AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ, ಡಿಜಿಪಿ ಸೂಚನೆ

ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ತಪಾಸಣೆ ವೇಳೆ ಮಗು ಮೃತಪಟ್ಟ ಘಟನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ, ಹೊಸ ಸೂಚನೆಗಳನ್ನು ಹೊರಡಿಸಿದೆ. ವಾಹನ ತಪಾಸಣೆ ವೇಳೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯಗೊಳಿಸಲಾಗಿದೆ. ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂರಿಂದ ಸುತ್ತೋಲೆ ಹೊರಡಿಸುವ ಮೂಲಕ ಖಡಕ್​ ಸೂಚನೆ ನೀಡಲಾಗಿದೆ.

ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಕಾರಣವಿಲ್ಲದೇ ವಾಹನ ತಡೆಯುವಂತ್ತಿಲ್ಲ, ಡಿಜಿಪಿ ಸೂಚನೆ
ಪ್ರಾತಿನಿಧಿಕ ಚಿತ್ರ
ದಿಲೀಪ್​, ಚೌಡಹಳ್ಳಿ
| Edited By: |

Updated on: Jun 01, 2025 | 10:41 AM

Share

ಮಂಡ್ಯ, ಜೂನ್​ 01: ಹೆಲ್ಮೆಟ್ ತಪಾಸಣೆ ಮಾಡುವ ವೇಳೆ ಪೊಲೀಸರು (police) ಮಾಡಿದ ಯಡವಟ್ಟಿನಿಂದ ಜಿಲ್ಲೆಯ ಮದ್ದೂರು ತಾಲೂಕಿ ಗೊರವನಹಳ್ಳಿಯ ಮೂರು ವರ್ಷ ಹೃತೀಕ್ಷ ಎಂಬ ಬಾಲಕಿ ಸಾವನ್ನಪ್ಪಿದ್ದಳು (death). ಸದ್ಯ ಈ ಪ್ರಕರಣದಿಂದ ಎಚ್ಚೆತ್ತಿರುವ ಪೊಲೀಸ್​ ಇಲಾಖೆ ಕೆಲ ಹೊಸ ನಿಯಮಗಳನ್ನು ಬಿಡುಗಡೆ ಮಾಡಿದೆ. ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂರಿಂದ ಸುತ್ತೋಲೆ ಹೊರಡಿಸುವ ಮೂಲಕ ಪೊಲೀಸ್​ ಸಿಬ್ಬಂದಿಗೆ ಖಡಕ್​ ಸೂಚನೆ ನೀಡಿದ್ದಾರೆ.

ಟ್ರಾಫಿಕ್ ಪೊಲೀಸರು ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದೇ ಇರುವುದು ಪತ್ತೆ ಆಗಿದೆ. ಪರಿಣಾಮ ಸಾರ್ವಜನಿಕರು ಹಾಗೂ ಪೊಲೀಸರ ಜೀವಕ್ಕೆ ಅಪಾಯ ಉಂಟಾಗುತ್ತಿವೆ. ಈ ನಿಟ್ಟಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗೆ ಕೆಲ ನಿರ್ದೇಶನಗಳನ್ನು ಪಾಲಿಸುವಂತೆ ಸುರಕ್ಷತಾ ಕ್ರಮಗಳ ಬಗ್ಗೆ ಸುತ್ತೋಲೆ ಹೊರಡಿಸಲಾಗಿದೆ.

ಸುತ್ತೋಲೆಯಲ್ಲಿ ಏನಿದೆ?

  • ಪೊಲೀಸರು ದಾಖಲೆ ಪರಿಶೀಲನೆಗೆ ಕಾರಣವಿಲ್ಲದೇ ವಾಹನಗಳನ್ನು ತಡೆದು ತಪಾಸಣೆಗೊಳಪಡಿಸುವಂತಿಲ್ಲ.
  • ನಿಯಮ ಉಲ್ಲಂಘನೆ ಕಂಡುಬಂದರೆ ಮಾತ್ರವೇ ನಿಲ್ಲಿಸಬೇಕು.
  • ರಸ್ತೆಯಲ್ಲಿ ದಿಢೀರನೇ ಅಡ್ಡಬಂದು ವಾಹನ ನಿಲ್ಲಿಸುವಂತಿಲ್ಲ.
  • ಬೈಕ್‌ನ ಹಿಂಬದಿ ಸವಾರನನ್ನು ಹಿಡಿದು ಎಳೆಯುವಂತಿಲ್ಲ, ವಾಹನಗಳ ಕೀ ತೆಗೆದುಕೊಳ್ಳುವಂತಿಲ್ಲ.
  • ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಬೆನ್ನತ್ತುವಂತಿಲ್ಲ. ಬದಲಿಗೆ ವಾಹನದ ನೋಂದಣಿ ಸಂಖ್ಯೆ ಗುರುತಿಸಿ ನಿಯಂತ್ರಣ ಕೊಠಡಿಗೆ ಮಾಹಿತಿ ರವಾನಿಸಬೇಕು.
  • ಹೆದ್ದಾರಿಗಳಲ್ಲಿ ಜಿಗ್​​ಜಾಗ್ ಬ್ಯಾರಿಕೇಡ್ ಹಾಕುವಂತಿಲ್ಲ. ಬ್ಯಾರಿಕೇಡ್​ಗಳನ್ನ​​ ಹಾಕಿ ವಾಹನಗಳನ್ನ ತಡೆಯಬಾರದು.

