಗುವರೆಗೂ ಕಾದಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರಂಭದಲ್ಲಿ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದ ಹಂತಕ ಆರೋಪಿ, ಪೊಲೀಸರ ಟ್ರಿಟ್ಮೆಂಟ್ ಬಳಿಕ ತಪ್ಪೊಪ್ಪಿಗೆ ನೀಡಿದ್ದಾನೆ.

ಪತ್ನಿಯ ಹತ್ಯೆ ಮಾಡಿ ಕುಂದೂರು ನಾಲೆಗೆ ಹಾಕಿ ಬಂದಿದ್ದ ಪತಿರಾಯ ವಾರದ ಬಳಿಕ ಅರೆಸ್ಟ್ ಆದ, ಹೇಗೆ?
ಪತ್ನಿಯ ಹತ್ಯೆ ಮಾಡಿ ಕುಂದೂರು ನಾಲೆಗೆ ಹಾಕಿ ಬಂದಿದ್ದ ಪತಿರಾಯ ವಾರದ ಬಳಿಕ ಅರೆಸ್ಟ್ ಆದ, ಹೇಗೆ?
TV9 Web
| Edited By: |

Updated on: Nov 22, 2021 | 11:29 AM

Share

ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದ್ದ ಮಹಿಳೆಯ ನಿಗೂಢ ಹತ್ಯೆಯ ರಹಸ್ಯ ವಾರದ ಬಳಿಕ ಬಯಲಾಗಿದೆ. ಪತ್ನಿಯನ್ನು ಪತಿರಾಯನೇ ಕೊಂದು, ವಿಷ ಸೇವಿಸಿ ತಾನೇ ಆಸ್ಪತ್ರೆ ಸೇರಿದ್ದು ಪ್ರಕರಣದ ರಹಸ್ಯಯವಾಗಿದೆ. 23 ವರ್ಷದ ಸಂಧ್ಯಾ ಗಂಡನಿಂದಲೇ ಕೊಲೆಯಾಗಿರುವವರು. ಪ್ರಕರಣ ಏನೆಂದರೆ ಒಂದೂವರೆ ವರ್ಷದ ಹಿಂದಷ್ಟೇ ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಷಡಕ್ಷರಿ ಎಂಬಾತನನ್ನು ಸಂಧ್ಯಾ ಮದುವೆಯಾಗಿದ್ದರು. ದಾಂಪತ್ಯದಲ್ಲಿ ಬಿರುಕು ಸೃಷ್ಟಿಯಾಗಿ ಇತ್ತೀಚೆಗೆ ಗಂಡ ಮತ್ತು ಹೆಂಡತಿ ದೂರವಾಗಿದ್ದರು. ಸಂಧ್ಯಾ ತಮ್ಮ ತವರಿನಲ್ಲಿ, ತಂದೆಯ ಮನೆಯಲ್ಲಿದ್ದುಕೊಂಡು ಕಂಪ್ಯೂಟರ್ ತರಬೇತಿ ಪಡೆಯುತ್ತಿದ್ದರು.

ನವೆಂಬರ್ 16ರಂದು ಕಂಪ್ಯೂಟರ್ ಕ್ಲಾಸ್ ಗೆ ಹೋಗಿದ್ದ ಸಂಧ್ಯಾ ನಿಗೂಢವಾಗಿ ನಾಪತ್ತೆಯಾಗಿದ್ದರು. ಮನೆಗೆ ಮಗಳು ಬಾರದಿದ್ದಕ್ಕೆ ಬೆಳಕವಾಡಿ ಪೊಲೀಸ್ ಗೆ ತಂದೆ ನಾಪತ್ತೆ ದೂರು ನೀಡಿದ್ದರು. ಮತ್ತೊಂದೆಡೆ, ಪತಿ ಷಕಡ್ಷರಿ ವಿಷ ಸೇವಿಸಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸೇರಿದ್ದ.

ಆಸ್ಪತ್ರೆಯಿಂದ ಬಿಡುಗಡೆಯಾಗುವರೆಗೂ ಕಾದಿದ್ದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರಂಭದಲ್ಲಿ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದ ಹಂತಕ, ಪೊಲೀಸರ ಟ್ರಿಟ್ಮೆಂಟ್ ಬಳಿಕ ತಪ್ಪೊಪ್ಪಿಗೆ ನೀಡಿದ್ದಾನೆ.

ಪತಿ ಷಕಡ್ಷರಿ, ಕಂಪ್ಯೂಟರ್ ಕ್ಲಾಸ್ ನಿಂದ ಪತ್ನಿಯನ್ನು ಕರೆದುಕೊಂಡು ಬಂದು ಕೊಲೆ ಮಾಡಿದ್ದ. ಕುಂದೂರು ಬಳಿಯ ಬೆಟ್ಟದಲ್ಲಿ ಕೊಲೆ ಮಾಡಿ ನಾಲೆಗೆ ಹಾಕಿದ್ದ. ಮರ್ಡರ್ ಬಳಿಕ, ವಿಷ ಸೇವಿಸಿ ತಾನೇ ಆಸ್ಪತ್ರೆಗೆ ದಾಖಲಾಗಿದ್ದ. ಪ್ರಕರಣದಿಂದ ತಪ್ಪಿಸಿಕೊಳ್ಳಲು ಪ್ಲಾನ್ ಮಾಡಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ ಹಂತಕ ಪತಿ. ಪೊಲೀಸರು ಆರೋಪಿಯನ್ನು ಬಂಧಿಸಿ, ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Bengaluru Rain: ಗ್ರೌಂಡ್​ ಫ್ಲೋರ್​ನಲ್ಲಿ ಜೀವಿಸೋಕೆ ಸಾಧ್ಯನೇ ಇಲ್ಲ ಎಂದ ನಿವಾಸಿ |Tv9 Kannada

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?