ಸಿಎಂ ಸಹಿ ನಕಲು ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದವ ಅರೆಸ್ಟ್​

ಮಂಡ್ಯದಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹೆಚ್.ಸಿ.ವೆಂಕಟೇಶ್ ಎಂಬಾತ ಎರಡು ಕೋಟಿ ರೂಪಾಯಿಗೂ ಅಧಿಕ ಹಣವನ್ನು ಸುಲಿಗೆ ಮಾಡಿ, ನಕಲಿ ನೇಮಕಾತಿ ಪತ್ರಗಳನ್ನು ನೀಡಿದ್ದಾನೆ.ಪೊಲೀಸರು ನಕಲಿ ದಾಖಲೆಗಳು ಮತ್ತು ನಕಲಿ ಸರ್ಕಾರಿ ಲೋಗೋಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಎಂ ಸಹಿ ನಕಲು ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದವ ಅರೆಸ್ಟ್​
ಆರೋಪಿ ವೆಂಕಟೇಶ್​
Edited By: ವಿವೇಕ ಬಿರಾದಾರ

Updated on: Feb 22, 2025 | 11:21 AM

ಮಂಡ್ಯ, ಫೆಬ್ರವರಿ 22: ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳ ಹೆಸರು ಹಾಗೂ ಸಹಿ ನಕಲು ಮಾಡಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ (Farud) ಆರೋಪಿಯನ್ನು ಮಂಡ್ಯ (Mandya) ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ನಗರದ ತಾವರೆಗೆರೆ ನಿವಾಸಿ ಹೆಚ್.ಸಿ.ವೆಂಕಟೇಶ್ ಬಂಧಿತ ಆರೋಪಿ.

ಆರೋಪಿ ಹೆಚ್.ಸಿ.ವೆಂಕಟೇಶ್ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿ ಎರಡು ಕೋಟಿ ರೂಪಾಯಿಗೂ ಅಧಿಕ ಹಣ ಸುಲಿಗೆ ಮಾಡಿದ್ದನು. ಹಣ ನೀಡಿದ ಬಳಿಕ, ನಕಲಿ ನೇಮಕಾತಿ ಪತ್ರವನ್ನು ಸಂತ್ರಸ್ತರಿಗೆ ನೀಡುತ್ತಿದ್ದನು. ಅಬಕಾರಿ ಇಲಾಖೆಯಲ್ಲಿ ಚಾಲಕ ಹುದ್ದೆ ಕೊಡಿಸುತ್ತೇನೆಂದು ಓರ್ವರಿಂದ ನಕಲಿ ದಾಖಲೆ ಸೃಷ್ಟಿಸಿ ಮೂವರಿಂದ 45 ಲಕ್ಷ ರೂ. ಪಡೆದು ವಂಚಿಸಿದ್ದಾನೆ.

ಆರೋಪಿ ವೆಂಕಟೇಶ್​​ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ಪ್ರತ್ಯೇಕ 3 ಪ್ರಕರಣ ದಾಖಲಾಗಿವೆ. 316(2), 318(4), 336(3), 61, 351(2), 3(5) ಅಡಿ ಪ್ರಕರಣ ದಾಖಲಾಗಿವೆ.

ಇದನ್ನೂ ಓದಿ: ಹೇಮಾವತಿ ಎಡದಂಡೆ ನಾಲೆ ಆಧುನೀಕರಣ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

ಆರೋಪಿ ವೆಂಕಟೇಶ್​​ ಬಳಿ ಇದ್ದ ಕೆಪಿಎಸ್​ಸಿ, ಅಬಕಾರಿ, ವಾಣಿಜ್ಯ ತೆರಿಗೆ, ನಗರಾಭಿವೃದ್ಧಿ ಇಲಾಖೆ, ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪತ್ರ ಸ್ಥಳ ನಿಯೋಜಿಸಿ ಆದೇಶ ಹೊರಡಿಸಿರುವ ನಕಲಿ ನೇಮಕಾತಿ ಪತ್ರಗಳು, ದಾಖಲೆಗಳು, ಹಾಜರಾತಿ ಪುಸ್ತಕಗಳು, ಸರ್ಕಾರದ ಲೋಗೋ, ನಕಲಿ ಐಡಿ ಕಾರ್ಡ್, ಟ್ಯಾಗ್​ಳನ್ನು​ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ವೆಂಕಟೇಶ್​ ವಿವಿಧ ಇಲಾಖೆಗಳ ನಕಲಿ ಲೆಟರ್ ಹೆಡ್, ಸೀಲು, ಅಧಿಕಾರಿಗಳ ಸಹಿ ಕೂಡ ನಕಲು ಮಾಡುತ್ತಿದ್ದನು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:34 am, Sat, 22 February 25

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us