ಇದನ್ನೂ ಓದಿ: ಮಂಡ್ಯದಲ್ಲೊಂದು ಮನಕಲಕುವ ಘಟನೆ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು

ಇದನ್ನೂ ಓದಿ
Image
ಮಗುವಿನ ಪೋಷಕರ ಬೇಡಿಕೆಗಳನ್ನು ಪರಿಗಣಿಸಲಾಗಿದೆ: ಮಲ್ಲಿಕಾರ್ಜುನ ಬಾಲದಂಡಿ
Image
ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಸಾವು :ಮೂವರು ಎಎಸ್​ಐಗಳು ಸಸ್ಪೆಂಡ್
Image
ಮಂಡ್ಯದಲ್ಲೊಂದು ಮನಕಲಕುವ ಘಟನೆ: ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮಗು ಸಾವು
Image
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
  • ತಪಾಸಣೆ ವೇಳೆ ರಿಫ್ಲೆಕ್ಟಿವ್ ಜಾಕೆಟ್ ಧರಿಸಿರಬೇಕು.
  • ಕಡ್ಡಾಯವಾಗಿ LED ಬಟನ್​​ ಗಳನ್ನು ಉಪಯೋಗಿಸಬೇಕು.
  • ತಪಾಸಣೆ ವೇಳೆ ಖಡ್ಡಾಯ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು.
  • ಐಟಿಎಂಎಸ್ ಮೂಲಕ ಪ್ರಕರಣ ದಾಖಲಿಸಬೇಕು.
  • ಅನಾಹುತಗಳನ್ನು ತಪ್ಪಿಸಲು ಸಂಚಾರ ನಿಯಮ ಪಾಲನೆಗೆ ಜಾಗೃತಿ ಕಾರ್ಯಕ್ರಮ ಕೈಗೊಳ್ಳುವುದು.
  • ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಅತಿ-ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವಂತಿಲ್ಲ. ಅಂತವರ ವಿರುದ್ಧ ಎಫ್.ಟಿ.ವಿ.ಆರ್ ದಾಖಲಿಸಲು ತಂತ್ರಜ್ಞಾನ ಆಧಾರಿತ ನಿಯಮ ಅನುಸರಿಸುವುದು.
  • ವಾಹನಗಳ ವೇಗವನ್ನು ಇಳಿಸಲು 150 ಮೀಟರ್ ಮೊದಲೇ ರಿಫ್ಲೆಕ್ಟಿವ್ ಅಳವಡಿಸುವುದು.

ಇದನ್ನೂ ಓದಿ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮಗು ಸಾವು: ಮೂವರು ಎಎಸ್​ಐಗಳು ಸಸ್ಪೆಂಡ್

  • ರಾತ್ರಿ ವೇಳೆ ಸಂಚಾರ ಸಿಗ್ನಲ್ ಜಂಕ್ಷನ್​​ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡಬೇಕು.
  • ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಾಕಾಬಂಧಿ ಪ್ರಕ್ರಿಯೆಗಳನ್ನು ಹೆದ್ದಾರಿಗಳಲ್ಲಿ ನಡೆಯಬಾರದು.
  • ತಪಾಸಣೆಯ ಸಂದರ್ಭದಲ್ಲಿ ಸಂಚಾರ ಪೊಲೀಸರ ಸಹಕಾರ ಪಡೆದುಕೊಳ್ಳಬೇಕು. ಸುತ್ತೋಲೆಯ ಎಲ್ಲಾ ಅಂಶಗಳ ಖಡ್ಡಾಯ ಪಾಲನೆಗೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು